NWKRTC: ದೈನಂದಿನ ಆದಾಯ ಸಂಗ್ರಹದಲ್ಲಿ ಇತಿಹಾಸ ಸೃಷ್ಟಿ- ಸಂಸ್ಥೆಯ ಪ್ರತಿ ಸಿಬ್ಬಂದಿಗೂ ಸಿಹಿ ಹಂಚಿ ಸಂಭ್ರಮ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಇತಿಹಾಸಲ್ಲಿಯೇ ಅತೀ ಹೆಚ್ಚಿನ ದೈನಂದಿನ ಸಾರಿಗೆ ಆದಾಯ ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ-ಅಧಿಕಾರಿಗಳಿಗೆ ಸಿಹಿ ಹಂಚಿ ಇಂದು ಸಂಭ್ರಮಾಚರಣೆ ಮಾಡಲಾಯಿತು.
ಕಳೆದ ಏಪ್ರಿಲ್ 21 ಹಾಗೂ ಇದೇ ಮೇ 19 ರಂದು ಸಂಸ್ಥೆಯ ದೈನಂದಿನ ಸಾರಿಗೆ ಆದಾಯವು ಕ್ರಮವಾಗಿ ₹1019.37 ಲಕ್ಷ (10ಕೋಟಿ 19 ಲಕ್ಷದ 37 ಸಾವಿರ) ಮತ್ತು 1009.11 (10ಕೋಟಿ 9ಲಕ್ಷದ11ಸಾವಿರ) ಲಕ್ಷ ರೂ.ಗಳು ಸಂಗ್ರಹವಾಗಿದೆ.
ಈ ಹಿನ್ನೆಲೆಯಲ್ಲಿ ಸಂಸ್ಥೆಯಲ್ಲಿ ಇಂದು ಮೇ 21ರಂದು ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಮಾತನಾಡಿದಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾರಿಗೆ ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ಎಲ್ಲ ಸಿಬ್ಬಂದಿ-ಅಧಿಕಾರಿಗಳಿಗೆ ಕರೆ ನೀಡಿದರು.
ಇನ್ನು ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿ, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ ಹಾಗೂ ಪ್ರಾಚಾರ್ಯರು, ಪ್ರಾದೇಶಿಕ ತರಬೇತಿ ಕೇಂದ್ರಗಳಲ್ಲಿ ಏ. 21 ಹಾಗೂ ಮೇ 19 ರಂದು ಸಂಸ್ಥೆಯ ದೈನಂದಿನ ಸಾರಿಗೆ ಆದಾಯ10 ಕೋಟಿ ರೂ.ಗಳು ಬಂದಿದೆ. ಈ ದೈನಂದಿನ ಸಾರಿಗೆ ಆದಾಯವು ಸಂಸ್ಥೆಯ ಇತಿಹಾಸದಲ್ಲಿಯೇ 10 ಕೋಟಿ ರೂ.ಗಳ ಮೈಲಿಗಲ್ಲು ಸ್ಥಾಪಿಸಿದೆ ಎಂದು ಸಂತಸ ಹಂಚಿಕೊಂಡರು.
ಈ ಆದಾಯವು ಸಂಸ್ಥೆಯು ಪ್ರಾರಂಭವಾದ ದಿನದಿಂದಲೂ ಇಲ್ಲಿಯವರೆಗಿನ ದೈನಂದಿನ ಸಂಗ್ರಹವಾದ ಸಂಸ್ಥೆಯ ಅತೀ ಹೆಚ್ಚಿನ ಆದಾಯವಾಗಿದ್ದು, ಇದಕ್ಕೆ ಸಂಸ್ಥೆಯ ಕಾರ್ಮಿಕರು, ಸಿಬ್ಬಂದಿಗಳು, ಅಧಿಕಾರಿಗಳ ಪರಿಶ್ರಮ ಕಾರಣವಾಗಿರುವುದನ್ನು ಪರಿಗಣಿಸಿ ಸಂಸ್ಥೆಯ ಸಿಬ್ಬಂದಿ -ಅಧಿಕಾರಿಗಳಿಗೆ ಸಿಹಿ ಹಂಚಲು ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರು ಅನುಮೋದನೆ ನೀಡಿದ್ದಾರೆ.
ಹೀಗಾಗಿ ವೆಚ್ಚದ ಪರಿಮಿತಿಯಲ್ಲಿ ಸಿಹಿ ಹಂಚಲು ಕ್ರಮಕೈಗೊಂಡು ಇಂದು ಸಿಹಿ ಹಂಚಲಾಗಿದ್ದು, ಅದಕ್ಕಾಗಿ ಕೇಂದ್ರ ಕಚೇರಿಗೆ (ಎಲ್ಲ ಇಲಾಖೆ) ₹2,500, ಪ್ರಾದೇಶಿಕ ತರಬೇತಿ ಕೇಂದ್ರಕ್ಕೆ ₹1,000, ಪ್ರಾದೇಶಿಕ ಕಾರ್ಯಾಗಾರಗಳಿಗೆ 1,000, ವಿಭಾಗೀಯ ಕಚೇರಿಗಳಿಗೆ ₹1,000, ವಿಭಾಗೀಯ ಕಾರ್ಯಾಗಾರಗಳಿಗೆ ₹1,000, ಪ್ರತಿ ಘಟಕಗಳಿಗೆ (100 ಅನುಸೂಚಿಗಳ ಮೇಲ್ಪಟ್ಟು) ₹2,500, ಪ್ರತಿ ಘಟಕಗಳಿಗೆ (99 ಅನುಸೂಚಿಗಳ ವರೆಗೆ) 2,000 ರೂ.ಗಳನ್ನು ನೀಡಲಾಗಿತ್ತು ಎಂದು ವಿವರಿಸಿದ್ದಾರೆ.
ಬೆಳಗಾವಿ ವಿಭಾಗದ ರಾಮದುರ್ಗ ಘಟಕಕ್ಕೆ ಆಗಮಿಸಿದ ಡಿಟಿಒ ಸಂತೋಷ್ ಕಾಮತ್ ಅವರು ಘಟಕದ ನೌಕರರಿಗೆ ಸಿಹಿ ಹಂಚಿ ಹೆಚ್ಚಿನ ಆದಾಯ ಸಂಗ್ರಹವಾಗಿರುವ ಬಗ್ಗೆ ಸಂತಸ ಹಂಚಿಕೊಂಡರು.
ಇನ್ನು ಘಟಕಗಳು ಹಾಗೂ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು ಸೇರಿದಂತೆ ಎಲ್ಲ ನೌಕರರಿಗೂ ಸಿಹ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಘಟಕಮಟ್ಟದ ಹಾಗೂ ವಿಭಾಗೀಯ ಕಚೇರಿ ಸೇರಿದಂತೆ ಎಲ್ಲ ನೌಕರರಿಗೂ ಇದೇ ರೀತಿ ಆದಾಯ ಹೆಚ್ಚಿಸುವ ಬಗ್ಗೆ ಕಾಳಜಿಯಿಂದ ಕೆಲಸ ಮಾಡಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಹಿರಿಯ ಅಧಿಕಾರಿಗಳು ನೀಡಿದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...