NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ಅ.9ರ ಸಭೆಯಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಬೇಕು: ಸರ್ಕಾರಕ್ಕೆ ನೌಕರರ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಯಲ್ಲಿ ದುಡಿಯುವ ನೌಕರರಿಗೆ ನೆಮ್ಮದಿ ಇಲ್ಲ, ವೇತನ ತಾರತಮ್ಯತೆಯನ್ನು ಈವರೆಗೂ ಅಧಿಕಾರಕ್ಕೆ ಬಂದಿರುವ ಯಾವುದೇ ಸರ್ಕಾರ ಬಗೆಹರಿಸಿಲ್ಲ ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾದರೂ ನಮ್ಮ ಈ ವೇತನ ತಾರತಮ್ಯತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

ಈಗಾಗಲೇ ವಿಧಾನಸಭಾ ಚುನಾವಣೆಯ ವೇಳೆ ನೀವೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ನಮಗೂ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ವೇತನ ಆಯೋಗ ಮಾದರಿಯಲ್ಲೇ ಕೊಡುವ ಮೂಲಕ ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಅಧಿಕಾರಿಗಳು/ನೌಕರರಿಗೂ ಸಿಗಬೇಕಿರುವ ಎಲ್ಲ ಸೌಲಭ್ಯಗಳನ್ನು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಈವರೆಗೂ ನಮಗೆ ಯಾವ ವಿಜ್ಞಾನ ತಂತ್ರಜ್ಞಾನ ಎಷ್ಟೋ ಮುಂದುವರಿದರೂ ಈ ಹಿಂದಿನ ಸರ್ಕಾರಗಳು ಮಾತ್ರಾ ಹಳೇ ಕಾಲದರೀತಿಯಲ್ಲಿಯೇ KSRTC Employeesಗೆ ಅನ್ಯಾಯ  ಮಾಡಿಕೊಂಡು ಬಂದಿವೆ. ದೇಶದಲ್ಲಿ ನೂರಾರು ಪ್ರಶಸ್ತಿ ಪದಕಗಳನ್ನು ತಮ್ಮ ಮುಡಿಗೆ ಏರಿಸಿಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿ ಗುರುತಿಸಿ ಕೊಂಡಿದ್ದರೂ ನಮಗೆ ಆರ್ಥಿಕವಾಗಿ ಸಿಗಬೇಕಿರುವ ಸೌಲಭ್ಯ ಸಿಕ್ಕಿಲ್ಲ.

KSRTC ನೌಕರರಿಗೆ ದುಡಿಮೆಗೆ ಸರಿಯಾಗಿ ವೇತನ ಕೊಡುವುದರಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಕೇಳದೇ ಇದ್ದರೂ ಎಲ್ಲ ರೀತಿಯ ಉಚಿತ ಭಾಗ್ಯಗಳನ್ನುಕೊಟ್ಟಿರುವ ಸರ್ಕಾರ, ಬೇಕುಬೇಕು ಎಂದು ಹೇಳಿ ಬೇಡಿ ಕೊಂಡರೂ ಕೊಡುತ್ತಿಲ್ಲ,

ಇನ್ನಾದರೂ ಇದಕ್ಕೆ ಕೊನೆಯಾಡಿ ನಮಗೆ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ (ಅ.9) ನಡೆಯುವ ಸಭೆಯಲ್ಲಾದರೂ ಪರಿಹಾರ ನೀಡಲು ಸರ್ಕಾರ ಅಸಮರ್ಥವಾಗಿದೆ ಎಂದು ತಿಳಿಸಿ. ಈ ಮೂಲಕ ಸಾರಿಗೆ ಸಚಿವರು, CM, DCM ಅವರು ಈ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕು ಎಂದು ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ