NEWSಬೆಂಗಳೂರು

ಭಾರಿ ಮಳೆಗೆ ಬಿಬಿಎಂಪಿಯ 63 ಕೆರೆಗಳು ಭರ್ತಿ: ಆಯುಕ್ತೆ ಪ್ರೀತಿ ಗೆಹ್ಲೋಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರಿಲ್-2025ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್‌ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.

ಆದರೆ, ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರಿಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ.

ತುಂಬಿರುವ ಎಲ್ಲ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ