NEWSನಮ್ಮಜಿಲ್ಲೆಬೆಂಗಳೂರು

ಸುಗಮ ಪಾದಚಾರಿ ಮಾರ್ಗ ನಿರ್ಮಿಸಿ: ಅಧಿಕಾರಿಗಳಿಗೆ ಆಯುಕ್ತ ಕರೀಗೌಡ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳನ್ನು ದುರಸ್ತಿಗೊಳಿಸಿ ಸುಗಮ ಪಾದಚಾರಿಗಳನ್ನು ನಿರ್ಮಾಣ ಮಾಡಲು ಯಲಹಂಕ ವಲಯ ಆಯುಕ್ತ ಕರೀಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಲಯದ ಸಂದೀಪ್ ಉನ್ನಿ ಕೃಷ್ಣನ್ ರಸ್ತೆಯಲ್ಲಿ ಇಂದು ಪಾದಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿದ ಅವರು, ಪಾದಚಾರಿ ಮಾರ್ಗದಲ್ಲಿ ಇರುವ ಸಮಸ್ಯೆಗಳನ್ನು ಒಂದು ವಾರದೊಳಗಾಗಿ ದುರಸ್ತಿಗೊಳಿಸಿ ಛಾಯಾಚಿತ್ರದೊಂದಿಗೆ ವರದಿ ನೀಡಲು ಸೂಚಿಸಿದರು.

ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿಕೊಂಡಿರುವುದನ್ನು ಗಮನಿಸಿ ಕೂಡಲೇ ಒತ್ತುವರಿ ತೆರವು ಮಾಡಿಸಿ ಪುನಃ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಟೈಲ್ಸ್ ಗಳು ಹಾಳಾಗಿದ್ದು, ಅದನ್ನು ಕುಡಲೆ ದುರಸ್ತಿಗೊಳಿಸಲು ಸೂಚಿಸಿದರು.

ಯಲಹಂಕ ನ್ಯೂ ಟೌನ್ ಬಳಿ ರಸ್ತೆ ಬದಿ ಚರಂಡಿಗೆ ನೀರು ಹೋಗಲು ವ್ಯವಸ್ಥೆ ಮಾಡಿರುವ ಗ್ರೇಟಿಂಗ್ಸ್ ಬಳಿ ಸ್ವಚ್ಛತೆ ಮಾಡಿ ನಿರಂತವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಿ ರಸ್ತೆಯಲ್ಲಿ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

3 ಕಿ.ಮೀ ನಡಿಗೆ:ಯಲಹಂಕ ನ್ಯೂ ಟೌನ್ ಸಂದೀಪ್ ಉನ್ನಿ ಕೃಷ್ಣನ್ ರಸ್ತೆ, ಜಲಮಂಡಳಿ ಕಛೇರಿಯಿಂದ ಅಟ್ಟೂರು ಬಳಿ ಇರುವ ತಿರುಮಲ ಡಾಬಾದ ಮೂಲಕ ಜಿಕೆವಿಕೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯವರೆ ಸುಮಾರು 3.00 ಕಿ.ಮೀ ರಸ್ತೆಯ ಪಾದಚಾರಿ ಮಾರ್ಗವನ್ನು ನಡಿಗೆಯ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?