NEWSನಮ್ಮಜಿಲ್ಲೆಬೆಂಗಳೂರು

ಸುಗಮ ಪಾದಚಾರಿ ಮಾರ್ಗ ನಿರ್ಮಿಸಿ: ಅಧಿಕಾರಿಗಳಿಗೆ ಆಯುಕ್ತ ಕರೀಗೌಡ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳನ್ನು ದುರಸ್ತಿಗೊಳಿಸಿ ಸುಗಮ ಪಾದಚಾರಿಗಳನ್ನು ನಿರ್ಮಾಣ ಮಾಡಲು ಯಲಹಂಕ ವಲಯ ಆಯುಕ್ತ ಕರೀಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಲಯದ ಸಂದೀಪ್ ಉನ್ನಿ ಕೃಷ್ಣನ್ ರಸ್ತೆಯಲ್ಲಿ ಇಂದು ಪಾದಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿದ ಅವರು, ಪಾದಚಾರಿ ಮಾರ್ಗದಲ್ಲಿ ಇರುವ ಸಮಸ್ಯೆಗಳನ್ನು ಒಂದು ವಾರದೊಳಗಾಗಿ ದುರಸ್ತಿಗೊಳಿಸಿ ಛಾಯಾಚಿತ್ರದೊಂದಿಗೆ ವರದಿ ನೀಡಲು ಸೂಚಿಸಿದರು.

ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿಕೊಂಡಿರುವುದನ್ನು ಗಮನಿಸಿ ಕೂಡಲೇ ಒತ್ತುವರಿ ತೆರವು ಮಾಡಿಸಿ ಪುನಃ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಇಂಟರ್ ಲಾಕಿಂಗ್ ಟೈಲ್ಸ್ ಗಳು ಹಾಳಾಗಿದ್ದು, ಅದನ್ನು ಕುಡಲೆ ದುರಸ್ತಿಗೊಳಿಸಲು ಸೂಚಿಸಿದರು.

ಯಲಹಂಕ ನ್ಯೂ ಟೌನ್ ಬಳಿ ರಸ್ತೆ ಬದಿ ಚರಂಡಿಗೆ ನೀರು ಹೋಗಲು ವ್ಯವಸ್ಥೆ ಮಾಡಿರುವ ಗ್ರೇಟಿಂಗ್ಸ್ ಬಳಿ ಸ್ವಚ್ಛತೆ ಮಾಡಿ ನಿರಂತವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಿ ರಸ್ತೆಯಲ್ಲಿ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

3 ಕಿ.ಮೀ ನಡಿಗೆ:ಯಲಹಂಕ ನ್ಯೂ ಟೌನ್ ಸಂದೀಪ್ ಉನ್ನಿ ಕೃಷ್ಣನ್ ರಸ್ತೆ, ಜಲಮಂಡಳಿ ಕಛೇರಿಯಿಂದ ಅಟ್ಟೂರು ಬಳಿ ಇರುವ ತಿರುಮಲ ಡಾಬಾದ ಮೂಲಕ ಜಿಕೆವಿಕೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯವರೆ ಸುಮಾರು 3.00 ಕಿ.ಮೀ ರಸ್ತೆಯ ಪಾದಚಾರಿ ಮಾರ್ಗವನ್ನು ನಡಿಗೆಯ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ