ಬೆಂಗಳೂರು: ಬಿಬಿಎಂಪಿಯಲ್ಲಿ ಒಟ್ಟು 12,692 ಡಿ.ಪಿ.ಎಸ್ ಪೌರಕಾರ್ಮಿಕರುಗಳನ್ನು ಕ್ರಮಬದ್ಧಗೊಳಿಸಲಾಗಿದ್ದು, ಈಗಾಗಲೇ 1ನೇ ಮೇ 2025ರಂದು 3,628 ಮಂದಿ ಪೌರ ಕಾರ್ಮಿಕರಿಗೆ ಹಾಗೂ ಇಂದು 1,400 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ನೀಡಲಾಗಿದೆ.
ಈ ಕಾಯಂ ಪೌರ ಕಾರ್ಮಿಕರಿಗೆ ಮೇ-2025 ರಿಂದ HRMS ನಲ್ಲಿ ವೇತನ ಡ್ರಾ ಮಾಡಬೇಕಿದೆ. HRMS ನಲ್ಲಿ ಯಾವುದೇ ಅಧಿಕಾರಿ/ ಸಿಬ್ಬಂದಿಗಳ ವೇತನ ಡ್ರಾ ಮಾಡಲು ಅಧಿಕಾರಿ/ ಸಿಬ್ಬಂದಿಗಳ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಕುಟುಂಬದಲ್ಲಿ ಅವಲಂಬಿತರ ವಿವರಗಳನ್ನೊಳಗೊಂಡಂತೆ ಇತರೆ ವಿವರಗಳ ನೋಂದಣಿ ಕಡ್ಡಾಯವಾಗಿದೆ.
ಪ್ರಸ್ತುತ ಬಿಬಿಎಂಪಿಯಲ್ಲಿ ನೇಮಕಾತಿಯಾಗಿರುವ ಕಾಯಂ ಪೌರ ಕಾರ್ಮಿಕರಿಗೂ ಈ ನಿಯಮವು ಅನ್ವಯಿಸುತ್ತಿದ್ದು, ನೇಮಕಾತಿಗೊಂಡಿರುವ ಎಲ್ಲ ಪೌರ ಕಾರ್ಮಿಕರಿಂದ ಮೇಲೆ ತಿಳಿಸಿರುವ ದಾಖಲೆಗಳನ್ನು ಪಡೆದು HRMS ನಲ್ಲಿ ನೋಂದಣಿ ಕೈಗೊಂಡು ವೇತನ ಡ್ರಾ ಮಾಡಬೇಕಿದೆ. ಆದರೆ ಬಹುತೇಕ ಪೌರಕಾರ್ಮಿಕರು ಮೇಲೆ ತಿಳಿಸಿರುವ ದಾಖಲಾತಿಗಳಲ್ಲಿ ಪ್ರಮುಖವಾಗಿ ಪ್ಯಾನ್ಕಾರ್ಡ್ ಹೊಂದಿಲ್ಲದಿರುವುದು ಹಾಗೂ ಕುಟುಂಬದ ಅವಲಂಬಿತ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ಬಗ್ಗೆ ಮಾಹಿತಿ ನೀಡಿಲ್ಲದಿರುವುದು ಕಂಡುಬಂದಿದ್ದು, ಈ ಮಾಹಿತಿಗಳ ಸಂಗ್ರಹಣೆ ಚಾಲ್ತಿಯಲ್ಲಿದೆ.
ಪ್ರಸ್ತುತ HRMS ನಲ್ಲಿ ಈ ಮಾಹಿತಿಗಳ ನೋಂದಣಿಯಿಲ್ಲದೇ ವೇತನ ಡ್ರಾ ಮಾಡಲು ಸಮಸ್ಯೆಯಾಗಿದೆ. ಆದರೆ ಈಗಾಗಲೇ ನೇಮಿಸಿರುವ ಆದೇಶಗಳನ್ವಯ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವುದರಿಂದ ತಾತ್ಕಾಲಿಕವಾಗಿ ಪೌರ ಕಾರ್ಮಿಕರ ಇತರ ಎಲ್ಲ ದಾಖಲೆಗಳನ್ನು HRMSನಲ್ಲಿ ನೋಂದಾಯಿಸಿ, ಪ್ಯಾನ್ ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳನ್ನು HRMS ನೋಂದಣಿಯಿಂದ ವಿನಾಯಿತಿ ನೀಡಿ ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸುವ ಷರತ್ತು ವಿಧಿಸಿ ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಬಹುದಾಗಿದ್ದು, ಅದರಂತೆ ಈ ಆದೇಶ ಹೊರಡಿಸಿದೆ.
ಮೇ-2025ರ ಮಾಹೆಯಲ್ಲಿ ಕಾಯಂಮಾತಿ ಗೊಂಡಿರುವ 12,692 ಪೌರಕಾರ್ಮಿಕರ ಮೇ-2025 ಹಾಗೂ ಜೂನ್-2025ರ ಮಾಹೆಯ ವೇತನವನ್ನು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ HRMS ನಲ್ಲಿ ವೇತನ ಪಾವತಿಸುತ್ತಿರುವ ಮಾದರಿಯಲ್ಲಿಯೇ ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು, ಘನತ್ಯಾಜ್ಯ ವಿಲೇವಾರಿ ವಿಭಾಗರವರು ಕೂಡಲೇ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.
ಈ ಸಂಬಂಧ ಹೊಸದಾಗಿ ನೇಮಕಾತಿಗೊಂಡಿರುವ ಕಾಯಂ ಪೌರ ಕಾರ್ಮಿಕರಿಗೆ ಪ್ಯಾನ್ಕಾರ್ಡ್, ಅವಲಂಬಿತ ಕುಟುಂಬದ ಸದಸ್ಯರ ವಿವರ ಹಾಗೂ ವಿದ್ಯಾರ್ಹತೆ ದಾಖಲೆಗಳಿಗೆ HRMS ನೋಂದಣಿಯಿಂದ ವಿನಾಯಿತಿ ನೀಡಿ, ಮೇಲಿನ ದಾಖಲೆಗಳನ್ನು ಎರಡು ತಿಂಗಳ ಅವಧಿಯೊಳಗೆ DDO ಗಳಿಗೆ ಸಲ್ಲಿಸಿ, HRMS ನೋಂದಣಿಗೆ ಒಳಪಡುವ ಷರತ್ತಿಗೊಳಪಟ್ಟು ಮೇ-2025 ಮತ್ತು ಜೂನ್-2025ರ ಮಾಹೆಯ ವೇತನ ಡ್ರಾ ಮಾಡಲು ಆಡಳಿತ ವಿಭಾಗದ ವಿಶೇಷ ಆಯುಕ್ತ ನವೀನ್ ಕುಮಾರ್ ರಾಜು ಆದೇಶಿಸಿದ್ದಾರೆ.

Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...