NEWSನಮ್ಮರಾಜ್ಯ

ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್‌

313ಕ್ಕೇರಿದ ಸೋಂಕಿತರ ಸಂಖ್ಯೆ l ಈವರೆಗೆ 13 ಜನರು ವಿಶ್ವಮಾರಿಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

 ಬೆಂಗಳೂರು: ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿಗೆ ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇಂದೂ ಕೂಡ ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಇನ್ನು ಹೊಸ 34 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೆ ಏರಿಕೆಯಾಗಿದೆ.  ಬೆಳಗಾವಿಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಹಿರೇಬಾಗೇವಾಡಿಯ ಒಂದೇ ಕುಟುಂಬದ 8 ಮಂದಿಗೆ ತಗುಲಿದೆ. ಅದರಲ್ಲಿ 6ಮಂದಿ ಮಹಿಳೆಯರೆ ಆಗಿದ್ದಾರೆ. ಇಂದು ಬೆಳಗಾವಿಯಲ್ಲಿ 36ಕ್ಕೇರಿದೆ.

ಬೆಂಗಳೂರಿನಲ್ಲಿ ಐದು, ಮೈಸೂರಿನಲ್ಲಿ ಮೂರು, ವಿಜಯಪುರದಲ್ಲಿ ಏಳು, ಕಲಬುರಗಿ ಮತ್ತು ಗದಗದಲ್ಲಿ ತಲಾ ಒಂದು ಕೇಸ್‌ ಪತ್ತೆಯಾಗಿದೆ. ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,   ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಮರಣ ಮೃದಂಗಕ್ಕೆ ಮುಂದಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆವರೆಗೆ 71 ಇತ್ತು ಇಂದು 5 ಮಂದಿಗೆ ಸೋಂಕು ದೃಢಪಟ್ಟಿದ್ದು, 76ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 58 ಇದ್ದು, ಇಂದು 3 ಹೊಸ ಪ್ರಕರಣ ಪಾಸಿಟಿವ್‌ ಆಗಿದ್ದು, 61ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ