ಮೈಸೂರು: ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ. ಬುದ್ಧ ತನ್ನ ಬಿಕ್ಕುಗಳ ಮುಖಾಂತರ ಪ್ರಜಾಪ್ರಭುತ್ವದ ಬೀಜ ಬಿತ್ತಿದರು. ಆ ಬೀಜವು ಬಸವಣ್ಣನವರ ಮೂಲಕ ಅನುಭವ ಮಂಟಪದ ರೂಪತಾಳಿ ಮೊಳಕೆ ಹೊಡೆಯಿತು. ಹೀಗೆ ಬಿತ್ತಿ ಮೊಳಕೆಯೊಡೆದ ಬೀಜವು ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಖಾಂತರ ಮರವಾಗಿ ಬೆಳೆಯಿತು. ಆ ಮರದಲ್ಲಿ ಬೆಳೆದ ಫಲವನ್ನು ನಾವೆಲ್ಲರೂ ಇಂದು ಅನುಭವಿಸುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಇಂದು ನಗರದ ಕಲಾಮಂದಿರದಲ್ಲಿ ಬಸವ ಬಳಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ “ಬಸವ ಜಯಂತಿ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದರ ಮೂಲ ಉದ್ದೇಶ ಜನರು ತಮಗೆ ಬೇಕಾದಂತೆ ಬದುಕನ್ನು ಬದುಕಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಜನಪರ ಯೋಜನೆ ಜಾರಿ ಮಾಡಿ ಸಮಸಮಾಜದ ನಿರ್ಮಾಣದ ಕಡೆಗೆ ನಾವು ಸಾಗಬೇಕಿದೆ. ನಮ್ಮ ದೇಶದ ಸಾಮಾಜಿಕ ಅಸಮಾನತೆ, ವರ್ಣಾಶ್ರಮದ ನೀತಿಗಳು, ಲಿಂಗತಾರತಮ್ಯ, ಜಾತೀಯತೆ ಮತ್ತು ಅಸ್ಪೃಶ್ಯತೆ ಇಡೀ ಮಾನವ ಕುಲಕ್ಕೆ ಅಂಟಿದ ಕಳಂಕವಾಗಿದೆ. ಈ ಎಲ್ಲಾ ತಾರತಮ್ಯಗಳ ವಿರುದ್ದವಾಗಿ ಬಸವಣ್ಣನವರು ತಮ್ಮ ಪ್ರಬಲವಾದ ಹೋರಾಟ ಮತ್ತು ನಿಲುವುಗಳ ಮೂಲಕ ನಿರ್ಮೂಲನೆ ಕಾರ್ಯಕ್ಕೆ ಮುಂದಾದರು ಎಂದರು.
ಬಸವಣ್ಣ ‘ದಯೆ ಇಲ್ಲದ ಧರ್ಮ ಯಾಕೆ’ ಎಂದು ಪ್ರಶ್ನಿಸಿದ್ದಾರೆ. ಕೆಲವು ವರ್ಗದ ಜನರನ್ನು ದೇವಸ್ಥಾನಗಳ ಪ್ರವೇಶಕ್ಕೆ ನಿರಾಕರಿಸಿದಾಗ ಬಸವಣ್ಣನವರು ‘ನನ್ನ ದೇಹವೆ ದೇಗುಲ’ ಎಂಬ ಸಂದೇಶದ ಮೂಲಕ ದೇವರ ಪರಿಕಲ್ಪನೆಯನ್ನು ಜಗದಲಕ್ಕೆ ಹಾಗೂ ಆಕಾಶದೆತ್ತರಕ್ಕೆ ವಿಸ್ತಿರಿಸಿದರು. ಈ ಬಗೆಯ ಉದಾತ್ತ ಕಲ್ಪನೆ ಹೊಂದಿರುವ ಬಸವ ತತ್ವದ ಅನುಯಾಯಿಗಳು ಅವರನ್ನು ಹೊಗಳುತ್ತ ಕೂರಬಾರದು ಎಂದು ಕಿವಿಮಾತು ಹೇಳಿದರು.
ಬಸವಣ್ಣನವರನ್ನು ನಮ್ಮ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ನಾವು ಸಾಂಸ್ಕೃತಿಕವಾಗಿ ಬಲಾಢ್ಯರಾಗದಿದ್ದರೆ ಬಲಿಷ್ಠವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಬಿಜ್ಜಳನ ಆಸ್ಥಾನದಲ್ಲಿ ಒಂದು ಭಾಗದ ನಿಧಿಯನ್ನು ಕೊಡುವುದಾಗಿ ಹೇಳಿದಾಗ, ಅರ್ಥ ಸಚಿವರಾಗಿ ಬಸವಣ್ಣ ಅದನ್ನು ನಿರಾಕರಿಸಿದ್ದರು. ಅದು ಸುಖೀರಾಜ್ಯದ ನಿರ್ಮಾಣಕ್ಕಾಗಿ ಮೀಸಲಿಡಬೇಕು ಎಂದಿದ್ದರು ಎಂದು ವಿವರಿಸಿದರು.
ಇನ್ನು ಇಂದು ಧರ್ಮ, ಜಾತಿ ಹೆಸರಿನಲ್ಲಿ ಜನರನ್ನು ವಿಂಗಡಿಸಲಾಗುತ್ತಿದೆ. ಸಮುದಾಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಲಿಂಗತಾರತಮ್ಯ, ಮಹಿಳಾ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಆಚರಣೆಗಳು ಮನುಕುಲವನ್ನು ಅದೋಗತಿಗೆ ತಲುಪಿಸುತ್ತಿವೆ. ಇವೆಲ್ಲವನ್ನು ಪುನರುಜ್ಜೀವನಗೊಳಿಸಿ ಸಮಸಮಾಜ ನಿರ್ಮಾಣ ಮಾಡಲು ಅಗತ್ಯವಿರುವುದು ಬಸವಣ್ಣನ ನಿಲುವುಗಳು. ಆ ಮೂಲಕ ಸುಖೀರಾಜ್ಯದ ಸ್ಥಾಪನೆಯಾಗಲಿದೆ ಎಂದರು.
ಬುದ್ದ, ಬಸವ, ಅಂಬೇಡ್ಕರ್ ಎಂದರೆ ಆಚರಣೆಗಷ್ಟೇ ಸೀಮಿತವಲ್ಲ. ಇವರೆಲ್ಲರೂ ಬಹುದೊಡ್ಡ ಪ್ರಜಾಪ್ರಭುತ್ವವಾದಿಗಳು, ವಿಶ್ವಮಾನ್ಯತೆ ಗಳಿಸಿರುವ ಸಮಾಜ ಸುಧಾರಕರು. ವಿದೇಶದಲ್ಲಿ ನಾವು ಬುದ್ದನ ನಾಡಿನವರು ಎನ್ನುತ್ತೇವೆ. ಈ ಪರಂಪರೆಯಲ್ಲಿ ನಡೆದು ಬಂದಿರುವ ನಾವು ಈ ಮಹನೀಯರ ವಿಚಾರಗಳು ನಮ್ಮ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನಕ್ಕೆ ಪ್ರೇರಣಾಶಕ್ತಿಯಾಗಬೇಕಿದೆ. ಈ ಮುಖೇನ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೌರಾಡಳಿತ ಸಚಿವ ರಹೀಂಖಾನ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಶ್ರೀವತ್ಸ, ಎಚ್.ಎಂ.ಗಣೇಶ್ ಪ್ರಸಾದ್, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರು ಸೇರಿದಂತೆ ಬಸವ ಬಳಗದ ಮುಖಂಡರು ಉಪಸ್ಥಿತರಿದ್ದರು.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...