NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ.

ಅದರ ಮುಂದುವರಿದ ಭಾಗವಾಗಿ ಇಂದು ಡಿ.13ರಂದು ಜಂಟಿ ಕ್ರಿಯಾ ಸಮಿತಿಯ ಪರವಾಗಿ ಫೆಡರೇಷನ್ ಜಂಟಿ ಕಾರ್ಯದರ್ಶಿ  ಹಾಗೂ ಡಿಆರ್‌ಬಿಎಫ್ ಸೆಕ್ರೆಟರಿ ಮಂಜುಳಾ ಮತ್ತು ಭವಿಷ್ಯ ನಿಧಿ ಧರ್ಮದರ್ಶಿ ಶಶಿರೇಖಾ ಅವರು ಕೂಟದ ಕಚೇರಿಗೆ ಭೇಟಿ ನೀಡಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕೂಟದ ಕಚೇರಿಗೆ ಭೇಟಿ ನೀಡಿದಾಗ ಕಚೇರಿಯು ಬಾಗಿಲು ಹಾಕಿದ ಕಾರಣ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಅವರಿಗೆ ಫೋನ್‌ ಮೂಲಕ ಕರೆ ಮಾಡಿ ವಿಷಯವನ್ನು ತಿಳಿಸಿದ್ದು, ಆ ವೇಳೆ ಚಂದ್ರು ಕಚೇರಿಯ ಕಿಟಕಿಯ ಮೂಲಕ ಒಳಗೆ ಹಾಕಿ ಹೋಗಿ ಎಂದು ಹೇಳಿದ ಕಾರಣ ಅದೇ ರೀತಿ ಮಾಡಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಇತ್ತ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಇವರು ಮಾಡಿಸಲು ಹೊರಟಿರುವ ನಾಲ್ಕೂ ವರ್ಷಕ್ಕೊಮ್ಮೆ ಅಗ್ರಿಮೆಂಟ್‌ಗೆ ನಮ್ಮ ಬೆಂಬಲವಿಲ್ಲ ಎಂದು ನಾಲ್ಕೂ ಸಾರಿಗೆಯ ಬಹುತೇಕ ನೌಕರರು ಹಾಗೂ 100ಕ್ಕೆ 100ರಷ್ಟು ಅಧಿಕಾರಿಗಳು ಈಗಾಗಲೇ ಮಾಧ್ಯಮಗಳಲ್ಲಿಯೇ ಹೇಳಿಕೆ ನೀಡಿದ್ದಾರೆ.

ಇದೆಲ್ಲವನ್ನು ಗಮನಿಸಿದರೆ ಡಿ.31ಕ್ಕೆ ಹಮ್ಮಿಕೊಂಡಿರುವ ಮುಷ್ಕರ ನಡೆಯುವ ಡೌಟು ಎಂದು ಜಂಟಿ ಕ್ರಿಯಾ ಸಮಿತಿಯ  ಕೆಲ ಪದಾಧಿಕಾರಿಗಳೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.  ಇನ್ನೊಂದೆಡೆ ಅಧಿಕಾರಿಗಳ ಬಿಟ್ಟು ನೌಕರರಿಗಷ್ಟೇ ವೇತನ ಹೆಚ್ಚಳವಾಗುತ್ತದೆ ಎಂಬಂತೆ ಮುಷ್ಕರ ನಡೆಯಲಿದೆ ಎಂದು ಹೇಳಿಕೊಂಡು ಹೊರಟಿರುವ ಸಮಿತಿಯ ನಡೆ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಈವರೆಗೂ ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು ಹೋರಾಟ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ಭಾಗವಾಗಿರುವ ಅನಂತ ಸುಬ್ಬರಾವ್‌ ಅವರು ಹೇಳಿಕೆ ಕೊಡುತ್ತಿದ್ದಾರೆ. ಆದರೆ ಅವರು ಏಕೆ ಹೋರಾಟ ಮಾಡಬಾರದು ಎಂಬುದಕ್ಕೆ ಸಮಂಜವಾದ ಉತ್ತರ ಕೊಡುತ್ತಿಲ್ಲ.

ನಮ್ಮ ಭಾರತ ಸಂವಿಧಾನವೇ ಹೇಳುತ್ತದೆ ನಿಮ್ಮ ಹಕ್ಕು ಪಡೆಯುವುದಕ್ಕೆ ಹೋರಾಟ ಅನಿವಾರ್ಯವಾದರೆ ನೀವು ಹೋರಾಟಕ್ಕೆ ಇಳಿಯ ಬಹುದು ಎಂದು. ಆದರೆ ಅನಂತ ಸುಬ್ಬರಾವ್‌ ಅವರು ಮಾತ್ರ ಅಧಿಕಾರಿಗಳು ಹೋರಾಟ ಮಾಡುವುದಕ್ಕೆ ಆಗುವುದಿಲ್ಲ ಎಂದು ಹೇಳುತ್ತಾರೆ.

ಇನ್ನು ರಾಜ್ಯ ಸರ್ಕಾರದ ಅಧಿಕಾರಿಗಳು/ನೌಕರರು ಒಟ್ಟಾಗಿ ಹೋರಾಟಕ್ಕೆ ಕರೆ ನೀಡಿದ್ದರಿದಲೇ ಸರ್ಕಾರ ಅವರಿಗೆ ಶೇ.27.5ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿದ್ದು ಅದು ಕೂಡ ತರಾತುರಿಯಲ್ಲಿ ವೇತನ ಹೆಚ್ಚಳದ ಆದೇಶ ಮಾಡಿದ್ದು ನಮ್ಮ ಮುಂದೆಯೇ ಇದೆ. ಸರ್ಕಾರಿ ಅಧಿಕಾರಿಗಳು/ನೌಕರರಿಗೆ ಮುಷ್ಕರ ಮಾಡಲು ಹಕ್ಕಿದೆ ಎಂದ ಮೇಲೆ ಸಾರಿಗೆ ಅಧಿಕಾರಿಗಳು ಏಕೆ ಮುಷ್ಕರ ಮಾಡಬಾರದು?

ಇದನ್ನು ನೋಡಿದರೆ ಎಲ್ಲೋ ಅಧಿಕಾರಿಗಳ ದಾರಿ ತಪ್ಪಿಸುವ ಕೆಲಸಕ್ಕೆ ಅನಂತ ಸುಬ್ಬರಾವ್‌ ಅವರು ಮುಂದಾಗಿದ್ದಾರೆ ಎನಿಸುತ್ತಿದೆ. ಅಲ್ಲದೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರಕ್ಕೆ ಬಹುತೇಕ ನೌಕರರ ವಿರೋಧವಿದೆ. ಆದರೂ ಯಾವ ಧೈರ್ಯದ ಮೇಲೆ ಇರುವ ಕೆರೆ ನೀಡಿದ್ದಾರೋ ಗೊತ್ತಿಲ್ಲ. ಇದು ಗೊತ್ತಾಗಬೇಕಾದರೆ ಎಲ್ಲರೂ ಡಿ.31ರವರೆಗೂ ಕಾಯಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ