CrimeNEWSಕೃಷಿ

ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್‌ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ ಘಟನೆ ಬೇಲೂರು ತಾಲೂಕಿನ ದೇವಲಾಪುರದಲ್ಲಿ ನಡೆದಿದೆ.

ದೇವಲಾಪುರದ ನಿವಾಸಿ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್ ಸೇರಿದಂತೆ 8 ಮಂದಿ ರೈತರು ಕಟಾವು ಮಾಡಿಟ್ಟಿದ್ದ ಭತ್ತವನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸಲು ಸಿದ್ಧತೆ ನಡೆಸಿದ್ದರು. ಆದರೆ, ರಾತ್ರಿಯಾಗಿದ್ದರಿಂದ ಬೆಳಗ್ಗೆ ತೆಗೆದುಕೊಂಡು ಹೋಗೋಣವೆಂದು ಕಣದಲ್ಲೇ ಬಿಟ್ಟಿದ್ದರು.

ಆದರೆ, ತಡರಾತ್ರಿ 12 ಕಾಡಾನೆಗಳ ಹಿಂಡು ಕಣಗಳಿಗೆ ದಾಳಿ ಮಾಡಿ ಭತ್ತವನ್ನು ತಿಂದು ಹಾಕಿವೆ. ಅಲ್ಲದೇ ಉಳಿದ ಭತ್ತದ ಚೀಲಗಳನ್ನು ಚೆಲ್ಲಾಪಿಲ್ಲಿ ಮಾಡಿವೆ. ಅಂದಾಜು 3 ಲಕ್ಷ ರೂ. ಮೌಲ್ಯದ ಭತ್ತವನ್ನು ಗಜಪಡೆ ನಾಶ ಮಾಡಿವೆ ಎಂದು ಅಂದಾಜಿಸಲಾಗಿದೆ.

ಕಷ್ಟಪಟ್ಟು ಕಳೆದ 5 ತಿಂಗಳಿಂದ ಬೆಳೆಸಿ ಕಾಪಾಡಿಕೊಂಡು ಬಂದಿದ್ದ ಭತ್ತದ ಫಸಲನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದು, ಕಣ್ಣೀರಿಟ್ಟಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅನ್ನದಾತರು ಆಗ್ರಹಿಸಿದ್ದಾರೆ. ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕದ ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ