ಮಂಡ್ಯ: ಮ್ಯಾನ್ಯುಯಲ್ ರಜೆ ಅರ್ಜಿಗಳನ್ನು ಶಿಫಾರಸು ಮಾಡಿ ಕಳುಹಿಸದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡ್ಯ ವಿಭಾಗದ ಅಧಿಕಾರಿಗಳು ಘಟಕ ವ್ಯವಸ್ಥಾಪಕರು ಸೇರಿ ಇತರರಿಗೆ ಆದೇಶ ಮಾಡಿದ್ದಾರೆ.
ನಿಗಮದಲ್ಲಿ ಎಚ್.ಆರ್.ಎಂ.ಎಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿದ್ದು, ಈ ಸಂಬಂಧ ರಜೆ ಮಂಜೂರಾತಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಗಾಗಲೇ ತಿಳಿಸಲಾಗಿದೆ. ಆದರೂ ಸಹ ಈ ಕ್ರಮಗಳನ್ನು ಅನುಸರಿಸದೆ ಅಥವಾ ಪಾಲಿಸದೆ ಅಲ್ಪಾವಧಿ ಅವಧಿಗೆ ರಜೆ ಕೋರುವ ಸಿಬ್ಬಂದಿಗಳಿಗೆ ರಜಾ ಅರ್ಜಿಗಳನ್ನು ಶಿಫಾರಸು ಮಾಡಲಾಗುತ್ತಿದೆ.
ಈ ಮೂಲಕ ಸುತ್ತೋಲೆಯಲ್ಲಿನ ನಿರ್ದೇಶನಗಳು ಹಾಗೂ ರಜಾ ನಿಯಮಾವಳಿಗಳನ್ವಯ ರಜಾ ಮಂಜೂರಾತಿಗೆ ಸಂಬಂಧಿಸಿದಂತೆ ಕ್ರಮ ವಹಿಸದಿರುವುದು ಕಂಡು ಬಂದಿದೆ. ಹಾಗೂ ಏಪ್ರಿಲ್-2025ರ ಮಾಹೆಯಲ್ಲೂ ಸಹ ಸಿಬ್ಬಂದಿಗಳಿಗೆ ಮ್ಯಾನ್ಯುಯಲ್ ರಜೆಗಳನ್ನು ಮಂಜೂರು ಮಾಡುವಂತೆ ಕೋರಿ ರಜಾ ಅರ್ಜಿಗಳನ್ನು ಶಿಫಾರಸು ಮಾಡಿದ್ದು, ಕೊನೆಯ ಬಾರಿಗೆ ಒಂದು ಅವಕಾಶ ನೀಡಿ, ಮ್ಯಾನ್ಯುಯಲ್ ರಜೆಗಳನ್ನು ಮಂಜೂರು ಮಾಡಲಾಗಿತ್ತು.
ಮುಂದುವರಿದಂತೆ, ವಿಭಾಗೀಯ ತಾಂತ್ರಿಕ ಶಿಲ್ಪಿ, ವಿಭಾಗೀಯ ಸಂಚಾರ ಅಧಿಕಾರಿ, ಘಟಕ ವ್ಯವಸ್ಥಾಪಕರಿಗೆ ನೀಡಿರುವ ಅಧಿಕಾರ ವ್ಯಾಪ್ತಿಯಲ್ಲಿ ರಜಾ ಮಂಜೂರಾತಿ ಸಂಬಂಧ ಉಲ್ಲೇಖಿತ ನಿರ್ದೇಶನದಂತೆ ಕ್ರಮ ವಹಿಸಬೇಕು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ರಜೆ ಅರ್ಜಿಗಳನ್ನು ಶಿಪಾರಸು ಮಾಡಿ, ಮಂಜೂರಾತಿಗಾಗಿ ವಿಭಾಗೀಯ ಕಚೇರಿಗೆ ಸಲ್ಲಿಸದಂತೆ ಹಾಗೂ ಈ ತಂತ್ರಾಂಶದ ಅನುಷ್ಠಾನ ಸಂಬಂಧ ಈ ಕೆಳಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಘಟಕ ವ್ಯವಸ್ಥಾಪಕರಿಗೆ 7 ದಿನಗಳವರೆಗೆ ರಜೆಗಳನ್ನು ತಂತ್ರಾಂಶದಲ್ಲಿ ನಮೂದಿಸಿ ಮಂಜೂರು ಮಾಡುವ ಅವಕಾಶ ಕಲ್ಪಸಲಾಗಿದೆ. ಈ ಅವಕಾಶವನ್ನು ಕಲ್ಪಿಸಲಾಗಿರುವುದರಿಂದ ಯಾವುದೇ ಮ್ಯಾನ್ಯುಯಲ್ ರಜೆಗಳನ್ನು ಮಂಜೂರು ಮಾಡಲು ಅವಕಾಶವಿರುವುದಿಲ್ಲ ಎಂದು ಮತ್ತೊಮ್ಮೆ ತಿಳಿಸಲಾಗಿದೆ.
ಪ್ರಸ್ತುತ ಘಟಕ ವ್ಯವಸ್ಥಾಪಕರಿಗೆ ಹಿಂದಿನ 10 ದಿನಗಳವರೆಗೆ ಮಾತ್ರ EL & CML ರಜೆಗಳನ್ನು ಘಟಕ ವ್ಯವಸ್ಥಾಪಕರ Logiri ID ನಲ್ಲಿ Apply Leave ಮೂಲಕ Apply ಮಾಡಲು ಅವಕಾಶವನ್ನು ಕಲ್ಪಸಿರುವುದರಿಂದ, ಇನ್ನು ಮುಂದೆ ಅನಿವಾರ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗದೇ ಖುದ್ದಾಗಿ / ದೂರವಾಣಿ ಮೂಲಕ ಮಾಹಿತಿ ನೀಡಿದ್ದಲ್ಲಿ, ರಜೆ ನೀಡುವಂತೆ ಕೋರುವ ಸಿಬ್ಬಂದಿಗಳಲ್ಲಿ, ಉತ್ತಮ ಹಾಜರಾತಿ ಹಾಗೂ ರಜೆಗೆ ಸೂಕ್ತ ಕಾರಣ ಇರುವಂತಹ / ದಾಖಲಾತಿ ಸಲ್ಲಿಸುವಂತಹ ಅರ್ಹ ಸಿಬ್ಬಂದಿಗಳಿಗೆ ಮಾತ್ರ ಘಟಕ ವ್ಯವಸ್ಥಾಪಕರು. ತಮ್ಮ Login ID ನಲ್ಲಿ Apply Leave ಮೂಲಕ ಆಯಾ ದಿನವೇ ಅಥವಾ 2 ದಿನಗಳ ಒಳಗೆ EL & Apply ಮಾಡಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...