NEWSನಮ್ಮರಾಜ್ಯ

KSRTC ಅಂತರ ನಿಗಮ ವರ್ಗಾವಣೆಗೊಂಡ ನೌಕರರ ಪ್ರಭಾವಕಾರಿಯಾಗಿ ಬಿಡುಗಡೆಗೊಳಿಸುವ ದಿನಾಂಕ ವಿಸ್ತರಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಿಗಮದ ಅಂತರ ನಿಗಮ ವರ್ಗಾವಣೆಗೊಂಡ ನೌಕರರನ್ನು ಪ್ರಭಾವಕಾರಿಯಾಗಿ ಬಿಡುಗಡೆಗೊಳಿಸುವ ದಿನಾಂಕವನ್ನು ಜೂನ್‌ 30ರವರೆಗೂ ವಿಸ್ತರಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಮೇ 28ರಂದು ಅಂದರೆ ನಿನ್ನೆ ಆದೇಶ ಹೊರಡಿಸಿದ್ದು, ಎಲ್ಲ ನಾಲ್ಕೂ ನಿಗಮಗಳ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಯುತ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆಯಡಿ ವಿಭಾಗ/ ಕಚೇರಿಗಳಿಗೆ ನಿಯೋಜಗೊಂಡ ನೌಕರರನ್ನು ಈ ಹಿಂದೆ 31.05.2025 ರೊಳಗಾಗಿ ಬಿಡುಗಡೆಗೊಳಿಸದಿದ್ದಲ್ಲಿ ಪ್ರಭಾವಕಾರಿಯಾಗಿ ಬಿಡುಗಡೆಗೊಳ್ಳುವರು ಎಂದು ಆದೇಶಿಸಲಾಗಿತ್ತು.

ಆದರೆ, ಪ್ರಸ್ತುತ, ಜನದಟ್ಟಣಿ ಅವಧಿ ಇರುವುದರಿಂದ ಹಾಗೂ KSRTC ನಿಗಮ ಮತ್ತು NWKRTC ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಅಂತರ ನಿಗಮ ವರ್ಗಾವಣೆಗೊಂಡ ನೌಕರರನ್ನು 31.05.2025ರ ಬದಲಾಗಿ 30.06.2025 ರೊಳಗೆ ಬಿಡುಗಡೆ ಗೊಳಿಸಬೇಕು.

ಒಂದು ವೇಳೆ 30/06/2025 ರೊಳಗೆ ಬಿಡುಗಡೆಗೊಳಿಸದಿದ್ದಲ್ಲಿ, ನೌಕರರು 30/06/2025 ರಂದು ಪ್ರಭಾವಕಾರಿಯಾಗಿ ಬಿಡುಗಡೆಗೊಳ್ಳುವರು ಎಂದು ಎಂಡಿ ಆದೇಶ ಹೊರಡಿಸಿದ್ದಾರೆಂದು ತಿಳಿಸಿದ್ಸಾರೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ