ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ಸಂಸ್ಥೆ ನೌಕರರು ಮುಷ್ಕರದ ಸಮಯದಲ್ಲಿ ವಜಾಗೊಂಡು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರೆಲ್ಲರೂ ಕೂಡ 50 ಲಕ್ಷ ರೂ.ಗಳ ಅಪಘಾತ ವಿಮೆ ಯೋಜನೆಯಡಿ ಬರಲಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದೆ.
ನಿನ್ನೆ ಅಂದರೆ ಮೇ 28ರಂದು ಈ ಆದೇಶ ಹೊರಡಿಸಿದ್ದು, ಇದರಿಂದ ಅಪಘಾತ ವಿಮೆಯಿಂದ ಈವರೆಗೂ ಹೊರಗುಳಿದಿದ್ದ ಈ ಎಲ್ಲ ನೌಕರರಿಗೆ ಈಗ ಸಿಹಿ ಸುದ್ದಿ ಸಿಕ್ಕಂತಾಗಿದೆ. ಅಲ್ಲದೆ ಈ ವಜಾಗೊಂಡಿದ್ದ ಎಲ್ಲ ನೌಕರರು ತಾವು ಮಾಡದ ತಪ್ಪಿಗೆ ಮುಷ್ಕರದ ಸಮಯದಲ್ಲಿ ವಜಾಗೊಂಡು ನೋವು ಅನುಭವಿಸಿದ್ದಾರೆ. ಆದರೂ ಕೆಲ ಕಿಡಿಗೇಡಿ ಅಧಿಕಾರಿಗಳು ಅವರನ್ನು ಇನ್ನಷ್ಟು ನೋಯಿಸುವ ನಿಟ್ಟಿನಲ್ಲಿ ತಮಗಿಷ್ಟ ಬಂದ ರೀತಿಯಲ್ಲಿ ನಿಯಮ ರೂಪಿಸಿ ದೌರ್ಜನ್ಯ ಎಸಗುತ್ತಿದ್ದರು.
ಆದರೆ, ಕರ್ನಾಟಕ ಹೈ ಕೋರ್ಟ್ ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ನೌಕರರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು, ಈವರೆಗೂ ಅಪಘಾತ ವಿಮೆ 50 ಲಕ್ಷ ರೂ.ಗಳು ಸಿಗದಂತಾಗಿದ್ದ ಈ ನೌಕರರಿಗೆ ಸಿಗುವಂತೆ ಮಧ್ಯಂತರ ಆದೇಶ ಮಾಡಿದೆ. ಇದು ನೊಂದಿದ್ದ ನೌಕರರ ಪಾಲಿಗೆ ಆಸರೆ ಸಿಕ್ಕಂತಾಗಿದೆ. ಅಲ್ಲದೆ ಸತ್ಯಕ್ಕೆ ಸಾವಿಲ್ಲ ಎಂಬುದನ್ನು ನಿರೂಪಿಸಿದೆ.
ಇನ್ನು ಈಗಲೂ ಸಂಸ್ಥೆಯ ಕೆಲ ಭ್ರಷ್ಟ ಅಧಿಕಾರಿಗಳ ದರ್ಪಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಇದರ ನಡುವೆ ವಜಾಗೊಂಡು ಮರಳಿ ಡ್ಯೂಟಿ ಮಾಡುತ್ತಿರುವ ನೌಕರರಿಗೆ ಈಗ ಗುಂಪು ವಿಮಾ ಯೋಜನೆಯ ಅಪಘಾತ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಪ್ರಕರಣಗಳ ಕ್ಷೇಮ್ಗಳನ್ನು ಸಲ್ಲಿಸಲು ಅವಕಾಶ ನೀಡಿರುವುದು ಖುಷಿಯ ವಿಚಾರ.
ಸಂಸ್ಥೆಯ ಆದೇಶ ಏನು?: ಬಿಎಂಟಿಸಿ ಸಂಸ್ಥೆಯಲ್ಲಿ ನೌಕರರ ಇಲಾಖಾ ಗುಂಪು ವಿಮಾ ಯೋಜನೆಯಡಿ ಸೇವೆಯಲ್ಲಿರುವ ಅಧಿಕಾರಿ, ನೌಕರರು ಅಪಘಾತದಲ್ಲಿ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಮರಣ ಹೊಂದಿದರೆ ₹50 ಲಕ್ಷಗಳ ಪರಿಹಾರ ಮೊತ್ತವನ್ನು ನೀಡುವ ಸಂಬಂಧ ಈಗಾಗಲೇ ಯೋಜನೆ 2024ರ ಫೆ19 ರಿಂದ ಜಾರಿಗೆ ಬಂದಿದೆ. ಈ ಸಂಬಂಧ ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ ಕ್ಷೇಮ್ಗಳನ್ನು ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನವನ್ನು ಈ ಹಿಂದೆಯೇ ನೀಡಲಾಗಿದೆ.
ಇನ್ನು ವಿಮಾ ಪರಿಹಾರ ಮೊತ್ತ ₹50 ಲಕ್ಷಗಳನ್ನು ವಿತರಿಸುವ ಸಂಬಂಧ ಕೆಲವೊಂದು ಪ್ರಮುಖ ಷರತ್ತುಗಳನ್ನು ಅಳವಡಿಸಿಕೊಳ್ಳಲಾಗಿದೆ. ಅದರಂತೆ ಈ ಷರತ್ತುಗಳ ಪೈಕಿ ಅನರ್ಹ ಪ್ರಕರಣಗಳಡಿ (ಅಂದರೆ ವಜಾಗೊಂಡ ನೌಕರರನ್ನು ಗುರಿಯಾಗಿಸಿಕೊಂಡು ಮಾಡಿದ ನಿಯಮ) ಕ್ರಮ ಸಂಖ್ಯೆ-2 ರಲ್ಲಿ “ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದು ನಿಯಮ ರೂಪಿಸಲಾಗಿತ್ತು.
ಆದರೆ ಈಗ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಪ್ರಕರಣದಲ್ಲಿ ಈ ಯೋಜನೆಯು ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅನ್ವಯಿಸದಿರುವುದು ಸೂಕ್ತವಲ್ಲವೆಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಪ್ರಕರಣಗಳಡಿ ನಮೂದಿಸಲಾಗಿದ್ದ ಕ್ರಮ ಸಂಖ್ಯೆ-2 ನ್ನು ಈ ಕೂಡಲೆ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಉಳಿದಂತೆ ಬಾಕಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರಿಷ್ಕೃತ ಸುತ್ತೋಲೆಯು ಈ ಕೂಡಲೇ ಜಾರಿಗೆ ಬರುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...