KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು

ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.
ಕೆಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲ ಕುಮಾರ ಚಂದರಗಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದರೆ, ಯಾದಗಿರಿ ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕ ಪರಶುರಾಮ ಗಡೇದ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಹೀಗಾಗಿ ಯಾದಗಿರಿ ಸಾರಿಗೆ ವಿಭಾಗದಲ್ಲಿ ಏನು ನಡೆಯುತ್ತಿದೆ ಎನ್ನುವ ಪ್ರಶ್ನೆ ಇದೀಗ ಹುಟ್ಟಿಕೊಂಡಿದ್ದು, ಮೇಲೆಧಿಕಾರಿಗಳೇ ಹೀಗೆ ನೌಕರರಿಗೆ ಸಮಸ್ಯೆಯಾದರೆ ಸಿಬ್ಬಂದಿಗಳು ಯಾರ ಬಳಿ ದೂರು ನೀಡಬೇಕು. ಎಲ್ಲವನ್ನು ನೋಡಿಕೊಂಡು ಸರಿಪಡಿಸಬೇಕಾದ ಅಧಿಕಾರಿಗಳೇ ಈ ರೀತಿ ಆದರೆ ನೌಕರರ ಸ್ಥಿತಿ ಏನು ಎಂಬ ಪ್ರಶ್ನೆ ಕಾಡುತ್ತಿದೆ.
ಇನ್ನು ವಿಭಾಗೀಯ ನಿಯಂತ್ರಣಾಧಿಕಾರಿ ವಿರುದ್ಧ ದಾಖಲಾಗಿರುವ ಪ್ರಕರಣವೇನು?:
ಸುರಪುರ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿರುವ ರಾಮಪ್ಪ ಎಂಬುವರು ನನಗೆ ಡಿಸಿ ಅವರು ಜಾತಿನಿಂದನೆ ಮಾಡಿದ್ದು ಜತೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಂದರಗಿ ವಿರುದ್ಧ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.
ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲ ಕುಮಾರ ಚಂದರಗಿ ಅವರು ಚಾಲಕ ಕಂ ನಿರ್ವಾಹಕ ರಾಮಪ್ಪ ಅವರನ್ನು ಅಮಾನತು ಮಾಡಿದ್ದರು. ಈ ಸಂಬಂಧ ಏ.7 ರಂದು ಅವರು ಯಾದಗಿರಿ ಹಳೆ ಬಸ್ ನಿಲ್ದಾಣದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಹೋಗಿ ನನಗೆ ನಿಯಮಬಾಹಿರವಾಗಿ ಅಮಾನತು ಮಾಡಲಾಗಿದ್ದು, ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಿ ಎಂದು ಕೋರಿದ್ದರು. ಆದರೆ, ಚಂದರಗಿ, ಇದಕ್ಕೆ ಮನ್ನಣೆ ನೀಡಲಿಲ್ಲ. ಬದಲಿಗೆ ಜಾತಿ ನಿಂದಿಸಿ ಹತ್ತು ರೌಡಿಗಳನ್ನು ಕರೆಸಿ ಖಲಾಸ್ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಮಪ್ಪ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ಯಾದಗಿರಿ ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕ ಪರಶುರಾಮ ಗಡೇದ ಲೈಂಗಿಕ ಕಿರುಕುಳ ನೀಡಿದ್ದು, ಇವರ ವಿರುದ್ಧ ಕಾನೂನು ರೀತಿ ಕ್ರಮತೆಗೆದುಕೊಂಡು ನಮಗೆ ರಕ್ಷಣೆ ನೀಡಬೇಕು ಎಂದು ಮಹಿಳಾ ಸಿಬ್ಬಂದಿಯೊಬ್ಬರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಈ ಸಂಬಂಧ ಪರಶುರಾಮ ಗಡೇದ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related


You Might Also Like
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್ ಮನವಿ
ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...