ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್ ಅವರಿಗೆ ಜೂನ್ 1ರಿಂದ 25ರವರೆಗೆ ದುಬೈ ಹಾಗೂ ಯುರೋಪ್ಗೆ ಹೋಗಲು ಅನುಮತಿ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b)ರಡಿ ದರ್ಶನ್ ಪರವಾಗಿ ಸುನಿಲ್ ಕುಮಾರ್ ಎಂಬವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ವೇಳೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದರೆ ವಾಪಸ್ ಬರುವುದು ಅನುಮಾನ ಹೀಗಾಗಿ ಅನುಮತಿ ಕೊಡಬೇಡಿ ಎಂದು ನಿನ್ನೆ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು.
ಜೈಮಾತಾ ಕಂಬೈನ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗುತ್ತಿರುವ ‘ಡೆವಿಲ್’ ಸಿನಿಮಾ ಚಿತ್ರೀಕರಣಕ್ಕಾಗಿ ಇಂದು 25 ದಿನಗಳವರೆಗೆ ವಿದೇಶಕ್ಕೆ ದರ್ಶನ್ ತೆರಳಲು ನ್ಯಾಯಾಲಯ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಮೊದಲು ಜಾಮೀನು ನೀಡುವಾಗ ಬೆಂಗಳೂರು ಬಿಟ್ಟು ಎಲ್ಲಿಗೂ ತೆರಳುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು. ಬಳಿಕ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಲು ಅವಕಾಶ ನೀಡಿ ಜಾಮೀನಿನ ಷರತ್ತು ಸಡಿಲಿಸಿತ್ತು. ಇದೀಗ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದು ಅಭಿಮಾನಿಗಳಿಗೂ ಖುಷಿ ತಂದಿದೆ.
Related


You Might Also Like
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್ ಮನವಿ
ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...