KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ

- 2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ
ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ ಆ ಪ್ರಯಾಣಿಕರಿಗೆ ತನಿಖಾ ಸಿಬ್ಬಂದಿ ಹತ್ತಿದ ಹಂತದಿಂದ ಮುಂದಿನ ಹಂತದವರೆಗೆ ಪ್ರಕರಣ ದಾಖಲಿಸಿ ಆ ಹಂತದಿಂದಲೇ ಪ್ರಯಾಣಿಕ ಇಳಿಯುವ ಹಂತಕ್ಕೆ ಟಿಕೆಟ್ ಕೊಡಬೇಕು. ಈ ನಡುವೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತ್ತಿಲ್ಲ.
ಈ ಸುತ್ತೋಲೆಯನ್ನು 2020 ಫೆಬ್ರವರಿ20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಅವರು ಹೊರಡಿಸಿದ್ದಾರೆ. ಹೌದು! ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕ ಟಿಕೆಟ್ ಕಳೆದುಕೊಂಡರೆ ಅದಕ್ಕೆ ನಿರ್ವಾಹಕರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ಸ್ಪಷ್ಟವಾಗಿ ಎಂಡಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಮಾರ್ಗ ತನಿಖಾ ಪದ್ಧತಿಯಲ್ಲಿನ ಮಾರ್ಗದರ್ಶನಗಳು: ಕರಾರಸಾ ನಿಗಮ ರಾಜ್ಯದೊಳಗೆ ಹಾಗೂ ನೆರೆ ರಾಜ್ಯದ ವಿವಿಧ ಸ್ಥಳಗಳಿಗೆ ಕಾರ್ಯಾಚರಣೆ ಮಾಡುತ್ತಿರುವ ವಾಹನಗಳನ್ನು ಪರಿಣಾಮಕಾರಿಯಾಗಿ ತನಿಖೆಗೆ ಒಳಪಡಿಸಿದಾಗ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಪ್ರಯಾಣದ ಟಿಕೆಟ್ ಕಳೆದುಕೊಂಡ (Loss of ticket) ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಪಷ್ಟ ನಿರ್ದೇಶನಗಳು ಇರುವುದಿಲ್ಲ. ಈ ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿಗಳು ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಟಿಕೆಟ್ ಪಡೆದುಕೊಂಡು, ಆಕಸ್ಮಿಕವಾಗಿ ಪ್ರಯಾಣದ ಟಿಕೆಟ್ ಕಳೆದುಕೊಂಡ (Loss of ticket) ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿಯು ಇಟಿಎಂ/ ಮುಂಗಡ ಕಾಯ್ದಿರಿಸಿದ ಟ್ರಿಪ್ ಶೀಟ್ಗಳಿಂದ ಈ ಪ್ರಯಾಣಿಕರು ಟಿಕೆಟ್ ಪಡೆದಿದ್ದು, ತದನಂತರ ಟಿಕೆಟ್ ಕಳೆದುಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.
ಮಂದುವರಿದು ತನಿಖಾ ಸ್ಥಳದಿಂದ ಮುಂದೆ ಪ್ರಯಾಣಿಕರು ಪ್ರಯಾಣಿಸುವ ಸ್ಥಳಕ್ಕೆ ನಿರ್ವಾಹಕರ ಇಟಿಎಂ ಯಂತ್ರದಿಂದ ಮರುಟಿಕೆಟ್ ವಿತರಿಸುವುದು ಹಾಗೂ ಮರುವಿತರಣೆ ಟಿಕೆಟ್ನ ಮೊತ್ತವನ್ನು ಸಂಬಂಧಿಸಿದ ಪ್ರಯಾಣಿಕರಿಂದ ಪಡೆಯುವುದು ಹಾಗೂ ಈ ಬಗ್ಗೆ ಮಾರ್ಗ ಪತ್ರದಲ್ಲಿ ಷರಾ
ದಾಖಲಿಸುವುದು. ಈ ರೀತಿಯ ಸಂದರ್ಭದಲ್ಲಿ ನಿರ್ವಾಹಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು.
ಈ ಸುತ್ತೋಲೆಯಲ್ಲಿನ ಅಂಶಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಹಾಗೂ ಮಾರ್ಗ ತನಿಖಾ ಸಿಬ್ಬಂದಿಗೆ ಅಗತ್ಯ ತಿಳಿವಳಿಕೆಯನ್ನು ನೀಡುವುದು. ಈ ಸುತ್ತೋಲೆ ಈ ಕೂಡಲೇ ಜಾರಿಗೆ ಬರುತ್ತದೆ. ಸುತ್ತೋಲೆ ಸ್ವೀಕರಿಸಿದ್ದಕ್ಕೆ ಸ್ವೀಕೃತಿ ಮತ್ತು ಅನುಸರಣಾ ವರದಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಂದಿನ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸೂಚಿಸಿದ್ದರು. ಈ ಪಿಡಿಎಫ್ ನೋಡಬಹುದು loss of ticket 1531
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...