NEWSನಮ್ಮಜಿಲ್ಲೆನಮ್ಮರಾಜ್ಯ

ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮಂಗಳೂರಿನ ಆರ್‌ಟಿಒ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಮೆಟ್ರೋಗಳ ನಿರ್ಮಾಣ, ನಿರ್ವಹಣೆ ಮತ್ತು ದರ ನಿಗದಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೇಂದ್ರ ಸರ್ಕಾರದ ನಗರ ಅಭಿವೃದ್ಧಿ ಸಚಿವಾಲಯವೇ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಇನ್ನು ರಾಜ್ಯ ಸರ್ಕಾರವು ಸಬ್ಸಿಡಿ ಮೂಲಕ ಹಣವನ್ನು ನೀಡುತ್ತದೆ. ಈ ನಿರ್ಣಯಕ್ಕಾಗಿ ಕೇಂದ್ರ ಮತ್ತು ರಾಜ್ಯದ ಪ್ರತಿನಿಧಿಗಳನ್ನು ಒಳಗೊಂಡ ಕಮಿಟಿ ಇದೆ. ಆದರೆ ಅಂತಿಮ ಅಧಿಕಾರ ಕೇಂದ್ರದ್ದೇ ಆಗಿರುತ್ತದೆ ಎಂದರು ಸಚಿವ ರಾಮಲಿಂಗಾ ರೆಡ್ಡಿ.

ಕೇಂದ್ರ ಸರ್ಕಾರವೇ ದರ ಏರಿಸಿದೆ. ಅದನ್ನು ಧೈರ್ಯವಾಗಿ ಒಪ್ಪಿಕೊಳ್ಳಬೇಕು. ನಾವು ರಾಜ್ಯದ ಬಸ್ ದರ ಏರಿಕೆ ಮಾಡಿದಾಗ ಅದರ ಕಾರಣಗಳನ್ನು ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ವಿವರಿಸಿದ್ದೇವೆ. ಬಿಜೆಪಿ ನಾಯಕರು ಯಾವುದೇ ಸಮಸ್ಯೆ ಬಂದರೂ ಕಾಂಗ್ರೆಸ್ ಮೇಲೆ ಹೊರಿಸುತ್ತಾರೆ ಎಂದು ಟೀಕಿಸಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಪದವಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಕ್ಷದ ಹೈಕಮಾಂಡ್ ಈ ವಿಷಯದಲ್ಲಿ ಯಾರೂ ಮಾತನಾಡಬಾರದು ಎಂದು ಸೂಚಿಸಿದೆ. ಅದರಂತೆ, ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ