ಬೆಂಗಳೂರು: ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಚಾಲಕ ಆಕೆ ಮೇಲೆ ನುಗ್ಗಿಸಲು ಯತ್ನಿಸಿದ ಘಟನೆ ಹೊಸ ತಿರುವು ಪಡೆದಿದ್ದು, ಚಾಲಕನನ್ನು ಅಮಾನತು ಮಾಡಲಾಗಿದೆ. ಮೇ 23ರಂದು ನಡೆದ ಘಟನೆ ಸಂಬಂಧ ಇಂದು ಚಾಲಕನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಈ ಘಟನೆಯ ಸಂಪೂರ್ಣ ದೃಶ್ಯಗಳು ಕಾರಿನ ಡ್ಯಾಶ್ ಕ್ಯಾಮೆರಾ ಹಾಗೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಯುವತಿ ಬಸ್ಗೆ ಅಡ್ಡವಾಗಿ ನಿಲ್ಲುವುದಕ್ಕೆ ಮುಂಚೆ ನಡೆದಿದ್ದೇನು ಅನ್ನೋ ತನಿಖೆ ಸಹ ಮುಂದುವರಿದಿದೆ. ಮೇ 23ರಜೆ 5.40ಕ್ಕೆ ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ಈ ಘಟನೆ ನಡೆದಿತ್ತು.
ಈ ವೇಳೆ ಯುವತಿ ಜಸ್ಟ್ ಮಿಸ್ ಆದ ದೃಶ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು ಯುವತಿ ಮೇಲೆ ಬಸ್ ನುಗ್ಗಿಸಲು ಚಾಲಕ ಮುಂದಾಗಿದ್ದು, ಸ್ವಲ್ಪ ಯಾಮಾರಿದ್ರು ಯುವತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನಿಸಿದ ವೇಳೆ ಬಸ್ ನಿಲ್ಲಿಸಲು ಕಾರು ಚಾಲಕ ಹೇಳಿದರೂ ನಿಲ್ಲಿಸದೇ ಚಾಲನೆ ಮಾಡಿದ್ದಾನೆ. ಅಲ್ಲದೆ ಅತಿವೇಗ ಹಾಗೂ ಅಜಾಗರೂಕತೆಯ ಅಪರಾಧ ಮಾಡಿದ್ದಕ್ಕೆ ಬಿಎಂಟಿಸಿ ಚಾಲಕ ಪ್ರಶಾಂತ್ ಎಂಬುವರನ್ನು ಅಮಾನತು ಮಾಡಲಾಗಿದೆ.
ನಿಜವಾಗಿ ಅಂದು ನಡೆದಿದ್ದೇನು?: ಮೇ 23ರಂದು ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಕಿರಿಕ್ ಆಗಿತ್ತು. ರೊಚ್ಚಿಗೆದ್ದ ಯುವತಿ ಬಸ್ ಚಾಲಕನ ಪ್ರಶ್ನೆ ಮಾಡಲು ಬಸ್ ಅಡ್ಡಗಟ್ಟಿದ್ದರು. ಆದರೆ ಡ್ರೈವರ್ ಯುವತಿಯನ್ನು ಲೆಕ್ಕಿಸದೇ ಬಸ್ ನುಗ್ಗಿಸಿದ್ದ. ಚಾಲಕನ ಈ ಕೃತ್ಯ ನೋಡಿದ ಜನ ಬೆಚ್ಚಿಬಿದ್ದಿದ್ದರು.
ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನ ಪ್ರಶ್ನೆ ಮಾಡಿದ್ದರು. ಈ ಘಟನೆಗೂ ಮುಂಚೆ ಯುವತಿ ಮತ್ತು ಬಸ್ ಡ್ರೈವರ್ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
ಬಸ್ ಚಾಲಕ ಹೇಳೋದೇನು?: ಬಿಎಂಟಿಸಿ ಚಾಲಕ ಪ್ರಶಾಂತ್ ಮಾಧ್ಯಮಗಳೊಂದಿಗೆ ಮಾತನಾಡಿ, ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ನಡೆದಿದ್ದು. ಅದಕ್ಕೂ ಮುಂಚೆ ಹಡ್ಸನ್ ಸಿಗ್ನಲ್ನಲ್ಲಿ ಟ್ಯಾಂಕರ್ ಹಾಗೂ ಬಿಎಂಟಿಸಿ ಬಸ್ ಮುಂದೆ ಲೇಡಿ ಕಾರು ಓಡಿಸಿಕೊಂಡು ಬಂದರು. ಆಗ ಲೇಡಿಗೆ ಟ್ಯಾಂಕರ್ ಚಾಲಕ ಬೈದಿದ್ದರು.
ನಂತರ ಕಾರ್ಪೋರೇಷನ್ ಸಿಗ್ನಲ್ನಲ್ಲಿ ಜನ ಹತ್ತಿಸಿಕೊಳ್ಳುವಾಗ ನಾನು ನಿಮ್ಮ ಜಗಳದಲ್ಲಿ ನಮಗೆ ಒಂದು ಸಿಗ್ನಲ್ ಹೋಯ್ತು ಅಂತಾ ನಾನು ಬೈದೆ. ಅಷ್ಟಕ್ಕೆ ಬಿಎಂಟಿಸಿ ಬಸ್ ಮುಂದೆ ಯುವತಿ ಕಾರನ್ನು ಬಸ್ ಮುಂದಕ್ಕೆ ಹೋಗದ ಹಾಗೆ ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಹೋದರು.
ಕಬ್ಬನ್ ಪೇಟೆ ಸಿಗ್ನಲ್ನಲ್ಲಿ ಬಸ್ ನಿಲ್ಲಿಸಿದಾಗ ನನಗೆ ಅವಾಚ್ಯ ಶಬ್ದದಿಂದ ಬೈದು ನನ್ನ ಮೇಲೆ ಹಲ್ಲೆ ಮಾಡಲು ಮುಂದಾದ್ರು. ಬಸ್ನಿಂದ ಕೆಳಗೆ ಇಳಿ ಅಂತಾ ಅವಾಜ್ ಕೂಡ ಹಾಕಿದ್ರು. ನನ್ನ ತಪ್ಪು ಇಲ್ಲದೇ ನಾನು ಯಾಕೆ ಕೆಳಗೆ ಇಳಿಯಬೇಕು ಅಂತ ನಾನು ಇಳಿದಿಲ್ಲ. ಯುವತಿಯ ಎಡಭಾಗಕ್ಕೆ ಬಸ್ ಚಲಾಯಿಸಿದೇ ಹೊರತು ನಾನು ಯುವತಿ ಮೇಲೆ ನುಗ್ಗಿಸಲು ಪ್ರಯತ್ನಿಸಿಲ್ಲ. ಕಬ್ಬನ್ ಪೇಟೆ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ಎಎಫ್ಆರ್ ಆಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಬಿಎಂಟಿಸಿ ಕೂಡ ಸ್ಪಷ್ಟನೆ ನೀಡಿದೆ. ಜೆ.ಜೆ.ನಗರದಿಂದ ನಾಗವಾರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಬಸ್ನ ಹಿಂಬದಿ ಬಲಭಾಗವು, ಹಿಂದಿನಿಂದ ಬರುತ್ತಿದ್ದ ಕಾರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಅಪಘಾತದ ನಂತರ, ಕಾರು ಚಲಾಯಿಸುತ್ತಿದ್ದ ಮಹಿಳೆ ತನ್ನ ವಾಹನದಿಂದ ಇಳಿದು ಬಸ್ನ ಮುಂದೆ ನಿಂತು ಅಡ್ಡಗಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಚಾಲಕನನ್ನು ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಇಲಾಖಾ ಮಟ್ಟದ ಹೆಚ್ಚಿನ ವಿಚಾರಣೆ ಮುಂದುವರೆದಿದೆ. ತನಿಖೆಯ ಫಲಿತಾಂಶದ ಆಧಾರದಲ್ಲಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...