ಬೆಂಗಳೂರು: ಇಪಿಎಸ್ ಪಿಂಚಣಿದಾರರ 89ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಭಾನುವಾರ ಯಶಸ್ವಿಯಾಗಿ ಜರುಗಿತು. ಬೆಳಗಿನ ನಿರ್ಮಲ ವಾತಾವರಣದಲ್ಲಿ, ಲಾಲ್ಬಾಗ್ ನಡಿಗೆದಾರರ ಜತೆ ಹೆಜ್ಜೆ ಹಾಕುತ್ತಾ, ತನ್ನ ಸಹಪಾಠಿಗಳನ್ನು ಕಂಡೊಡನೆ, ಎಲ್ಲಿಲ್ಲದ ನವೊಲ್ಲಾಸದಿಂದ, ಈ ಸುಂದರ ತಾಣದಲ್ಲಿ ಸಮಯ ಕಳೆದಿದ್ದೆ ನಿವೃತ್ತ ನೌಕರರಿಗೆ ತಿಳಿಯಲೇ ಇಲ್ಲ.
ಇನ್ನು ಸಂಘಟನಾ ಕಾರ್ಯದರ್ಶಿ ಮನೋಹರ್ ಅವರು ಎಲ್ಲ ಇಪಿಎಸ್ ನಿವೃತ್ತರು ಹಾಗೂ ಮುಖಂಡರಿಗೆ ಸ್ವಾಗತ ಬಯಸುವ ಮೂಲಕ ಮಾಸಿಕ ಸಭೆಗೆ ಚಾಲನೆ ನೀಡಿದರು.
ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು, ಅತ್ಯಂತ ದುರಂತದ ಸಂಗತಿ ಎಂದು ಸಂಘದ ಅಧ್ಯಕ್ಷ ನಂಜುಂಡೇಗೌಡ ಸಭೆಯಲ್ಲಿ ಪ್ರಸ್ತಾಪಿಸಿ, ಮುಂಬರುವ ಪಾರ್ಲಿಮೆಂಟ್ನ ಮುಂಗಾರು ಅಧಿವೇಶನದಲ್ಲಿ ನಮ್ಮ ರಾಜ್ಯದ ಸಂಸದರು ಧ್ವನಿಯೆತ್ತಲೇ ಬೇಕು ಎಂದು ಸಭೆಯ ಮೂಲಕ ಆಗ್ರಹಿಸಿದರು. ಏನೇ ಆಗಲಿ 78ಲಕ್ಷ ಇಪಿಎಸ್ ನಿವೃತ್ತರ ಪರ ನಡೆಸುತ್ತಿರುವ ಈ ಹೋರಾಟಕ್ಕೆ ಇಂದಲ್ಲ ನಾಳೆ ಜಯ ಶತಸಿದ್ಧ ಎಂದು ಹೇಳಿದರು.
ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಮಾತನಾಡಿ, ನಮ್ಮ ಹೋರಾಟ ಇಷ್ಟಕ್ಕೆ ಮುಗಿಯುವುದಿಲ್ಲ, ಕಮಾಂಡರ್ ಅಶೋಕ್ ರಾಹುತ್ ಅವರು ಪ್ರತಿಪಾದಿಸುತ್ತಿರುವ ಕನಿಷ್ಠ ಹೆಚ್ಚುವರಿ ಪಿಂಚಣಿ ರೂ. 7500 ಜತೆಗೆ ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಇವೆಲ್ಲವೂ ನಮ್ಮ ಬ್ಯಾಂಕ್ ಖಾತೆಗೆ ಬಂದು ಬೀಳುವವರೆಗೆ ಈ ಹೋರಾಟ ನಿಲ್ಲದು ಎಂದು ಹೇಳಿದರು.
ಇನ್ನು ನಮ್ಮ ಮುಖಂಡರ ಜತೆ ಕೇಂದ್ರ ಸರ್ಕಾರವು ಇತ್ತೀಚೆಗೆ ದೆಹಲಿಯಲ್ಲಿ ಪಿಂಚಣಿ ವಿವಾದಕ್ಕೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ಮಾತುಕತೆ ನಡೆಯದೆ ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ನಾವೆಲ್ಲರೂ “ದೆಹಲಿ ಯಾತ್ರೆ” ಕೈಗೊಳ್ಳುವುದು ಒಂದೇ ಮಾರ್ಗ, ರೈತ ಚಳವಳಿಯ ಮಾದರಿಯಲ್ಲಿ ನಮ್ಮ ಹೋರಾಟವನ್ನು ಮಾಡಬೇಕು. ಯಾರೊಬ್ಬರೂ ಮನೆಯಲ್ಲಿ ಕುಳಿತುಕೊಳ್ಳದೆ ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತರು ನಮ್ಮ ಎಲ್ಲ ಸಭೆಗಳಿಗೂ ಆಗಮಿಸಿ, ನಮಗೆ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.

ಸಂಘದ ಪದಾಧಿಕಾರಿಗಳಾದ ನಾಗರಾಜ, ರುಕ್ಮೇಶ್, ಕೃಷ್ಣಮೂರ್ತಿ ಹಾಗೂ ಕೆಎಸ್ಆರ್ಟಿಸಿ ಚಿಕ್ಕಬಳ್ಳಾಪುರ, ನಿವೃತ್ತ ನೌಕರರ ಟ್ರಸ್ಟ್ ಖಜಾಂಚಿ ರಮೇಶ್ ಭಾಗವಹಿಸಿದ್ದು, ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಸಭೆಯ ನಿರ್ಣಯಗಳ ಬಗ್ಗೆ ಸದಸ್ಯರು ತಮ್ಮ ಹರ್ಷ ವ್ಯಕ್ತಪಡಿಸಿದರು.
Related


You Might Also Like
ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಮುಳುಗಿದ ಹಲವು ಮನೆಗಳು- ಇಬ್ಬರು ನಾಪತ್ತೆ
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ನಲ್ಲಿ ಮಹಾಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಕಾರ್ಲಿಗಾಡ್ ನದಿಯಲ್ಲಿ...
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...