CRIMENEWSಬೆಂಗಳೂರು

ಪಾದರಕ್ಷೆಯಿಂದ ಆಟೋ ಚಾಲಕನಿಗೆ ಹೊಡೆದ ಮಹಿಳೆ ಕಾಲಿಡಿದು ಕ್ಷೆಮೆ ಕೇಳಿದಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಹಾರದ ಹಿಂದಿ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹೊಡೆದ ಘಟನೆಯಿಂದ ಆಕ್ರೋಶ ಹೆಚ್ಚಾಗಿ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆ ಮಹಿಳೆ ಮತ್ತು ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.

ದಂಪತಿಗಳು ಆಟೋ ಚಾಲಕನಲ್ಲಿ ಕ್ಷಮೆಯಾಚಿಸಿ, “ಎಲ್ಲಾ ಕನ್ನಡಿಗರೇ, ದಯವಿಟ್ಟು ನಮ್ಮನ್ನು ಕ್ಷಮಿಸಿ. ನಮಗೆ ಆಟೋ ಚಾಲಕರ ಮೇಲೆ ಗೌರವವಿದೆ. ನಾವು ಬೆಂಗಳೂರನ್ನು ತುಂಬಾ ಪ್ರೀತಿಸುತ್ತೇವೆ. ಇಲ್ಲಿನ ವಾತಾವರಣ ನಮಗೆ ತುಂಬಾ ಇಷ್ಟ ಎಂದು ಹೇಳಿಕೊಂಡಿದ್ದಾರೆ.

ನಾವು ಹೊರಡುವಾಗ ಏನೋ ಆಯಿತು. ನಾನು ಬೇಕಲು ಬೇಕು ಎಂದು ಹಾಗೆ ಮಾಡಲಿಲ್ಲ, ಕ್ಷಮಿಸಿ. ನಾನು ಗರ್ಭಿಣಿ. ಗರ್ಭಪಾತವಾಗುವ ಭಯದಿಂದ ನಾನು ಹೀಗೆ ಮಾತನಾಡಿದೆ. ನನಗೆ ಬೆಂಗಳೂರು ತುಂಬಾ ಇಷ್ಟ. ನನಗೆ ಬೆಂಗಳೂರು ಮತ್ತು ಬೆಂಗಳೂರು ಸಂಸ್ಕೃತಿಯ ಬಗ್ಗೆ ತುಂಬಾ ಗೌರವ ಮತ್ತು ಪ್ರೀತಿ ಇದೆ ಎಂದು ಆ ಮಹಿಳೆ ಕ್ಷೆಮೆಯಾಚಿವ ಜತೆಗೆ ಹೇಳಿಕೊಂಡಿದ್ದಾಳೆ.

“ನಾವು ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಇದ್ದೇವೆ. ನಮಗೆ ಮನೆಯಷ್ಟೇ ಇಷ್ಟ. ಬೆಂಗಳೂರಿನ ಬಗ್ಗೆ ನಮಗೆ ಯಾವುದೇ ನಕಾರಾತ್ಮಕ ಅಭಿಪ್ರಾಯಗಳಿಲ್ಲ. ನಾವು ಆಟೋ ಚಾಲಕರನ್ನು ಗೌರವಿಸುತ್ತೇವೆ” ಎಂದು ಮಹಿಳೆಯ ಪತಿ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾನುವಾರ ಪೊಲೀಸರು ಮಹಿಳೆಯನ್ನು ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾಳೆ.

ಬೆಳ್ಳಂದೂರು ಬಳಿ ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದ ನನ್ನ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿ ಹೊಡೆದಿದೆ. ಈ ವೇಳೆ ನಾನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಹೀಗಾಗಿ ಘಟನೆ ಸಮಯದಲ್ಲಿ ಕೋಪಗೊಂಡು ಚಪ್ಪಲಿಯಿಂದ ಹಲ್ಲೆ ನಡೆಸಿರುವುದಾಗಿ ಮಹಿಳೆ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾಳೆ. ಪೊಲೀಸರು ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ವಾಪಸ್ ಕಳುಹಿಸಿದ್ದರು.

ಆ ಬಳಿಕ ಆಟೋ ಚಾಲಕನ ಬಳಿಗೆ ಹೋಗಿ ಕ್ಷೆಮೆ ಕೇಳಿ ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಬೆಡಿಕೊಂಡಿದ್ದಾಳೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...