NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಅನ್ಬುಕುಮಾರ್‌ ವರ್ಗಾವಣೆ: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ KSRTC ನೂತನ ಸಾರಥಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸ ನಡೆದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶಿಸಿದೆ.

ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲ್ಯುಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.‌ ಇನ್ನು ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೆ, ವಿ ಅನ್ಬುಕುಮಾರ್ ಅವರನ್ನು ಕೆಎಸ್ಆರ್ಟಿಸಿ ಎಂಡಿ ಸ್ಥಾನದಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೆಟರಿ ಹಾಗೂ ವೆಟರ್ನರಿ ಸೈನ್ಸ್ ಆಂಡ್ ಫಿಷರಿಂಗ್ ಇಲಾಖೆಯ ಸೆಕ್ರೆಟರಿಯಾಗಿ ನೇಮಕ ಮಾಡಲಾಗಿದೆ.

ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೆ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೆಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಐಎಎಸ್ ಅಧಿಕಾರಿ ರಂದೀಪ್ ಡಿ. ಅವರನ್ನು ಯವನಿಕದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಎಸ್ಟಿ ವೆಲ್‌ಫೇರ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಕಮೀಷನರ್ ಹುದ್ದೆಯಿಂದ ನೋಂದಣಿ ಮತ್ತು ಮುದ್ರಣಾಂಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ವಿ.ಅನ್ಬುಕುಮಾರ್‌ ಅವರಿಂದ ತೆರವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ  ಪ್ರಭಾರ ವ್ಯವಸ್ಥಾಪಕ ನಿರ್ದೇಶಕಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಎರಡು ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಬಳಿಕ ವರ್ಗಾವಣೆಯನ್ನು ರದ್ದು ಮಾಡಿ ಅದೇ ಹುದ್ದೆಯಲ್ಲಿ ಮುಂದುವರಿಯುವಂತೆ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ ಈ ಬಾರಿ ಅನ್ಬುಕುಮಾರ್‌ ಅವರನ್ನು ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೆಟರಿ ಹಾಗೂ ವೆಟರ್ನರಿ ಸೈನ್ಸ್ ಆಂಡ್ ಫಿಷರಿಂಗ್ ಇಲಾಖೆಯ ಸೆಕ್ರೆಟರಿಯಾಗಿ ನೇಮಕಮಾಡಿ ವರ್ಗಾವಣೆ ಮಾಡಿದೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...