NEWS

ಏ.22ರಂದು (ಇಂದು) ರಾಜ್ಯದ 7ಮಂದಿಯಲ್ಲಿ ಕೊರೊನಾ ಸೋಂಕು ದೃಢ

ವಿಶ್ವಾದ್ಯಂತ ಸೋಂಕಿನಿಂದ ಬಳಲುತ್ತಿರುವವರು 25,65,059 ಮಂದಿ l ಈವರೆಗೆ 1,77,496 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಇಂದು ಬೆಳಗ್ಗೆ 7 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದ್ದು, ಈ ಮೂಲಕ  ರಾಜ್ಯದಲ್ಲಿ ಸೋಂಕಿತರ  425 ಕ್ಕೆ ಏರಿಕೆ ಕಂಡಿದೆ.

ಬುಧವಾರ ಮಧ್ಯಾಹ್ನದವರೆಗಿನ ಮಾಹಿತಿಯಂತೆ ಬೆಂಗಳೂರಿನ ಇಬ್ಬರು, ಕಲಬುರಗಿಯ ಐವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 425ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 17ಮಂದಿ ಅಸುನೀಗಿದ್ದು, 279 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 129ಮಂದಿ ಗುಣಮುಖರಾಗಿದ್ದಾರೆ. ಅಂದರೆ ಮೂರು ದಿನದ ಇಂದೆ ಇದ್ದ 280 ಮಂದಿಯಲ್ಲಿ ನಿನ್ನೆ ಒಂದೇದಿನ 17 ಮಂದಿ ರೋಗ ಮುಕ್ತರಾಗಿ ಮನೆಗೆ ಮರಳಿರುವುದರಿಂದ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಂದಿಗೂ ಇಳಿಮುಖವಾಗಿದೆ ಎಂದೇ ಹೇಳಬಹುದಾಗಿದೆ.

ಇದನ್ನೂ ಓದಿರಿ  ಇಂದು ಮತ್ತೆ 10 ಮಂದಿಗೆ ಕೊರೊನಾ ಪಾಸಿಟಿವ್

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ದೇಶದಲ್ಲಿ 19,984ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 19,984 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 640 ಮಂದಿ ಮೃತಪಟ್ಟಿದ್ದಾರೆ. 3,870ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 25,65,059 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,77,496 ಜನರು ಮೃತಪಟ್ಟಿದ್ದಾರೆ. 6,86,634 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ