NEWSಕ್ರೀಡೆರಾಜಕೀಯ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ: ವಿಪಕ್ಷ ನಾಯಕ ಅಶೋಕ್ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಸರ್ಕಾರದ ಪ್ರಾಯೋಜಿತ ಅಮಾಯಕರ ಹತ್ಯಾಕಾಂಡ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೊಳಗಾಗಿ 11 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಪ್ಪು ನಮ್ಮದು ಸರಿ, ಆದರೆ ತಪ್ಪು ಯಾರದ್ದೆಂದು ಜನರು ಕೇಳುತ್ತಿದ್ದಾರೆ. ಕೂಗಳತೆ ಅಂತರದಲ್ಲೇ ಎರಡೆರಡು ಕಾರ್ಯಕ್ರಮಗಳು. ಈ ಕಾರ್ಯಕ್ರಮದ ಬಗ್ಗೆ ಐಪಿಎಲ್ ಚೇರ್ಮನ್‌ಗೊತ್ತೇ ಇಲ್ಲ ಎಂದು ಹೇಳಿದ್ದಾರೆ. ಸರ್ಕಾರ ಕೇಳಿದ್ದಕ್ಕೆ ಗ್ರೌಂಡ್ ಕೊಟ್ಟಿದ್ದೇನೆ ಎಂದು ಕೆಎಸ್‌ಸಿಎ ಹೇಳಿದೆ. ಇದರಲ್ಲಿ ಕೆಎಸ್‌ಸಿಎ ಅವರದ್ದು ತಪ್ಪಿಲ್ಲ. ಆರ್‌ಸಿಬಿಯವರು ಎರಡು ಕಿಮೀ ಮೆರವಣಿಗೆಗೆ ಕೇಳಿದ್ದರು. ಆದರೆ ಅವರನ್ನು ವಿಧಾನಸೌಧಕ್ಕೆ ಕರೆದುಕೊಂಡು ಬಂದಿದ್ದು ಯಾರು ಎಂದು ಪ್ರಶ್ನಿಸಿದರು.

ಇನ್ನು ಪಂದ್ಯ ಮುಗಿದ ಮೇಲೆ ನಮ್ಮ ಪೊಲೀಸರು ಬೆಳಗ್ಗೆ 3 ಗಂಟೆವರೆಗೂ ಕೆಲಸ ಮಾಡಿದ್ದಾರೆ. ಪಾಪ ನಮ್ಮ ಪೊಲೀಸರಿಗೆ ರಾತ್ರಿ ಎಲ್ಲ ನಿದ್ದೆನೇ ಇರಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ಲ. ಅದೇ ಪೊಲೀಸರನ್ನು ನಿಯೋಜನೆ ಮಾಡಿದರೆ ಅವರು ಹೇಗೆ ಕೆಲಸ ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.

ಅಲ್ಲದೆ ಪೊಲೀಸರು ಈ ಕಾರ್ಯಕ್ರಮಕ್ಕೆ ನಿರಾಕರಣೆ ಮಾಡಿದ್ದರು. ಆದರೂ ಬಲತ್ಕಾರದಿಂದ ಸರ್ಕಾರದಲ್ಲಿರುವುದು ನಾನಾ ನೀನಾ ಎಂದು ಪ್ರಶ್ನೆ ಕೇಳಿ, ವಿಧಾನ ಸೌಧದ ಮುಂದೆ ಡ್ರೋನ್ ಎಲ್ಲ ಬಳಕೆ ಮಾಡಿದ್ದಾರೆ. ಹೈಕೋರ್ಟ್ ನಿರ್ಬಂಧಿತ ಸ್ಥಳ, ಎಂತಹ ಮುಟ್ಟಾಳ ಕೆಲಸ ಮಾಡಿದೆ. ಇವತ್ತು ಕೋರ್ಟ್ ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ.

ಇನ್ನು ಇಷ್ಟಾದರೂ ಕೂಡ ಮುಖ್ಯಮಂತ್ರಿಗಳು, ಇಷ್ಟು ಜನ ಸೇರುತ್ತಾರೆ ಎಂದು ನಾವು ಅಂದಾಜಿಸಿಲ್ಲ ಅಂದಿದ್ದಾರೆ. ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಅಶೋಕ್‌ ಕಿಡಿಕಾರಿದರು.

ಒಂದು ಕಾರ್ಯಕ್ರಮ ಆಯೋಜಿಸುವ ಮುನ್ನ ಅದರ ಬಗ್ಗೆ ಪೂರ್ವಪರ ಯೋಚನೆ ಮಾಡುವುದನ್ನು ಬಿಟ್ಟು ಈ ರೀತಿ ಬೇಕಾಬಿಟ್ಟಿಯಾಗಿ ಸರ್ಕಾರ ನಡೆದುಕೊಂಡರ ಪರಿಣಾಮ ಇಂದು ಭವಿಷ್ಯದ 11 ಪ್ರಜೆಗಳನ್ನು ಕಳೆದುಕೊಂಡಿದ್ದೇವೆ ಎಂದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...