NEWSಆರೋಗ್ಯನಮ್ಮಜಿಲ್ಲೆ

ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರ ಬೆಳೆಸಿ: ಆಶಾ ರಾಜಶೇಖರ್

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸಕಾಲದಲ್ಲಿ ಉತ್ತಮ ಮಳೆಯಾಗಿ ಸಮೃದ್ದ ಬೆಳೆಗೆ ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷರಾದ ಆಶಾ ರಾಜಶೇಖರ್ ಹೇಳಿದರು.

ಹೊಸಕೋಟೆ ನಗರಸಭೆ ವತಿಯಿಂದ ಜಿ.ಕೆ.ಬಿ.ಎಂ ಶಾಲೆಯಲ್ಲಿ 50 ಗಿಡಗಳನ್ನು ನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಅವರು ಮಾತನಾಡಿದರು.

ಹೆಚ್ಚು ಗಿಡ ಮರಗಳನ್ನು ನೆಡುವುದರಿಂದ ಭೂ ಕುಸಿತ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು. ಗಿಡ ಮರಗಳನ್ನು ನಮ್ಮ ಜೀವ ಉಳಿಸುವ ಒಂದು ಅಂಶಗಳು ಅವುಗಳನ್ನು ನಾಶ ಮಾಡುತ್ತಾ ಬಂದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ ಎಂದರು.

ನಗರಸಭೆ ಉಪಾಧ್ಯಕ್ಷ ನವೀನ್, ಸ್ಥಾಯಿ ಸಮಿತಿ ಅಧ್ಯಕ್ಷ ದೇವರಾಜ್, ನಗರಸಭೆ ಪೌರಾಯುಕ್ತರಾದ ನೀಲಾಲೊಜನಾ ಪ್ರಭು, ಎಇಇ ರವೀಂದ್ರನಾಥ್, ಆರೋಗ್ಯ ನಿರೀಕ್ಷಕರು ಶೋಭಾ ಎಂ. ಹಾಗೂ ಅಂಜಿನಪ್ಪ, ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ಗೌಡ, ಆರ್. ಎಫ್.ಒ ವರುಣ್ ಕುಮಾರ್, ನಗರ ಅಭಿಯಾನ ವ್ಯವಸ್ಥಾಪಕರು ಮಹಾಂತ ಹಾಗೂ ನಗರಸಭೆ ಎಲ್ಲ ಸದಸ್ಯರು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಲಿನ್ಯ  ತಡೆಗಟ್ಟುವುದು ನಮ್ಮ ಕರ್ತವ್ಯ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಸಭೆ ವತಿಯಿಂದ ‘ತಾಯಿ ಹೆಸರಿನಲ್ಲಿ ಒಂದು ಗಿಡ’ ಎಂಬ ಕಾರ್ಯಕ್ರಮವನ್ನು, ನಗರದ ಬಸವಣ್ಣ ದೇವಸ್ಥಾನ ಬಳಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಕೆ., ಉಪಾಧ್ಯಕ್ಷ ಮಲ್ಲೇಶ್ ಎಂ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್ ವಿ.ಎಸ್., ಆಯುಕ್ತ ಕಾರ್ತಿಕೇಶ್ವರ ಆರ್., ನಗರ ಸಭೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...