ಹೊಸಕೋಟೆ: ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸಕಾಲದಲ್ಲಿ ಉತ್ತಮ ಮಳೆಯಾಗಿ ಸಮೃದ್ದ ಬೆಳೆಗೆ ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷರಾದ ಆಶಾ ರಾಜಶೇಖರ್ ಹೇಳಿದರು.
ಹೊಸಕೋಟೆ ನಗರಸಭೆ ವತಿಯಿಂದ ಜಿ.ಕೆ.ಬಿ.ಎಂ ಶಾಲೆಯಲ್ಲಿ 50 ಗಿಡಗಳನ್ನು ನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಅವರು ಮಾತನಾಡಿದರು.
ಹೆಚ್ಚು ಗಿಡ ಮರಗಳನ್ನು ನೆಡುವುದರಿಂದ ಭೂ ಕುಸಿತ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು. ಗಿಡ ಮರಗಳನ್ನು ನಮ್ಮ ಜೀವ ಉಳಿಸುವ ಒಂದು ಅಂಶಗಳು ಅವುಗಳನ್ನು ನಾಶ ಮಾಡುತ್ತಾ ಬಂದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ ಎಂದರು.
ನಗರಸಭೆ ಉಪಾಧ್ಯಕ್ಷ ನವೀನ್, ಸ್ಥಾಯಿ ಸಮಿತಿ ಅಧ್ಯಕ್ಷ ದೇವರಾಜ್, ನಗರಸಭೆ ಪೌರಾಯುಕ್ತರಾದ ನೀಲಾಲೊಜನಾ ಪ್ರಭು, ಎಇಇ ರವೀಂದ್ರನಾಥ್, ಆರೋಗ್ಯ ನಿರೀಕ್ಷಕರು ಶೋಭಾ ಎಂ. ಹಾಗೂ ಅಂಜಿನಪ್ಪ, ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ಗೌಡ, ಆರ್. ಎಫ್.ಒ ವರುಣ್ ಕುಮಾರ್, ನಗರ ಅಭಿಯಾನ ವ್ಯವಸ್ಥಾಪಕರು ಮಹಾಂತ ಹಾಗೂ ನಗರಸಭೆ ಎಲ್ಲ ಸದಸ್ಯರು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾಲಿನ್ಯ ತಡೆಗಟ್ಟುವುದು ನಮ್ಮ ಕರ್ತವ್ಯ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಸಭೆ ವತಿಯಿಂದ ‘ತಾಯಿ ಹೆಸರಿನಲ್ಲಿ ಒಂದು ಗಿಡ’ ಎಂಬ ಕಾರ್ಯಕ್ರಮವನ್ನು, ನಗರದ ಬಸವಣ್ಣ ದೇವಸ್ಥಾನ ಬಳಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಕೆ., ಉಪಾಧ್ಯಕ್ಷ ಮಲ್ಲೇಶ್ ಎಂ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್ ವಿ.ಎಸ್., ಆಯುಕ್ತ ಕಾರ್ತಿಕೇಶ್ವರ ಆರ್., ನಗರ ಸಭೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...