NEWSದೇಶ-ವಿದೇಶ

ವಿಶ್ವ ಆರೋಗ್ಯ ಸಂಸ್ಥೆಗೆ 30 ಮಿಲಿಯನ್‌ ಡಾಲರ್‌ ದೇಣಿಗೆ ನೀಡಲು ಮುಂದಾದ ಚೀನಾ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್:  ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡಬೇಕಾಗಿದ್ದ ಹಣಕಾಸು ನೆರವನ್ನು ತಡೆಹಿಡಿದಿದ್ದರಿಂದ ಚೀನಾ ಡಬ್ಲ್ಯುಎಚ್ ಒಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ದೇಣಿಗೆ ನೀಡುವುದಾಗಿ ಗುರುವಾರ ಘೋಷಿಸಿದೆ.

ವಿಶ್ವಮಾರಿ ಕೊರೊನಾ ಸೋಂಕು ವಿಚಾರದಲ್ಲಿ ವಿಶ್ವದ ಬಲಿಷ್ಠ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾ ನಡುವೆ ವಾಕ್ಸಮರ, ಜಟಾಪಟಿ ಮುಂದುವರಿದಿರುವುದು ಹಳೇ ವಿಷಯವಾಗಿದೆ. ಈ ನಡುವೆ ದೇಣಿಗೆ ನೀಡುವ ವಿಚಾರದಲ್ಲಿ ಚೀನಾ ತನ್ನ ಬಲಿಷ್ಠತೆಯನ್ನು ವಿಶ್ವಕ್ಕೆ ತೋರಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ WHOಗೆ ನೆರವನ್ನು ನೀಡುವುದಾಗಿ ಘೋಷಿಸಿದೆ.

ಈಗಾಗಲೇ 20 ಮಿಲಿಯನ್ ಡಾಲರ್ ನಷ್ಟು  ದೇಣಿಗೆ ನೀಡಿತ್ತು. ಜಾಗತಿಕವಾಗಿ ಕೋವಿಡ್ ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ಆರ್ಥಿಕ ನೆರವು ನೀಡಲು ನಿರ್ಧರಿಸಿರುವುದು ಅಮೆರಿಕಕ್ಕೆ ಸೆಡ್ಡು ಹೊಡೆಯಲು ಮುಂದಾದಂತಾಗಿದೆ. ಇದು ಒಳಗೊಳಗೆ ಅಮೆರಿಕದ ಕಣ್ಣನ್ನು ಕೆಂಪಾಗಿಸುತ್ತಿದೆ. ಆದರೂ ಅದೇನೆ ಇರಲಿ ವಿಶ್ವದ ಆರೋಗ್ಯ ದೃಷ್ಟಿಯಿಂದ ಚೀನಾ ತೆಗೆದುಕೊಂಡಿರುವ ನಿರ್ಧಾರ ಮೆಚ್ಚುವಂತದ್ದು.

ಜಾಗತಿಕವಾಗಿ ಕೋವಿಡ್ 19 ವಿರುದ್ಧ ಹೋರಾಡಲು, ಅಭಿವೃದ್ಧಿಶೀಲ ದೇಶಗಳ ಆರೋಗ್ಯ ವ್ಯವಸ್ಥೆ ಬಲಗೊಳಿಸುವ ನಿಟ್ಟಿನಲ್ಲಿ ಬೆಂಬಲ ನೀಡಲು ಈ ನೆರವು ನೀಡಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುಯಾಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೀನಾ ಸರ್ಕಾರದ ಮೇಲಿನ ವಿಶ್ವಾಸ, ಬೆಂಬಲದ ಪ್ರತಿಫಲನ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಜನರಿಗೆ ನೀಡಿರುವ ಕೊಡುಗೆಯಾಗಿದೆ ಎಂದು ಚೀನಾ ಬಣ್ಣಿಸಿದೆ.  ಅಲ್ಲದೇ ಎಲ್ಲರ ಆರೋಗ್ಯ ದೃಷ್ಟಿಯಿಂದ ಇದು ನಮ್ಮ ಅಲ್ಪ ಸಹಾಯ ಎಂದು ಹೇಳಿಕೊಂಡಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ