KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ ಭ್ರಷ್ಟ ಅಧಿಕಾರಿಗಳು ಈ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೌಕರರಿಗೆ ಕೊಡದೆ ಯಾಮಾರಿಸುತ್ತಿದ್ದಾರೆ.
ಇನ್ನು ಸಂಸ್ಥೆಯಲ್ಲಿ ಇರುವುದರಿಂದ ಈ ಬಗ್ಗೆ ತಿಳಿದುಕೊಂಡಿರುವವರು ನೌಕರರಿಗೆ ಮಾಹಿತಿ ಕೊಡಲು ಮುಂದಾದರೆ ನಿನ್ನದೆಷ್ಟೆ ಅಷ್ಟು ನೋಡಿಕೋ ಯಾವುದೇ ಮಾಹಿತಿಯನ್ನು ನೌಕರರಿಗೆ ಕೊಡಬೇಕು ಎಂದು ಮಾಹಿತಿ ಕೊಡಬೇಕಾದ ಅಧಿಕಾರಿಗಳೇ ಬೆದರಿಕೆ ಹಾಕುತ್ತಿದ್ದಾರೆ ಎಂದರೆ ಇದರ ಅರ್ಥ ಏನು?
ಇನ್ನು ಸಂಸ್ಥೆಯಿಂದ ನೌಕರರಿಗೆ ಸಿಗಬೇಕಿರುವ ಸೌಲಭ್ಯವನ್ನು ಮರೆಮಾಚುವ ಇಂಥ ಅಧಿಕಾರಿಗಳು ಇರುವುದರಿಂದ ನೌಕರರಿಗೆ ಕಾಲ ಕಾಲಕ್ಕೆ ಸಿಗಬೇಕಿರುವ ವೇತನ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಲು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಥೋ ಏನ್ ಅಧಿಕಾರಿಗಳು ಇವರು ಅನಿಸುವಷ್ಟು ಅಸಹ್ಯವಾಗುತ್ತಿದೆ.
ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ಸವಿಸ್ತಾರವಾದ ಮಾಹಿತಿಯೊಂದಿಗೆ ವಿಡಿಯೋ ಮಾಡುತ್ತೇನೆಂದು ಮತ್ತು ಸಂಸ್ಥೆಯಿಂದ ಕ್ಯಾಶ್ ಬ್ಯಾಗ್ ಟ್ರೇ ಬಾಕ್ಸ್ ಮತ್ತು ಟ್ರಂಕ್ಕನ್ನು ಹೇಗೆ ತೆಗೆದುಕೊಳ್ಳುವುದು ಎಂದು ಸುತ್ತೋಲೆ ಸಮೇತ ಹಾಕಲು ಸಂಸ್ಥೆಯ ನೌಕರ ಜಯದೇವ್ ಎಂಬುವರು ಮುಂದಾಗಿದ್ದರು.
ಈ ಬಗ್ಗೆ ಹಾಕುವುದಕ್ಕೆ ಅವರ ವಾಟ್ಸಪ್ ಗ್ರೂಪ್ಗಳಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಅವರ ವಾಟ್ಸಪ್ ಗ್ರೂಪ್ಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಘಟಕ ವಿಭಾಗಗಳ ಗ್ರೂಪ್ಗಳಿಗೂ ಇದು ಶೇರ್ ಆಗಿತ್ತು. ಈ ನಡುವೆ ಯಾವುದೋ ಮಾರ್ಗದಲ್ಲಿ ಅಧಿಕಾರಿ ವರ್ಗದ ಕೆಲ ಭ್ರಷ್ಟ ಅಧಿಕಾರಿಗಳು ಇದನ್ನು ನೋಡಿದ್ದಾರೆ.
ಇಲ್ಲಿ ಅಧಿಕಾರಿಗಳಿಗೆ ಒಂದು ರೀತಿಯ ಬಕೆಟ್ ಹಿಡಿಯುವ ಕೆಲಸ ಮಾಡುತಿರುವ ನೌಕರರೂ ಅವರ ಗ್ರೂಪಲ್ಲಿದ್ದು ಅವರು ಹಾಕಿರುವ ಪೋಸ್ಟ್ಗಳನ್ನು ಸ್ಕ್ರೀನ್ಶಾಟ್ ತೆಗೆದು ವಾಟ್ಸಾಪ್ ಮಾಡಿದ್ದು, ನಿನ್ನೆ ದಿನ ಕೆಲವು ಅಧಿಕಾರಿಗಳು ಜಯದೇವ ಅವರ ಜತೆ ಮಾತನಾಡಿ ಸಂಸ್ಥೆಯ ನಿಯಮಾವಳಿ ಪ್ರಕಾರ ನೀನು ಡ್ರೈವಿಂಗ್ ಲೈಸೆನ್ಸ್ ರಿನಿವಲ್ ತೆಗೆದುಕೊಂಡಿದ್ದೀಯ ಮತ್ತು ಕ್ಯಾಶ್ ಬ್ಯಾಗ್ ತೆಗೆದುಕೊಂಡಿದ್ದೀಯ.
ಆದರೆ ಅದರ ಬಗ್ಗೆ ವಿಡಿಯೋ ಮಾಡಿ ಸವಿಸ್ತಾರವಾಗಿ ತಿಳಿಸುತ್ತೇನೆ ಎಂದು ಗ್ರೂಪ್ಗಳಲ್ಲಿ ಹಾಕಿದ್ದೀಯ ಬೇರೆಯವರಿಗೆ ಏಕೆ ತಿಳಿಸುತ್ತೀಯಾ? ನೀನು ಕೇಳಿದ್ದೀಯ ಕೊಟ್ಟಿದ್ದೇವೆ ಅವರು ಕೇಳಲಿ ಕೊಡುತ್ತೇವೆ ಅದನ್ನು ಬಿಟ್ಟು ಈ ರೀತಿಯಲ್ಲ ಮಾಡಬೇಡ. ಯಾವುದೇ ವಿಡಿಯೋ ಮಾಡಿ ಬಿಡಬೇಡ ಅವರಿಗೆಲ್ಲರಿಗೂ ಕೂಡ ಕೊಡಲಿಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಜಯದೇವ್ ನೌಕರರಿಗೆ ಇದೇ ವಾಟ್ಸ್ಆಪ್ ಮೂಲಕವೇ ತಿಳಿಸಿದ್ದಾರೆ.
ಅಲ್ಲದೆ ಅಧಿಕಾರಿಗಳು ಈ ರೀತಿ ಬೆದರಿಕೆ ಹಾಕಿರುವುದರಿಂದ ನಾನು ಈ ವಿಡಿಯೋ ಮಾಡಲು ಮತ್ತೆ ಸವಿಸ್ತಾರವಾದ ಮಾಹಿತಿ ನೀಡಲು ಹಿಂದೇ ಸರಿಯುತ್ತಿದ್ದೇನೆ ಎಂದು ಕೂಡ ತಿಳಿಸಿದ್ದಾರೆ. ಜತೆಗೆ ನನ್ನನ್ನು ಪರ್ಸನಲ್ ಆಗಿ ಬಂದು ಮೀಟ್ ಮಾಡಿದರೆ ಎಲ್ಲ ಮಾಹಿತಿಯನ್ನು ನೀಡುತ್ತೇನೆ. ಅದರಂತೆ ತಾವು ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಹಣ ಮತ್ತು ಕ್ಯಾಶ್ ಬ್ಯಾಗ್ ತೆಗೆದುಕೊಳ್ಳಬಹುದು ಅಥವಾ ನಿಯಮಾವಳಿ ಪ್ರಕಾರ ಪತ್ರದ ಮುಖಾಂತರ ಬರೆದು ಕೊಡಿ ಕೊಡಬಹುದು ಎಂದು ತಿಳಿಸದ್ದಾರೆ.
ಸಾರಿಗೆ ನಿಗಮಗಳಲ್ಲಿ ನೌಕರರಿಗೆ ಸೌಲಭ್ಯ ಸಿಗಬೇಕು ಎಂದು ನಿಯಮ ಮಾಡಲಾಗಿದೆ. ಆದರೆ ಆ ನಿಯಮವನ್ನು ನೌಕರರಿಗೆ ತಿಳಿಸದೆ ಅಧಿಕಾರಿಗಳು ಏಕೆ ಈ ರೀತಿ ನಡೆಸುಕೊಳ್ಳುತ್ತಿದ್ದಾರೆ. ಇನ್ನು ಸೌಲಭ್ಯ ಪಡೆಯುವ ಬಗ್ಗೆ ಸಂಸ್ಥೆ ಹಣ ಖರ್ಚ್ ಮಾಡಿ ನೌಕರರಿಗೆ ಮಾಹಿತಿ ನೀಡಬೇಕಿತ್ತು. ಆದರೆ, ಅದನ್ನು ಒಬ್ಬ ಸಂಸ್ಥೆಯ ನೌಕರರ ಯಾವುದೇ ಸಂಭಾವನೆ ಪಡೆಯದೆ ಉಚಿತವಾಗಿ ನೌಕರರಿಗೆ ಸೌಲಭ್ಯ ಪಡೆಯುವುದು ಹೇಗೆ ಎಂದು ತಿಳಿಸಲು ಮುಂದಾದರೆ ಅವರನ್ನು ಬೆದರಿಸುವುದು ಎಷ್ಟರ ಮಟ್ಟಿಗೆ ಸರಿ.
ಈ ರೀತಿ ಒಂದು ವೇಳೆ ಬೆದರಿಕೆ ಹಾಕಿದರೆ ಫೋನ್ ಮಾಡಿದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು, ಅಲ್ಲದೆ ನೌಕರರಿಗೆ ಸಿಗಬೇಕಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಮಸ್ತ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಆಗ್ರಹಿಸಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...