ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಜತೆಗೆ ಈಗ ಖಾತೆ ಬದಲಾಯಿಸುವಂತೆಯೂ ಕೇಳಿಲ್ಲ. ಸುಳ್ಳುಸುದ್ದಿ ಗಣನೆಗೆ ತೆಗೆದುಕೊಳ್ಳುವುದು ಬೇಡ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.
ಇಂದು ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.
ಇನ್ನು ನಾನು 30 ವರ್ಷದಿಂದ ನಿಮ್ಮೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಒಳ್ಳೆಯದಾಗಿ ಕಾಣಿಸುವುದಿಲ್ಲ, ಶೋಭೆ ತರುವುದಿಲ್ಲ ಎಂದರು.
ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಹೇಳಿದರು.
ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹಾ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಿ. ನಾನು ಯಾವತ್ತು ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಹೇಳಿದರು.
ಇನ್ನು ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಈ ಘಟನೆಯಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಈಗ ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾದೀಶರಾದ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.
ದೆಹಲಿಗೆ ಕರೆದಿಲ್ಲ:
ಪಕ್ಷದ ವರಿಷ್ಟರು ನನ್ನನ್ನು ದೆಹಲಿಗೆ ಕರೆದಿಲ್ಲ. ಫೋನ್ನಲ್ಲಿ ಮಾತನಾಡುತ್ತಿರುತ್ತಾರೆ. ಘಟನೆಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇಳುತ್ತಾರೆ. ಸಿಎಂ, ಡಿಸಿಎಂ ಅವರನ್ನು ಕೇಳಿ ಮಾಹಿತಿ ಪಡೆಯುತ್ತಾರೆ ಎಂದು ತಿಳಿಸಿದರು.
Related

You Might Also Like
ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...
ತುಮಕೂರಿಗೆ ಅರ್ಬನ್, ಮೆಟ್ರೋ ರೈಲು ಎರಡು ಬರಲಿ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ...
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...