CRIMENEWSದೇಶ-ವಿದೇಶನಮ್ಮರಾಜ್ಯ

ಆಳಸಮುದ್ರದಲ್ಲಿ ಬೆಂಕಿಗೆ ತುತ್ತಾದ ಹಡಗು: ನಾಲ್ವರು ಸಿಬ್ಬಂದಿ ಕಾಣೆ, 6ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಆಳಸಮುದ್ರದಲ್ಲಿ ಕೇರಳದ ಬೇಪೂರ್ ಹಡಗು ಬೆಂಕಿಗೆ ತುತ್ತಾಗಿದ್ದು, ಈ ವೇಳೆ ಹಡಗಿನಲ್ಲಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಭಾಗಶಃ ಗಾಯಗಳಾಗಿದೆ. ಸದ್ಯ ಗಾಯಗೊಂಡ 6 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳದ ಬೇಪೂರ್ ಕಡಲ ಕಿನಾರೆಯಿಂದ 78 ನಾಟಿಕಲ್ ಮೈಲ್ ದೂರದಲ್ಲಿ ಹಡಗಿಗೆ ಬೆಂಕಿ ಆವರಿಸಿದೆ. 22 ಮಂದಿ ಸಿಬ್ಬಂದಿಯಿದ್ದ ಹಡಗಿನಲ್ಲಿ 18 ಮಂದಿಯನ್ನು ರಕ್ಷಣೆ ಮಾಡಿದ್ದು, ನಾಲ್ವರು ಕಣ್ಮರೆಯಾಗಿದ್ದಾರೆ. ಕಣ್ಮರೆಯಾದ ಸಿಬ್ಬಂದಿಗಾಗಿ ಕೋಸ್ಟ್ ಗಾರ್ಡ್ ಶೋಧಕಾರ್ಯ ಮುಂದುವರಿಸಿದ್ದಾರೆ.

ತೈವಾನ್‌ನ ಸೆಕೆಂಡ್ ಇಂಜಿನಿಯರ್ ಯು ಬೊ ಫಾಂಗ್, ಮ್ಯಾನ್ಮರ್‌ನ ಕಾರ್ಪೆಂಟರ್ ಸಾನ್ ವಿನ್, ಇಂಡೋನೇಷ್ಯಾದ ಎ.ಬಿ.ಜಾನಲ್ ಅಹಿದಿನ್, ತೈವಾನ್‌ನ ಮೋಟರ್ ಮ್ಯಾನ್ ಸಿಹ್ ಚಾಯ್ ವೆನ್ ಕಣ್ಮರೆಯಾಗಿದ್ದಾರೆ.

ಇನ್ನು ಚೀನಾ ಮೂಲದ ನಂ 1 ಆಯ್ಲಿರ್ ಲೂಯನ್ಲಿ ಮತ್ತು ಇಂಡೋನೇಷ್ಯಾದ ಫಿಟ್ಟರ್ ಸೋನಿಟೂರ್ ಹೆನಿ ಗಂಭೀರ ಗಾಯಗೊಂಡಿದ್ದಾರೆ. ಚೈನಾದ ಸೆಕೆಂಡ್ ಫಿಟ್ಟರ್‌ಗಳಾದ ಕ್ಸೂ ಪಬೋ, ಗೋ ಲಿನಿಂಗ್, ಮ್ಯಾನ್ಮರ್‌ನ ಎಬಿಗಳಾದ ಥೆನ್ ಥಾನ್ ತ್ವಾಯ್, ಕಿ ಜಾವ್ ತ್ವೂ ಅವರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜತೆಗೆ ಉಳಿದ 12 ಜನ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದಾರೆ.

ಇನ್ನು ಶ್ರೀಲಂಕಾದಿಂದ ಮುಂಬೈಗೆ ಸಾಗುತ್ತಿದ್ದ ಸಿಂಗಾಪುರ ಮೂಲದ ಈ ಹಡಗಿನಲ್ಲಿ ಪೈಂಟ್, ಗನ್ ಪೌಡರ್ ಸೇರಿದಂತೆ ಹಲವು ವಸ್ತುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, 18 ಮಂದಿಯನ್ನು ರಕ್ಷಣೆ ಮಾಡಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿರುವ 12 ಮಂದಿಯನ್ನು ನಗರದ ಹೋಟೆಲ್‌ನಲ್ಲಿ ಇರಿಸಲಾಗಿದೆ.

ಇದಕ್ಕೂ ಮುನ್ನ ಈ ಎಲ್ಲ 18 ಮಂದಿಯನ್ನು ಐಎನ್‌ಎಸ್ ಸೂರತ್ ಮೂಲಕ ಆಳಸಮುದ್ರದಿಂದ ಮಂಗಳೂರಿನ ನವಬಂದರಿಗೆ ಕರೆತರಲಾಗಿದೆ. ಬಂದರಿನಿಂದ ಎಜೆ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಕಳುಹಿಸಲಾಯಿತು.

ಎಜೆ ಆಸ್ಪತ್ರೆಯ ವೈದ್ಯ ದಿನೇಶ್ ಕಂದಮ್ ಗಾಯಾಳುಗಳ ಸ್ಥಿತಿ ಬಗ್ಗೆ ಮಾತನಾಡಿ, ಈಗಾಗಲೇ ಆರು ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಆ ಆರು ಜನರ ಪೈಕಿ ಮೂವರು ಚೀನಾ ದೇಶದವರು, ಇಬ್ಬರು ಬರ್ಮಾ ಹಾಗೂ ಒಬ್ಬರು ಇಂಡೋನೆಶೀಯದವರು.

ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಶೇ.30 ರಿಂದ ಶೇ.40ರಷ್ಟು ದೇಹದ ಭಾಗಗಳು ಸುಟ್ಟಿವೆ. ಜತೆಗೆ ಶ್ವಾಸಕೋಶದಲ್ಲೂ ಸುಟ್ಟಗಾಯಗಳಾಗಿದೆ. ಉಳಿದ ನಾಲ್ಕು ಜನರಿಗೆ ಅಲ್ಪಸ್ವಲ್ಪ ಗಾಯಗಳಾಗಿದೆ. ಗಂಭೀರ ಗಾಯಗೊಂಡ ಇಬ್ಬರಿಗೂ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...