ಹೈದರಾಬಾದ್: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಧಿಸಿದ್ದ 7 ವರ್ಷ ಜೈಲು ಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ನೀಡುವ ವೇಳೆ ಕೋರ್ಟ್ ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿ ನೀಡುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಹೀಗಾಗಿ ರೆಡ್ಡಿ ಅವರ ಪಾಸ್ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.
ಏನಿದು ಪ್ರಕರಣ?
ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಗಣಿಕಾರಿಕೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು.
ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.
2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್ನ ರೋಷಯ್ಯ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷ ಚಂಚಲಗುಡ್ಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು.
ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು.
ಇನ್ನು ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು. ಅದೇನೆ ಇರಲಿ ಸದ್ಯಕ್ಕಂತು ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ, ಜಾಮೀನು ಮಂಜೂರು ಮಾಡಿದ್ದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...