NEWSನಮ್ಮರಾಜ್ಯ

ಬಿಎಂಟಿಸಿ ನೂತನ ಎಂಡಿ ಅನ್ಬುಕುಮಾರ್‌ ಅಧಿಕಾರ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವಿ.ಅನ್ಬು ಕುಮಾರ್‌ ಅವರನ್ನು ನೇಮಕ ಮಾಡಿ  ನಿನ್ನೆ ಸೆ.13ರಂದು  ಸರ್ಕಾರ ಆದೇಶ ಹೊರಡಿಸಿತ್ತು. ಇಂದು (ಸೆ.14) ಅನ್ಬುಕುಮಾರ್‌ ಸಂಸ್ಥೆಯ ಎಂಡಿಯಾಗಿ ಅಧಿಕಾರ ಸ್ವೀಕರಿದ್ದಾರೆ.

ಕಳೆದ ಜುಲೈ 7ರಂದು ಐಎಎಸ್‌ ಅಧಿಕಾರಿ ಡಾ.ಎಂ.ಟಿ. ರೆಜು ಅವರನ್ನು ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ ಅವರು ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಲ್ಲಿ ಅವರನ್ನು ಎತ್ತಂಗಡಿ ಮಾಡಿ ಆ ಜಾಗಕ್ಕೆ 2004 ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿ.ಅನ್ಬುಕುಮಾರ್‌ ಅವರನ್ನು ನೇಮಕ ಮಾಡಿದೆ.

ಈ ಹಿಂದೆ ಇದ್ದ ಸಿ. ಶಿಖಾ ಅವರನ್ನು ಜೂ.29ರಂದು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಎರಡೇ ದಿನದಲ್ಲಿ ಅಂದರೆ ಜು.2ರಂದು ಶಿಖಾ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಮರು ನೇಮಕ ಮಾಡಿತ್ತು. ಆದರೆ ಮತ್ತೆ ಒಂದು ವಾರ ಕಳೆಯುವಷ್ಟರಲ್ಲೇ ( ಜುಲೈ 7ರಂದು) ಎತ್ತಂಗಡಿ ಮಾಡಿತ್ತು.

ಆಗ ರಾಜ್ಯ ಸರ್ಕಾರ 2005ನೇ ಬ್ಯಾಚ್‌ನ ಕರ್ನಾಟಕ ಕೆಡರ್ ಐಪಿಎಸ್ ಅಧಿಕಾರಿ ಡಾ. ಎಂ.ಟಿ. ರೆಜು ಅವರನ್ನು ಕರ್ನಾಟಕ ಅರ್ಬನ್ ಇನ್ಫಾಸ್ಟ್ರಕ್ಚರ್‌ ಡೆವಲಪ್ ಮೆಂಟ್ ಆಂಡ್‌ ಫೈನಾನ್ಸ್ ಕಾರ್ಪೋರೇಶನ್ (ಕೆಯುಐಡಿಎಫ್‌ಸಿ) ನಿಂದ ವರ್ಗಾವಣೆ ಮಾಡಿ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಿತ್ತು. ಈಗ ಅವರನ್ನು ಎರಡು ತಿಂಗಳಲ್ಲೇ ಕೆಯುಐಡಿಎಫ್‌ಸಿಗೆ ಅವರನ್ನು ವರ್ಗಾವಣೆ ಮಾಡಿದೆ.

ಅವರ ವರ್ಗಾವಣೆಯಿಂದ ತೆರವಾದ ಬಿಎಂಟಿಸಿ ಎಂಡಿ ಸ್ಥಾನಕ್ಕೆ ಕಮಿಷನರ್‌ ಫಾರ್‌ ಪಬ್ಲಿಕ್‌ ಇನ್‌ಸ್ಟ್ರಕ್ಷನ್ಸ್‌‌ ವಿ.ಅನ್ಬುಕುಮಾರ್‌ ಅವರನ್ನು ನೇಮಕ ಮಾಡಿದೆ. ನೂತನ ಎಂಡಿಯಾಗಿ ಇಂದು ಅಧಿಕಾರ ಸ್ವೀಕರಿಸಿರುವ ಅನ್ಬು ಕುಮಾರ್‌ ಅವರ ಜವಾಬ್ದಾರಿ ಹೆಚ್ಚಾಗಿದ್ದು, ಬರಿ ಸಮಸ್ಯೆಗಳ ಸುಳಿಯಲ್ಲೇ ಸಿಲುಕಿರುವ ಸಂಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜತೆಗೆ ನೌಕರರ ಸಮಸ್ಯೆಗೂ ಪರಿಹಾರ ಕಂಡುಕೊಳ್ಳುವ ಗುರುತರ ಜವಾಬ್ದಾರಿಯೂ ನೂತನ ಎಂಡಿ ಮೇಲಿದೆ.

ಇದೆಲ್ಲವನ್ನು ತಮ್ಮ ಸೇವಾನುಭವದ ಮೂಲಕ ತಾಳ್ಮೆಯಿಂದ ಆದಷ್ಟು ಶೀಘ್ರದಲ್ಲೇ ಪರಿಹರಿಸಿ ನೌಕರರ ಪಾಲಿನ ನಾಯಕನಾಗಬೇಕಿದೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ