ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ ತುಂಬ ವೇತನ ಕೊಡುವ ಖಾಸಗಿ ಕಂಪನಿಯಲ್ಲಿ ಮುಖ್ಯ ಕಾನೂನು ಸಲಹೆಗಾರ ಹುದ್ದೆ ಸಿಕ್ಕಿದೆ.
ಕಳೆದ 2019ರಿಂದ ಇಲ್ಲಿಯ ವರೆವಿಗೂ ಸಾರಿಗೆ ಅಧಿಕಾರಿಗಳ ಕಿರುಕುಳಕ್ಕೆ ಒಳಗಾಗಿ ಹಾಗೂ 2021ರ ಏಪ್ರಿಲ್ನಲ್ಲಿ ನಡೆದ ಮುಷ್ಕರದ ವೇಳೆ ಕೇಸ್ ದಾಖಲಾಗಿದ್ದ ಹಲವು ನೌಕರರ ಪರ ಉಚಿತವಾಗಿ ವಕಾಲತ್ತು ವಹಿಸುವ ಮೂಲಕ ಕರ್ನಾಟಕ ಹೈ ಕೋರ್ಟ್ನಲ್ಲಿ ಅವರಿಗೆ ನ್ಯಾಯದೊರಕಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಅಲ್ಲದೆ ಮೈಸೂರು ನಗರದ ಮಾಜಿ ಶಾಸಕ ಎಸ್.ಎ.ರಾಮದಾಸ್ ಅವರಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ಮೈಸೂರು ಮೂಲಕ ಮಹಿಳೆಗೆ ಪ್ರೇಮಕುಮಾರಿ ಪರ ಸುಪ್ರೀಂ ಕೋರ್ಟ್ನಲ್ಲಿ ಉಚಿತವಾಗಿ ವಕಲತ್ತು ಹಾಕುವ ಮೂಲಕ ಅವರಿಗೂ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಜತೆಗೆ ಹಲವು ಶಾಸಕರ ಪರವಾಗಿ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ವಕಾಲತ್ತು ವಹಿಸಿದ್ದಾರೆ.
ಇನ್ನು ಬಹಳ ಮುಖ್ಯವಾಗಿ ವಿಜಯಪಥ ಸಂಪಾದಕರಾದ ದೇವರಾಜು ಅವರು ಸಾರಿಗೆ ನೌಕರರ ಪರ ಧ್ವನಿಯಾಗಿದ್ದಕ್ಕೆ ಬಿಎಂಟಿಸಿ ಜಯನಗರ ಡಿಪೋ -4ರ ಘಟಕ ವ್ಯವಸ್ಥಾಪಕನಾಗಿದ್ದ ಪ್ರಶಾಂತ್ ಎಂಬುವನು ಡ್ಯೂಟಿ ಮಾಡುತ್ತಿದ್ದ ನಮ್ಮ ನೌಕರನಿಗೆ ಭಯಹುಟ್ಟಿಸಿ ಡ್ಯೂಟಿಗೆ ಅಡ್ಡಿಪಡಿಸಿದ್ದಾರೆ ಎಂದು ಸುಳ್ಳು ಕೇಸ್ ಹಾಕಿದ್ದರ ವಿರುದ್ಧ ಹೈ ಕೋರ್ಟ್ನಲ್ಲಿ ಉಚಿತವಾಗಿ ವಕಾಲತ್ತು ವಹಿಸಿ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಕ್ಕೆ ಸ್ಟೇ ತರುವ ಮೂಲಕ ನ್ಯಾಯದ ಪರ ನಿಂತಿದ್ದಾರೆ.
ಹೀಗೆ ಹಲವಾರು ರೀತಿಯಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದ ಸಾರಿಗೆ ನೌಕರರು ಸೇರಿದಂತೆ ಹಲವರಿಗೆ ಕಾನೂನಿಕೊಂಡಿಯಾಗಿ ನ್ಯಾಯಾಲಯಗಳಲ್ಲಿ ವಕಾಲತ್ತು ವಹಿಸಿ ನ್ಯಾಯಕೊಡಿಸಿದ್ದು, ಈಗಲೂ ಕೊಡಿಸುತ್ತಿರುವ ವಕೀಲರ ಶಿವರಾಜು ಅವರಿಗೆ ಆಂಧ್ರ ಮೂಲದ ಆರ್.ಆರ್.ಇನ್ಫ್ರಾಸ್ಟ್ರಕ್ಚರ್ ಕಂಪನಿಯ ಮುಖ್ಯ ಕಾನೂನು ಸಲಹೆಗಾರ ಹುದ್ದೆಗೆ ನೇಮಕಗೊಂಡಿದ್ದಾರೆ.
ವಕೀಲ ಶಿವರಾಜು ಅವರು ಆರ್.ಆರ್.ಇನ್ಫ್ರಾಸ್ಟ್ರಕ್ಚರ್ ಕಂಪನಿಗೆ ಸಂಬಂಧಪಟ್ಟ ಸಿವಿಲ್ ಪ್ರಕರಣಗಳ ಸಂಬಂಧ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಕಟ ಹೈ ಕೋರ್ಟ್ಗಳಲ್ಲಿ ಹಾಗೂ ಸುಪ್ರೀಂ ಕೋರ್ಟ್ಗಳಲ್ಲಿ ವಕಾಲತ್ತು ವಹಿಸಲಿದ್ದಾರೆ. ಹೀಗಾಗಿ ಇವರಿಗೆ ಕಾರ್ಯಭಾರ ಹೆಚ್ಚಾಗಿರುವುದರಿಂದ ಉಳಿದುಕೊಳ್ಳುವುದಕ್ಕೆ ಮನೆ, ಓಡಾಡುವುಕ್ಕೆ ಕಾರು ಸೇರಿದಂತೆ ಇತರೆ ಸೌಲಭ್ಯಗಳನ್ನು ಕಂಪನಿ ನೀಡಲಿದ್ದು, ಜತೆಗೆ ಕೈ ತುಂಬ ವೇತನವನ್ನು ಕೊಡಲಿದೆ.
ಈ ಹಿನ್ನೆಲೆಯಲ್ಲಿ ಕಂಪನಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕಿರುವುದರಿಂದ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನಕೊಡಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಕಾವೇರಿ ಲಾ ಅಸೋಸಿಯೇಷನ್ನ ಎಲ್ಲ ಜವಾಬ್ದಾರಿಗಳನ್ನು ನಮ್ಮ ಸಂಬಂಧಿ ವಕೀಲರಾದ ಕಾವೇರಿ ಅವರು ನೋಡಿಕೊಳ್ಳಲಿದ್ದಾರೆ.
ಇನ್ನು ಇಲ್ಲಿಯವರೆವಿಗೂ ನಾವು ಸಾರಿಗೆಯ ಕೆಲ ನೌಕರರು ಏನೆ ಅಂದುಕೊಂಡರು ಅದಕ್ಕೆ ಕಿವಿಯಾಗದೆ ನೊಂದ ನೌಕರರ ಪರವಾಗಿ ಸಾಧ್ಯವಾದಷ್ಟು ಸೇವೆ ನೀಡಿದ್ದೇವೆ ಹೀಗಾಗಿಯೇ ನಮಗೆ ಈ ಹುದ್ದೆ ಒಲಿದುಬಂದಿದೆ ಎಂದರೂ ತಪ್ಪಾಗುವುದಿಲ್ಲ ಎಂದು ವಕೀಲರು ಖುಷಿ ಹಂಚಿಕೊಂಡಿದ್ದಾರೆ.
ಸಾರಿಗೆ ನೌಕರರು ಸೇರಿದಂತೆ ನೂರಾರು ಜನರಿಗೆ ಉಚಿತವಾಗಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಿ ನೊಂದವ ಪರ ನಿಂತ ವಕೀಲರಾದ ಶಿವರಾಜು ಅವರು ನೂರಾರುಕಾಲ ಸುಖವಾಗಿ, ಇನ್ನಷ್ಟು ಉನ್ನತ ಹುದ್ದೆಗೇರಲಿ. ಅವರಿಗೆ ಸಿಕ್ಕಿರುವ ಹುದ್ದೆ ಕೀರ್ತಿಯ ಜತೆಗೆ ಅಷ್ಟೈಶ್ವರ್ಯಸಂಪನ್ನರನ್ನಾಗಿ ಮಾಡಲಿ ಎಂದು ನಾವೆಲ್ಲರೂ ಮನತುಂಬಿ ಹಾರೈಸೋಣ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...