ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ ಗಣಪತಿ ಎನ್ಕ್ಲೇವ್ ವರೆಗೆ ಪಾದಚಾರಿ ಮಾರ್ಗ ಪರಿಶೀಲನೆ ನಡೆಸುವ ವೇಳೆ ಮಾತನಾಡಿದ ಅವರು, ಮಳೆಗಾಲದ ವೇಳೆ ಒಳಚರಂಡಿಗಳ ಕವರ್ ಸ್ಲ್ಯಾಬ್ ಗಳಿಂದ ನೀರು ಉಕ್ಕಿ ಹರಿಯಲಿದೆ. ಆದ್ದರಿಂದ ರಸ್ತೆ ಭಾಗದಲ್ಲಿ ಒಳಚರಂಡಿಗಳ ಮೇಲ್ಭಾಗದಲ್ಲಿ ಅಳವಡಿಸಿರುವ ಕವರ್ ಸ್ಲ್ಯಾಬ್ ಗಳು ದುರಸ್ತಿಯಾಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಲು ಹೇಳಿದರು.
ಅನುಪಯುಕ್ತ ವಿದ್ಯುತ್ ಕಂಬಗಳ ತೆರವಿಗೆ ಸೂಚನೆ: ಇಂದಿರಾನಗರದ 100 ಅಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳಿದ್ದು, ಅದರಿಂದ ಪಾದಚಾರಿಗಳಿಗೆ ಅಡಚಣೆಯಾಗುತ್ತಿದೆ. ಆದ್ದರಿಂದ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಚನೆ ನೀಡಿದರು.
ಕಟ್ಟಡ ಮಾಲೀಕರಿಗೆ ನೋಟಿಸ್: ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಕಿದ್ದು, ಇದರಿಂದ ನಾಗರಿಕರ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸಲು ತಿಳಿಸಿದರು.
ಮೇಲ್ಸೇತುವೆ ಬಳಿ ಸ್ಕೈವಾಕ್ ನಿರ್ಮಿಸಲು ಚಿಂತನೆ: ಇಂದಿರಾನಗರದಿಂದ ಕೋರಮಂಗಲದ ಕಡೆ ಹೋಗುವ ದೊಮ್ಮಲೂರು ಮೇಲ್ಸೇತುವೆಯ ಮೇಲೆ ಪಾದಚಾರಿ ಮಾರ್ಗವಿಲ್ಲದಿರುವುದನ್ನು ಗಮನಿಸಿ, ಇದರಿಂದ ನಾಗರಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದು, ದೊಮ್ಮಲೂರು ಮೇಲ್ಸೇತುವೆ ಮೇಲೆ ಪಾದಚಾರಿ ಮಾರ್ಗ ನಿರ್ಮಾಣ ಮಾಡುವುದು ಅಥವಾ ಹಳೆಯ ವಿಮಾನ ನಿಲ್ದಾಣದ ರಸ್ತೆಗೆ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ತಿಳಿಸಿದರು.
ಪಾದಚಾರಿ ಒತ್ತುವರಿ ತೆರವಿಗೆ ತಾಕೀತು: ಪಾದಚಾರಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ, ಒತ್ತುವರಿ ತೆರವುಗೊಳಿಸಲು ಸೂಚಿಸಿದರು.
ರಸ್ತೆ ಗುಂಡಿ ಮುಚ್ಚಿ: ರಸ್ತೆಯಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಕೂಡಲೇ ಎಲ್ಲಾ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.
ಅಪಾಯಕಾರಿ ಮರಗಳ ತೆರವು ಮಾಡಿ: ರಸ್ತೆಗೆ ಚಾಚಿಕೊಂಡಿರುವ, ಒಣಗಿದ ಅಪಾಯಕಾರಿ ಮರ ಹಾಗೂ ರೆಂಬೆ -ಕೊಂಬೆಗಳನ್ನು ಗುರುತಿಸಿ ಅವುಗಳನ್ನು ಸೂಚಿಸಿದರು.
3 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ: ಪೂರ್ವ ವಲಯ ವ್ಯಾಪ್ತಿಯ ಸೋನಿ ಸಿಗ್ನಲ್ನಿಂದ ದೊಮ್ಮಲೂರು ಮೇಲ್ಸೇತುವೆ ಮೂಲಕ ಕೋರಮಂಗಲದ ಗಣಪತಿ ಎನ್ಕ್ಲೇವ್ ವರೆಗೆ 3.00 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ ನಡೆಸಿದ ಅವರು ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಸೇರಿದಂತೆ ದುರಸ್ತಿಯ ಅಗತ್ಯವಿರುವ ಜಾಗಗಳಲ್ಲಿ ದುರಸ್ತಿ ಕಾರ್ಯ, ಅನಧಿಕೃತ ಕೇಬಲ್ ಗಳ ತೆರವು, ಅನಧಿಕೃತ ಬ್ಯಾನರ್ ಗಳ ತೆರವು, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಲ್ಲುವ ಜಾಗಗಳಲ್ಲಿ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ವೇಳೆ ಜಂಟಿ ಆಯುಕ್ತರಾದ ಸರೋಜ, ಮುಖ್ಯ ಅಭಿಯಂತರರಾದ ಸುಗುಣ, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪೊಲೀಸ್ ಅಧಿಕಾರಿಗಳು, ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು, ಸೇನಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...