NEWSನಮ್ಮಜಿಲ್ಲೆಬೆಂಗಳೂರು

BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್‌ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್‌ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ ಡ್ಯೂಟಿ ರೋಟಾ ಪದ್ಧತಿ ಹಾಗೂ ಇತ್ಯಾದಿ ವಿಷಯಗಳ ಸಂಬಂಧವಾಗಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಅಂದರೆ ಸಂಸ್ಥೆಯ ನಿರ್ವಾಹಕರಾಗಿರುವವರ ಮೂಲವೇತನ 24 ಸಾವಿರ ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರ ಮೂಲವೇತ 27 ಸಾವಿರ ರೂ. ಮೂಲವೇತನದವರೆಗೆ ನಿಗದಿಪಡಿಸುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.

ನಗರದ ಶಾಂತಿನಗರದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಇದೇ ಜೂನ್‌ 12ರಂದು ನಡೆದ ಸಭೆಯಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳು ಕೆಲ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಈ ಸಭೆಯಲ್ಲಿ ಸಂಶ್ಥೆಯ ಉತ್ತರ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಹೊರತುಪಡಿಸಿ ಉಳಿದ ಎಲ್ಲ ವಲಯಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿ (ಆ), ಎಲ್ಲ ವಲಯಗಳ ವಿಭಾಗೀಯ ಸಂಚಾರ ಅಧಿಕಾರಿಗಳು (ವಾಯುವ್ಯ ವಲಯ ಹೊರತುಪಡಿಸಿ) ಹಾಜರಿದ್ದರು.

ಈ ಹಿಂದೆ ಅಂದರೆ ಇದೇ ಜೂನ್‌ 5ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲ ಘಟಕಗಳಲ್ಲಿ ಈಗಾಗಲೇ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳ ಹಾಗೂ ಎಲ್ಲ ಚಾಲನಾ ಸಿಬ್ಬಂದಿಗಳ ಅಂಕಿ-ಅಂಶವನ್ನು ಅಭ್ಯಸಿಸಿ, ಸಾಮಾನ್ಯ ಪಾಳಿ ಅನುಸೂಚಿಗಳ ಕರ್ತವ್ಯ ನಿಯೋಜನೆ ಸಂಬಂಧ ನಿರ್ವಾಹಕರಿಗೆ 24,000 ರೂ. ಹಾಗೂ ಚಾಲಕರು & ಚಾಲಕ ಕಂ ನಿರ್ವಾಹಕರಿಗೆ 27,000 ರೂ. ಮೂಲವೇತನ ಪಡೆಯುವವರನ್ನು ನಿಯೋನೆ ಮಾಡುವುದು ಸೂಕ್ತವೆಂಬ ಅಭಿಪ್ರಾಯಕ್ಕೆ ಬರಲಾಗಿದೆ.

ಅಲ್ಲದೆ ಅಧಿಕ ಹೆಚ್ಚುವರಿ ಗಂಟೆ (Over time) ಇರುವ ಸಾಮಾನ್ಯ ಪಾಳಿ ಅನುಸೂಚಿಗಳನ್ನು ಪಾಳಿ ಮತ್ತು ರಾತ್ರಿ ವಸತಿ ಪಾಳಿಯಾಗಿ ಪರಿವರ್ತಿಸಲು ಪ್ರಸ್ತಾವನೆ ನೀಡುವಂತೆ ತಿಳಿಸಲಾಯಿತು.

Light Duty Committeeಯು ಮಾರ್ಗದ ಮೇಲೆ Light Duty ಕರ್ತವ್ಯಕ್ಕೆ ಶಿಫಾರಸು ಮಾಡಿದ ಚಾಲನಾ ಸಿಬ್ಬಂದಿಗಳಿಗಾಗಿ ಘಟಕಗಳಲ್ಲಿನ ಒಟ್ಟು ಶೇ.2 ಅನುಸೂಚಿಗಳನ್ನು ಮೀಸಲಿಡುವುದು.

ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರನ್ನು, ಚಾಲಕರ ಜೇಷ್ಠತಾ ಪಟ್ಟಿಗೆ ಸೇರಿಸಿಕೊಳ್ಳುವುದು. ಸಭೆಯಲ್ಲಿ ಚರ್ಚಿಸಿದಂತೆ ಅಗತ್ಯ ಕ್ರಮ ವಹಿಸಲು ತಿಳಿಸಿದ ಮುಖ್ಯ ಸಂಚಾರ ವ್ಯವಸ್ಥಾಪಕರು ಸಭೆಯನ್ನು ಪೂರ್ಣಗೊಳಿಸಿದರು.

Megha
the authorMegha

Leave a Reply

error: Content is protected !!
Latest news
KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?... ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ ಇನ್ನಾದರೂ ಸರಿ ಸಮಾನ ವೇತನ ಕೇಳಲು ಮುಂದಾಗಿ..! ನಾಳೆ ಇಪಿಎಸ್-95, ಬಿಎಂಟಿಸಿ ‍& ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯ ಶತದಿನೋತ್ಸವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್...