KSRTC: 26 ವರ್ಷ ಸೇವೆಯ ನೌಕರರ ಮೂಲ ವೇತನ 31 ಸಾವಿರ- ಕೇವಲ 8ವರ್ಷ ಸೇವೆಯ ಸರ್ಕಾರಿ ನೌಕರರ ಮೂಲ ವೇತನ 48 ಸಾವಿರ!

- ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಇದು ಅರ್ಥವಾಗುತ್ತಿಲ್ಲವೇಕೆ- ಒಕ್ಕೂಟದ ಪದಾಧಿಕಾರಿಗಳ ಪ್ರಶ್ನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ-ನೌಕರರ ವೇತನ ಸರ್ಕಾರಿ ಅಧಿಕಾರಿಗಳು-ನೌಕರರಿಗೆ ಹೋಲಿಸಿದರೆ ಭಾರಿ ವ್ಯತ್ಯಾಸವಿದೆ ಎಂಬುವುದು ಏಕೆ ಈ ಜಂಟಿ ಸಮಿತಿ ಪದಾಧಿಕಾರಿಗಳಿಗೆ ಅರ್ಥವಾಗುತ್ತಿಲ್ಲ.
26 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚಾಲಲ ಸಿಬ್ಬಂದಿಗಳ ವೇತನ ಯಾವುದೇ ಇಂಕ್ರಿಮೆಂಟ್ ಕೂಡ ಕಟ್ಟಾಗದೆ ಕಾಲಕಾಲಕ್ಕೆ ಹೆಚ್ಚಳವಾಗುತ್ತ ಬಂದಿದ್ದರೂ ಕೂಡ ಅವರ ಮೂಲ ವೇತನ ಕೇವಲ 31,570 ರೂ.ಗಳಿದೆ.
ಅದೇ ಸರ್ಕಾರಿ ನೌಕರರ ಅದೇ ಸಿ ಗ್ರೂಪ್ನಡಿ ಅದೇ ವಿದ್ಯಾರ್ಹತೆಯಡಿ ಅಂದರೆ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿ ಒಬ್ಬ ಸರ್ಕಾರಿ ಅಧಿಕಾರಿಯ ಕಾರು ಚಾಲಕನಾಗಿ, ಸಹಾಯಕ ಅಥವಾ ಎಸ್ಡಿಎಯಾಗಿ 8 ವರ್ಷಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿರುವ ನೌಕರರ ಮೂಲ ವೇತನ ಪ್ರಸ್ತುತ 48 ಸಾವಿರವಿದೆ.
ನೋಡಿ 26 ವರ್ಷಗಳ ಹಿಂದೆ ಅದೇ ಚಾಲಕ ಅದರಲ್ಲೂ ಭಾರಿ ವಾಹನ ಚಾಲನಾ ಸಿಬ್ಬಂದಿಯಾಗಿ ಕೆಎಸ್ಆರ್ಟಸಿಗೆ ಸೇರಿ ಕೊಂಡಿರುವವರ ಮೂಲ ವೇತನ ಕೇವಲ 31,570 ರೂಪಾಯಿ ಇದೆ. ಅಂದರೆ ಯೋಚನೆ ಮಾಡಿ 26 ವರ್ಗಳಿಂದಲೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಮೂಲ ವೇತನ ಕೇವಲ 8 ವರ್ಷಗಳಲ್ಲಿ ಸರ್ಕಾರಿ ನೌಕರರಾಗಿ ಸೇರಿದ ನೌಕರರಿಗಿಂತ ಸುಮಾರು 17 ಸಾವಿರ ವ್ಯತ್ಯಾಸವಿದೆ.
ಇನ್ನು 26 ವರ್ಷಗಳ ಹಿಂದೆ ಸರ್ಕಾರಿ ಕೆಲಸಕ್ಕೆ ಸೇರಿರುವ ನೌಕರರ ಮೂಲ ವೇತನ ಬಡ್ತಿಯೊಂದಿಗೆ ಎಷ್ಟಿರಬೇಕು ಎಂಬುದನ್ನು ನೀವೆ ಯೋಚಿಸಿ. ಹೀಗಾಗಿ ಸರ್ಕಾರಿ ನೌಕರರಿಗೆ ಕೊಡುವ ವೇತನವನ್ನು ಅದೇ ಸಿ ಗ್ರೂಪ್ ಹುದ್ದೆಯಲ್ಲಿರುವ ನಮಗೂ ಕೊಡಿ ಎಂದು ಸಾರಿಗೆ ನೌಕರರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸುತ್ತಿದೆ.
ಆದರೆ, ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಲ್ಲ ಇಲ್ಲ ನಾವು ಶೇ.25 ರಷ್ಟು ವೇತನ ಹೆಚ್ಚಳ ಮಾಡಿದರೆ ಸಾಕು ಅದು ಕೂಡ ಅಗ್ರಿಮೆಂಟ್ ಆಗಬೇಕು. ಈ ಬಗ್ಗೆ ಚರ್ಚಿಸಲು ಸಭೆ ಕರೆಯಿರಿ ಎಂದು ಸಿಎಂ, ಸಾರಿಗೆ ಸಚಿವರು ಹಾಗೂ ನಿಗಮಗಳ ಎಂಡಿಗಳಿಗೆ ಮನವಿ ಪತ್ರ ಕೊಡುತ್ತಿದೆ.
ಅಂದರೆ ನಮಗೆ ಇವರ ಉದ್ದೇಶವೆ ಅರ್ಥವಾಗುತ್ತಿಲ್ಲ. ಪ್ರಸ್ತುತ ಹೊಸದಾಗಿ ಸರ್ಕಾರಿ ಕೆಲಸಕ್ಕೆ ಸೇರುವ ನೌಕರರ ಮೂಲ ವೇತನ 27 ಸಾವಿರ ಆಗಿದೆ. ಆದರೆ, ನಮ್ಮ ಸಂಸ್ಥೆಯಲ್ಲಿ 12 ವರ್ಷಳಿಂದಲೂ ಸೇವೆ ಸಲ್ಲಿಸುತ್ತಿರುವವರ ಮೂಲ ವೇತನ ಈಗಲೂ 24,980 ರೂ.ಗಳಿದೆ ಎಂದರೆ ನಂಬುತ್ತೀರ ನಂಬಲೇ ಬೇಕು.
ಕಾರಣ ಸಾರಿಗೆ ನೌಕರರಿಗೆ ಸರಿಯಾಗಿ ವೇತನ ಹೆಚ್ಚಳ ಮಾಡಿಸುವಲ್ಲಿ ಈ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿರುವ ಕೆಲವರ ತಾತ್ಸಾರದಿಂದ ಈ ವ್ಯತ್ಯಾಸ ಕಾಣುವಂತಾಗಿದೆ. ಹೀಗಾಗಿ ಇದನ್ನು ಸರಿ ಪಡಿಸುವ ಉದ್ದೇಶದಿಂದ ಸಾರಿಗೆ ನೌಕರರ ಒಕ್ಕೂಟ ನಮ್ಮ ನೌಕರರಿಗೂ ವಿದ್ಯಾರ್ಹತೆ, ಹುದ್ದೆಗೆ ತಕ್ಕ ವೇತನ ಕೊಡಿ ಎಂದು ಒತ್ತಾಯ ಮಾಡುತ್ತಿದೆ.
ಇಲ್ಲಿ ಹೇಳಬಹುದು ಈ ಹಿಂದೆ ಯಾವುದೇ ವಿದ್ಯಾರ್ಹತೆ ಇಲ್ಲದಿದ್ದರು ಕೇವಲ 3-4 ಕ್ಲಾಸ್ ಓದಿದವರನ್ನು ಕೆಲಸಕ್ಕೆ ತೆಗೆದುಕೊಂಡಿರುವವರಿಗೆ ಯಾವ ಲೆಕ್ಕಚಾರದಲ್ಲಿ ವೇತನ ಕೊಡಿಸುತ್ತೀರಿ ಎಂದು. ಇಲ್ಲಿ ಅವರ ಹುದ್ದೆಯ ಮಾನದಂಡದ ಆಧಾರದ ಮೇಲೆ ಅವರಿಗೆ ಮೂಲ ವೇತನವನ್ನು ಹುದ್ದೆಗೆ ಸರಿ ಸಮಾನವಾಗಿ ಕೊಡಬೇಕು ಎಂಬುವುದು ಒಕ್ಕೂಟದ ವಾದವಾಗಿದೆ.
ಇನ್ನು ಇದು ಕೇವಲ ಸಾರಿಗೆ ನೌಕರರಿಗೆ ಮಾತ್ರ ಈ ಮೂಲ ವೇತನದಲ್ಲಿ ವ್ಯತ್ಯಾಸವಾಗಿಲ್ಲ ಅಧಿಕಾರಿ ವರ್ಗದವರಿಗೂ ಇಲ್ಲಿ ತಾರತಮ್ಯವಾಗಿದೆ. ಆದರೆ ಇದನ್ನು ಸರಿ ಪಡಿಸಿ ಎಂದು ಏಕೋ ಅಧಿಕಾರಿಗಳು ಕೇಳುತ್ತಿಲ್ಲ. ಕೇಳಿದ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸದ್ಯ ಮೌನಕ್ಕೆ ಜಾರಿದ್ದಾರೆ. ಕಾರಣ ಗೊತ್ತಿಲ್ಲ.
ಅದೇನೆ ಇರಲಿ ಸರ್ಕಾರ ಈಗಾಗಲೇ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಮಾಡುವುದಕ್ಕೆ ಬಹುತೇಕೆ ನಿರ್ಧಾರ ಮಾಡಿದೆ. ಹೀಗಾಗಿ ನೌಕರರ ಪರವಾಗಿದ್ದೇವೆ ಎನ್ನುವ ಎಲ್ಲ ಸಂಘಟನೆಗಳು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿ ಈ 4 ವರ್ಷಕ್ಕೊಮ್ಮೆ ಆಗುತ್ತಿರುವ ಅನಾಹುತವನ್ನು ತಪ್ಪಿಸಬೇಕು ಎಂಬುವುದು ಒಕ್ಕೂಟದ ಎಲ್ಲ ಪದಾಧಿಕಾರಿಗಳು ಮನವಿ ಮಾಡುತ್ತಿದ್ದೇವೆ.
Related

You Might Also Like
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...