KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸಾರಿಗೆ ನಿಗಮಕ್ಕೆ ನೇಮಕಗೊಂಡ ನೂತನ ಚಾಲಕ ಕಂ ನಿರ್ವಾಹಕರಿಗೆ ಆಯೋಜಿಸಿದ್ದ ನಿಯೋಜನಾ ಆದೇಶ ಪತ್ರ ವಿತರಣೆ ಸಮಾರಂಭದಲ್ಲಿ ಆದೇಶ ಪತ್ರ ನೀಡಿದ ಬಳಿಕ ಮಾತನಾಡಿದರು.
ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.
ಇನ್ನು ಅಪಘಾತ ಸಂಭವಿಸದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ. ನಿಗಮವು ಕೊರೋನಾ ನಂತರ ಹಲವು ಅಡೆತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದೆ. ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ನಾಲ್ಕು ಸಾರಿಗೆ ನಿಗಮಗಳಿಂದ 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ 10 ಲಕ್ಷ ರೂ.ಗಳನ್ನು ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
KSRTC ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ (ವಾಸು) ಮಾತನಾಡಿ, ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಚಾಲನಾ ಸಿಬ್ಬಂದಿಗಳ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದೆ. ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ನಿಮ್ಮ ಆಯ್ಕೆಯಂತೆ ಘಟಕ ನಿಯೋಜನೆ ಮಾಡಲಾಗಿದೆ. ಜವಾಬ್ದಾರಿಯುತ ಹುದ್ದೆಗೆ ನೇಮಕವಾಗುತ್ತಿದ್ದು, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿಗಮವನ್ನು ಆರ್ಥಿಕವಾಗಿ ಸಧೃಡಗೊಳಿಸಬೇಕೆಂದು ಕಿವಿ ಮಾತು ಹೇಳಿದರು.
ನಿಗಮದಲ್ಲಿ 2020ನೇ ಸಾಲಿನಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಆ ನೇಮಕಾತಿ ಪ್ರಕ್ರಿಯೆಗಳು ಚಾಲನೆಯಲ್ಲಿದ್ದಾಗ ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ರಾಜ್ಯ ಸರ್ಕಾರವು 13-10-2023 ರಂದು 300 ತಾಂತ್ರಿಕ ಸಹಾಯಕ ಹಾಗೂ 2000 ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ಭರ್ತಿಮಾಡಲು ಅನುಮತಿ ನೀಡಿತು. ಆ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಜನವರಿ-2024ರಲ್ಲಿ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡಲಾಯಿತು.
2000 ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಒಟ್ಟು 25,494 ಅರ್ಜಿಗಳು ಸ್ವೀಕೃತಗೊಂಡಿದ್ದವು. ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ13954 ಅಭ್ಯರ್ಥಿಗಳು ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಅರ್ಹರಾಗಿದ್ದರು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಮ್ನಾಬಾದ್ ಚಾಲನಾ ತರಬೇತಿ ಕೇಂದ್ರ ಮತ್ತು ಕರಾರಸಾ ನಿಗಮದ ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಪರೀಕ್ಷೆ ಪಡೆಯುಲು ಅವಕಾಶ ಕಲ್ಪಿಸಲಾಗಿತ್ತು.
ಅದರಂತೆ 2672 ಅಭ್ಯರ್ಥಿಗಳು ಹುಮ್ನಾಬಾದ್ ಹಾಗೂ 11,282 ಅಭ್ಯರ್ಥಿಗಳು ಹಾಸನ ತರಬೇತಿ ಕೇಂದ್ರಗಳಲ್ಲಿ ಚಾಲನಾವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಚಾಲನಾ ವೃತ್ತಿ ಪರೀಕ್ಷೆಯು ಸಂಪೂರ್ಣ ಗಣಕೀಕೃತವಾಗಿದೆ. ಮೊದಲ ಬಾರಿಗೆ ಚಾಲನಾ ವೃತ್ತಿಪರೀಕ್ಷೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಲ್ಲಿ ಮೆರಿಟ್/ಮೀಸಲಾತಿ ಅನುಸಾರ 2000 ಹುದ್ದೆಗಳಿಗೆ 05-06-2025 ರಂದು ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿತ್ತು.
ಇದೇ ಜೂನ್ 12ರಂದು ಅಂತಿಮ ಆಯ್ಕೆ ಪಟ್ಟಿಯನ್ನು ನಿಗಮದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಚಾಲಕ ಕಂ ನಿರ್ವಾಹಕ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಜೇಷ್ಠತೆ/ ಮೆರಿಟ್ ಆಧಾರದಲ್ಲಿ ಗಣಕೀಕೃತ ಕೌನ್ಸಿಲಿಂಗ ಮೂಲಕ ವಿಭಾಗ/ ಘಟಕಗಳಿಗೆ ನೇರವಾಗಿ ನಿಯೋಜಿಸಲಾಗಿದೆ.
ಈ ಸಂಬಂಧ 16-06-2025 ರಿಂದ 19-06-2025 ರವರೆಗೆ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ವಿಭಾಗ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು 05-7-2025 ರೊಳಗಾಗಿ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. 16-06-2025 ರಂದು ಕೌನ್ಸಿಲಿಂಗ್ನಲ್ಲಿ ವಿಭಾಗ ಆಯ್ಕೆಮಾಡಿಕೊಂಡ ಅಭ್ಯರ್ಥಿಗಳ ಪೈಕಿ 50/50 ಅಂಕಗಳಿಸಿರುವ ಅಭ್ಯರ್ಥಿಗಳಿಗೆ ಇಂದು ಅಂದರೆ 17-06-2025 ರಂದು ಕೇಂದ್ರ ಕಚೇರಿಯಲ್ಲಿ ನಿಯೋಜನಾ ಆದೇಶ ವಿತರಿಸಲಾಯಿತು.
ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಕಳೆದ ಒಂದು ವರ್ಷದ ಅವಧಿಯಲ್ಲಿ 209 ಮೃತಾವಲಂಬಿತರಿಗೆ ನೌಕರಿ ನೀಡಲಾಗಿದೆ. ನಾಲ್ಕು ಸಾರಿಗೆ ನಿಗಮದಲ್ಲಿ 1,000 ಮೃತಾವಲಂಭಿತರಿಗೆ ನೇಮಕಾತಿ ನೀಡಲಾಗಿದೆ. ಒಟ್ಟಾರೆ ನಿಗಮದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ತಿಳಿಸಿದರು.
Related

You Might Also Like
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....
KSRTC: 26 ವರ್ಷ ಸೇವೆಯ ನೌಕರರ ಮೂಲ ವೇತನ 31 ಸಾವಿರ- ಕೇವಲ 8ವರ್ಷ ಸೇವೆಯ ಸರ್ಕಾರಿ ನೌಕರರ ಮೂಲ ವೇತನ 48 ಸಾವಿರ!
ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಇದು ಅರ್ಥವಾಗುತ್ತಿಲ್ಲವೇಕೆ- ಒಕ್ಕೂಟದ ಪದಾಧಿಕಾರಿಗಳ ಪ್ರಶ್ನೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ-ನೌಕರರ ವೇತನ ಸರ್ಕಾರಿ ಅಧಿಕಾರಿಗಳು-ನೌಕರರಿಗೆ...
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...