KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ 25 ಸಾವಿರ ರೂಪಾಯಿಯಂತೆ 75 ಸಾವಿರ ರೂ. ದಂಡ ವಿಧಿಸಿ ಆದೇಶಿಸ ಹೊರಡಿಸಿದೆ.
ಸಾರಿಗೆ ಬಸ್ನಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪ ಸಾಬೀತಾದ್ದರಿಂದ ಮೂವರು ಅಪರಾಧಿಗಳಿಗೆ ಅಫಜಲಪುರದ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತುಜೆಎಂಎಫ್ಸಿನ್ಯಾಯಾಲಯ 75 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ.
ನಿರ್ವಾಹಕರ ಮೇಲೆ ಹಲ್ಲೆ ಮಾಡಿದ್ದ ಅಫಜಲಪುರ ತಾಲೂಕಿನ ಚಿನಮಳ್ಳಿ ಗ್ರಾಮದ ಗುರಪ್ಪ ಲಾಲಪ್ಪ ಸಿಂಗೆ, ಆಕಾಶ ಗುರಪ್ಪ ಸಿಂಗೆ, ಜೈಭೀಮ ಗುರಪ್ಪ ಸಿಂಗೆ ಎಂಬುವರೆಗೆ ಶಿಕ್ಷೆಗೊಳಗಾದವರು.
ಈ ಮೂವವರ ವಿರುದ್ಧ ದಾಖಲಾಗಿದ್ದ ಪ್ರಕರಣದಡಿ ಹಲ್ಲೆ ಮಾಡಿರುವುದು ಸಾಬೀತಾಗಿರುವುದರಿಂದ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನೀಲ ಅಮಾಟೆ ಅವರು 75 ಸಾವಿರ ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ಆಗದಿದ್ದರೆ 6 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಮಹತ್ವದ ತೀರ್ಪುನೀಡಿ ಆದೇಶಿಸಿದ್ದಾರೆ.
ಘಟನೆ ಏನು?: 2019 ರ ಆಗಸ್ಟ್ 30 ರಂದು ರಾತ್ರಿ 8.30ರ ಸುಮಾರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಗುರಪ್ಪ ಲಾಲಪ್ಪ ಸಿಂಗೆ ಎಂಬಾತ ಕಂಡಕ್ಟರ್ನೊಂದಿಗೆ ಟಿಕೆಟ್ ತೆಗೆದುಕೊಳ್ಳುವ ವಿಷಯದಲ್ಲಿ ಗಲಾಟೆ ಮಾಡಿದ್ದು ಅಲ್ಲದೆ ಅವಾಚ್ಯವಾಗಿ ನಿಂದಿಸಿದ್ದನ್ನು.
ಅಷ್ಟಕ್ಕೆ ಸುಮ್ಮನಾಗದ ಈತ ನಂತರ ತನ್ನ ಮಕ್ಕಳಾದ ಆಕಾಶ ಮತ್ತು ಜೈಭೀಮ ಎಂಬುವವರನ್ನು ಫೋನ್ ಮಾಡಿ ಕರೆಸಿಕೊಂಡಿದ್ದನ್ನು. ಈ ನಡುವೆ ಚಿನಮಳ್ಳಿ ಹತ್ತಿರ ಬಸ್ ಬರುತ್ತಿದ್ದಂತೆ ಅದನ್ನು ನಿಲ್ಲಿಸಿ ಮೂವರು ಕಂಡಕ್ಟರ್ ಮೇಲೆ ಭೀಕರ ಹಲ್ಲೆ ನಡೆಸಿ ಸಮವಸ್ತ್ರ ಹರಿದಿದ್ದು ಅಲ್ಲದೆ ಚಪ್ಪಲಿಯಿಂದ ಹೊಡೆದಿದ್ದರು.
ಈ ಸಂಬಂಧ ದೇವಸ್ಥಾನ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಅನೀಲ ಅಮಾಟೆ ಅವರು ಅಪರಾಧಿಗಳಿಗೆ ಈ ಶಿಕ್ಷೆ ವಿಧಿಸಿ ಆದೇಶಿಸಿದದ್ದಾರೆ.
ಇನ್ನು ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಪಿ.ಜಯಶ್ರೀ ಅವರು ವಾದ ಮಂಡಿಸಿದ್ದರು.
ಇದು ಸರ್ಕಾರದ ಒಬ್ಬ ಸಾರಿಗೆ ನೌಕರರ ಮೇಲೆ ಮನಬಂದಂತೆ ಹಲ್ಲೆ ಮಾಡುವ ಕಿಡಿಗೇಡಿಗೆ ಎಂಥ ಶಿಕ್ಷೆಯಾಗುತ್ತದೆ ಎಂಬುದಕ್ಕೆ ಈ ತೀರ್ಪು ಮಹತ್ವದಾಗಿದೆ. ಅಲ್ಲದೆ ಒಬ್ಬ ಸರ್ಕಾರಿ ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂಬುದನ್ನು ಪ್ರತಿಯೊಬ್ಬರು ತಿಳಿದುಕೊಂಡು ಸಾರಿಗೆ ನೌಕರರ ಜತೆ ಸೌಹಾರ್ದಯುತವಾಗಿ, ಸೌಜನ್ಯದಿಂದ ವರ್ತಿಸಬೇಕು. ಜತೆಗೆ ಅವರು ನಿಮ್ಮ ಸೇವೆ ಮಾಡುತ್ತಿರುವುದು ಎಂಬುದನ್ನು ಅರಿಯಬೇಕು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...