NEWS

ಹಾವೇರಿ ಜಿಲ್ಲಾ ಎಸ್‌ಪಿ, ಅಪರ ಜಿಲ್ಲಾಧಿಕಾರಿ ನಗರ ರೌಂಡ್ಸ್‌

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆಯ್ದ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಬಟ್ಟೆ-ಬಂಗಾರ ಮಾರಾಟದ ಅಂಗಡಿಗಳಿಗೆ  ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆಯೇ ಹಾಗೂ ನಿಯಮ ಪಾಲಿಸಲಾಗತ್ತಿದೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ನಗರ ಸಂಚಾರ ಕೈಗೊಂಡು ಜಾಗೃತಿ ಮೂಡಿಸಿದರು.

ಎಸ್‌ಪಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್, ಪೌರಾಯುಕ್ತ ಬಸವರಾಜ ಜಿದ್ದಿ  ಅವರು ಹಾವೇರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.

ಆಯ್ದ 18 ಬಗೆಯ ವ್ಯವಹಾರ ಹಾಗೂ ಸೇವೆಗಳು ಹೊರತುಪಡಿಸಿ ವಿವಿಧ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಈ ಪೈಕಿ ಬಟ್ಟೆ ಅಂಗಡಿ, ಬಂಗಾರ ಹಾಗೂ ಬೆಳ್ಳಿ ಅಂಗಡಿಯ ವಹಿವಾಟಿಗೆ ಮಧ್ಯಾಹ್ನ 2 ರಿಂದ ರಾತ್ರಿ 8ರವರೆಗೆ, ಉಳಿದ ಅಂಗಡಿಗೆ ಬೆಳಿಗ್ಗೆ ರಾತ್ರಿ 9ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಮಾರ್ಗಸೂಚಿಯಂತೆ ಕೇವಲ ಶೇ.50ರಷ್ಟು ಕೆಲಸಗಾರರ ಬಳಕೆ, ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಜರ್ ನೀಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಷರತ್ತು ವಿಧಿಸಲಾಗಿದೆ. ಈ ಷರತ್ತುಗಳ ಪಾಲನೆ, ವಾಣಿಜ್ಯ ಚಟುವಟಿಕೆಗಳ ಆರಂಭ ಕುರಿತಂತೆ ಪರಿಶೀಲನೆ ನಡೆಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ