CRIMENEWSಬೆಂಗಳೂರು

ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿ- ಮಗುವಿಗೆ ಜನ್ಮನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತ: ಯುವಕ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಹಾಲಿ ಬೆಂಗಳೂರಿನ ನಿವಾಸಿ, ಎಲ್‌ಎಲ್‌ಎಂ ವ್ಯಾಸಂಗ ಮಾಡುತ್ತಿದ್ದ ಸಂಜನಾ (25) ಮೃತಪಟ್ಟ ಯುವತಿ.

ಪಶ್ಚಿಮ ಬಂಗಾಳದಿಂದ ತಾಯಿ ಯೊಂದಿಗೆ ಬಂದಿದ್ದ ಸಂಜನಾ ವೆಂಕಟಾಪುರದಲ್ಲಿ ನೆಲೆಸಿದ್ದು, ಸೆಕ್ಯೂರಿಟಿ ಏಜೆನ್ಸಿಯಲ್ಲಿ ತಾಯಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಇತ್ತ ಸಂಜನಾ ಎಂ.ಎಸ್‌. ರಾಮಯ್ಯ ಕಾಲೇಜಿನಲ್ಲಿ ಎಲ್‌ಎಲ್‌ಎಂ ವ್ಯಾಸಂಗ ಮಾಡುತ್ತಿದ್ದರು.

ಈ ನಡುವೆ ಸಂಜನಾಗೆ ಯುವಕನೊಬ್ಬನ ಪರಿಚಯವಾಗಿ ಸ್ನೇಹ ಬೆಳೆದಿದೆ. ನಂತರ ಅವರಿಬ್ಬರ ಮಧ್ಯೆ ಪ್ರೀತಿಯಾಗಿದ್ದು, ಆಕೆಯ ಮನೆಯಲ್ಲಿ ಆತನೂ ಲಿವಿಂಗ್‌ ಟು ಗೆದರ್‌ನಲ್ಲಿ ಇದ್ದ.

ನಂತರದ ದಿನಗಳಲ್ಲಿ ಸಂಜನಾ ಗರ್ಭಿಣಿಯಾಗಿದ್ದಾಳೆ. ಕಳೆದ ಎರಡು ಮೂರು ತಿಂಗಳ ಹಿಂದೆ ಸಂಜನಾ ಜೊತೆ ಜಗಳವಾಡಿ ಲಿವಿಂಗ್‌ ಟು ಗೆದರ್‌ನಲ್ಲಿದ್ದ ಆ ಯುವಕ ಆಕೆಯನ್ನು ಬಿಟ್ಟುಹೋಗಿದ್ದಾನೆ.

ಇನ್ನು ನಿನ್ನೆ ಮುಂಜಾನೆ ಸಂಜನಾಳಿಗೆ ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಾಯಿ ಆಸ್ಪತ್ರೆಗೆ ಹೋಗೋಣವೆಂದು ಹೇಳಿದ್ದಾರೆ. ಆದರೆ ಅದನ್ನು ಆಕೆ ನಿರಾಕರಿಸಿದ್ದಾಳೆ.

ಹೆರಿಗೆ ನೋವಿನಿಂದ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ ತೀವ್ರ ರಕ್ತಸ್ರಾವವಾದ ಪರಿಣಾಮ ನಿತ್ರಾಣಗೊಂಡು ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾಳೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ವೈಯಾಲಿ ಕಾವಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಹಸುಗೂಸನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ