CRIMENEWSಬೆಂಗಳೂರು

ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿ- ಮಗುವಿಗೆ ಜನ್ಮನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತ: ಯುವಕ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಹಾಲಿ ಬೆಂಗಳೂರಿನ ನಿವಾಸಿ, ಎಲ್‌ಎಲ್‌ಎಂ ವ್ಯಾಸಂಗ ಮಾಡುತ್ತಿದ್ದ ಸಂಜನಾ (25) ಮೃತಪಟ್ಟ ಯುವತಿ.

ಪಶ್ಚಿಮ ಬಂಗಾಳದಿಂದ ತಾಯಿ ಯೊಂದಿಗೆ ಬಂದಿದ್ದ ಸಂಜನಾ ವೆಂಕಟಾಪುರದಲ್ಲಿ ನೆಲೆಸಿದ್ದು, ಸೆಕ್ಯೂರಿಟಿ ಏಜೆನ್ಸಿಯಲ್ಲಿ ತಾಯಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಇತ್ತ ಸಂಜನಾ ಎಂ.ಎಸ್‌. ರಾಮಯ್ಯ ಕಾಲೇಜಿನಲ್ಲಿ ಎಲ್‌ಎಲ್‌ಎಂ ವ್ಯಾಸಂಗ ಮಾಡುತ್ತಿದ್ದರು.

ಈ ನಡುವೆ ಸಂಜನಾಗೆ ಯುವಕನೊಬ್ಬನ ಪರಿಚಯವಾಗಿ ಸ್ನೇಹ ಬೆಳೆದಿದೆ. ನಂತರ ಅವರಿಬ್ಬರ ಮಧ್ಯೆ ಪ್ರೀತಿಯಾಗಿದ್ದು, ಆಕೆಯ ಮನೆಯಲ್ಲಿ ಆತನೂ ಲಿವಿಂಗ್‌ ಟು ಗೆದರ್‌ನಲ್ಲಿ ಇದ್ದ.

ನಂತರದ ದಿನಗಳಲ್ಲಿ ಸಂಜನಾ ಗರ್ಭಿಣಿಯಾಗಿದ್ದಾಳೆ. ಕಳೆದ ಎರಡು ಮೂರು ತಿಂಗಳ ಹಿಂದೆ ಸಂಜನಾ ಜೊತೆ ಜಗಳವಾಡಿ ಲಿವಿಂಗ್‌ ಟು ಗೆದರ್‌ನಲ್ಲಿದ್ದ ಆ ಯುವಕ ಆಕೆಯನ್ನು ಬಿಟ್ಟುಹೋಗಿದ್ದಾನೆ.

ಇನ್ನು ನಿನ್ನೆ ಮುಂಜಾನೆ ಸಂಜನಾಳಿಗೆ ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಾಯಿ ಆಸ್ಪತ್ರೆಗೆ ಹೋಗೋಣವೆಂದು ಹೇಳಿದ್ದಾರೆ. ಆದರೆ ಅದನ್ನು ಆಕೆ ನಿರಾಕರಿಸಿದ್ದಾಳೆ.

ಹೆರಿಗೆ ನೋವಿನಿಂದ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ ತೀವ್ರ ರಕ್ತಸ್ರಾವವಾದ ಪರಿಣಾಮ ನಿತ್ರಾಣಗೊಂಡು ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾಳೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ವೈಯಾಲಿ ಕಾವಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಹಸುಗೂಸನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ