NEWSಸಿನಿಪಥ

ಸುಧಾಮೂರ್ತಿಗೆ ಟೆಲಿವಿಷನ್ ಅಸೋಸಿಯೇಷನ್ ಋಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆ ಬಿಟ್ಟು ಹೊರ ಹೋಗದಂತಹ ಪರಿಸ್ಥಿತಿ. ಇದರಿಂದ ನಿತ್ಯಜೀವನ ನಡೆಸೋದು ತುಂಬ ಕಷ್ಟದ ಸಮಯವಾಗಿದೆ. ಇನ್ನು  ಮೇ 3 ರ ತನಕ ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು ಅದು ನಾಡಿದ್ದು ಅಂತ್ಯ ಕಾಣಲಿದೆಯಾ ಎಂದು ಇನ್ನು ಕೂಡಾ ಸ್ಪಷ್ಟ ಆಗಿಲ್ಲ.

ಈ ನಡುವೆ ಶೂಟಿಂಗ್ ನಿಂತಿರುವ ಕಾರಣ ಕಿರುತೆರೆ ಕಲಾವಿದರು, ತಂತ್ರಜ್ಞರು ಕೆಲಸವಿಲ್ಲದೇ ಮನೆಯಲ್ಲಿಯೇ ಕುಳಿತಿದ್ದಾರೆ. ಇದರಿಂದ ಕಲಾವಿದರು ನಿತ್ಯ ಜೀವನ ಸಾಗಿಸಲು ತುಂಬ ತೊಂದರೆ ಪಡುತ್ತಿದ್ದಾರೆ. ಅದನ್ನು ಅರಿತ ದಾನಿಗಳು ನೆರವಿಗೆ ಬಂದಿದ್ದು ಸ್ವಲ್ಪಮಟ್ಟಿಗೆ ನೆರವಿನ ಹಸ್ತಚಾಚಿದ್ದಾರೆ.

ಒಂದೆರಡು ದಿನಗಳ ಕಾಲ ಕೆಲಸವಿಲ್ಲದೇ ಕೂರಬಹುದು, ಕಡೇ ಪಕ್ಷ ಒಂದು ವಾರ ಕಳೆಯಬಹುದು, ಆದರೆ ತಿಂಗಳುಗಟ್ಟಲೇ ಮನೆಯಲ್ಲಿ ಕೂತಿರುವುದರಿಂದ ಕೆಲಸವಿಲ್ಲದೇ ಹೊಟ್ಟೆ ತುಂಬಿಸಲು ಕೂಡಾ ಹಲವರಿಗೆ ಕಷ್ಟಸಾಧ್ಯ. ಇದೀಗ ಅಂಥ ಕಲಾವಿದರು, ತಂತ್ರಜ್ಞರ ಕಷ್ಟಕ್ಕೆ ನೆರವಾಗಿದ್ದಾರೆ ಲೇಖಕಿ, ಸಮಾಜಸೇವಕಿ ಸುಧಾ ಮೂರ್ತಿ ಅವರು.

ಸುಧಾ ಮೂರ್ತಿಯವರು ಕಷ್ಟದಲ್ಲಿರುವ ಕಿರುತೆರೆ ಕಲಾವಿದರು, ತಂತ್ರಜ್ಞರಿಗೆ ರೇಷನ್ ಕಿಟ್ ವಿತರಿಸುವ ಮೂಲಕ ಸಹಾಯ ಮಾಡಿದ್ದಾರೆ. ಬರೋಬ್ಬರಿ 3000 ಕಿಟ್ ವಿತರಿಸಿರುವ ಅವರು  ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡಿದ್ದಾರೆ. ಸುಧಾ ಮೂರ್ತಿಯವರ ಮಾಡಿರುವಂತಹ ಈ ಮಹಾತ್ಕಾರ್ಯಕ್ಕೆ ಟೆಲಿವಿಷನ್ ಅಸೋಸಿಯೇಷನ್ ಧನ್ಯವಾದ ಅರ್ಪಿಸಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ