ಸಕಲೇಶಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯವಾಗಿರುವ ಘಟನೆ ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.
ಶನಿವಾರ ಈ ಅಪಘಾತ ಸಂಭವಿಸಿದ್ದು, ಸಕಲೇಶಪುರದಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಬಸ್ ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣ ಹಾಸನ ಹಾಗೂ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇತರ ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ವಿಷಯ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವರ ಖಡಕ್ ವಾರ್ನಿಂಗ್: ರಾಜ್ಯದಲ್ಲಿ ಸರ್ಕಾರಿ ಬಸ್ಗಳ ಅಪಘಾತಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಸಾರಿಗೆ ಸಚಿವರು ನಾಲ್ಕು ನಿಗಮಗಳಿಗೂ ಖಡಕ್ ವಾರ್ನಿಂಗ್ ನೀಡಿ, ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳ ಸಮಸ್ಯೆಯಿಂದಾಗಿ ಅಪಘಾತವಾದರೆ, ಇನ್ನು ಕೆಲ ಘಟನೆಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗುತ್ತದೆ. ಹೀಗಾಗಿ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಚಿವರೇ ಖುದ್ದು ಬಿಎಂಟಿಸಿ, ಕೆಎಸ್ಆರ್ಟಿಸಿ, ಕಲ್ಯಾಣ, ವಾಯುವ್ಯ ಸಾರಿಗೆ ನಿಗಮಗಳಿಗೆ ಅನ್ವಯವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ, ತೊಂದರೆ ಉಂಟು ಮಾಡುತ್ತಾರೋ ಅಂತಹ ಚಾಲಕರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಯಾವ್ಯಾವ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ, ಸಮಸ್ಯೆ ಉಂಟು ಮಾಡಿದ್ದಾರೋ ಅಂತಹ ಚಾಲಕರ ಲೀಸ್ಟ್ ರೆಡಿ ಮಾಡಿ, ಮತ್ತೊಮ್ಮೆ ಅದೇ ಚಾಲಕರು ತಪ್ಪು ಮಾಡಿದ್ದಲ್ಲಿ ಮುಲಾಜಿಲ್ಲದೇ ಡಿಸ್ಮಿಸ್ ಮಾಡಿ ಎಂದು ಸೂಚನೆ ನೀಡಿದ್ದಾರೆ.
ಶೀಘ್ರದಲ್ಲೇ ಈ ವಿಚಾರ ಸಂಬಂಧ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದು, ಜತೆಗೆ ಕಾಯಂ ನೌಕರರನ್ನು ಹೊರತುಪಡಿಸಿ, ಅನೇಕ ಗುತ್ತಿಗೆ ನೌಕರರು ಕೂಡ ಸಾರಿಗೆ ಬಸ್ಗಳಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಚಾಲಕರು ಮಾಡುವ ತಪ್ಪಿನಿಂದ ನಿಗಮಗಳಿಗೆ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಕೂಡ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಸದ್ಯ ಬಿಎಂಟಿಸಿ (BMTC) ಚಾಲಕರಿಗಾಗಿ ಮೂರು ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದೆ. ಈಗಾಗಲೇ ಮೂರು ಗುತ್ತಿಗೆ ಕಂಪನಿಗಳಿಗೂ ಸೂಚನೆ ನೀಡಲಾಗಿದ್ದು, ಈ ಹಿಂದೆ ಎರಡಕ್ಕಿಂತ ಹೆಚ್ಚು ಬಾರಿ ಅಜಾಗರೂಕ ಚಾಲನೆ ಮಾಡಿರುವ ಚಾಲಕರನ್ನು ಗುತ್ತಿಗೆಯಿಂದ ಕೈ ಬಿಡಲು ಸೂಚಿಸಲಾಗಿದೆ. ಮುಂದೆಯೂ ಇಂತಹ ಚಾಲಕರ ವಿರುದ್ಧ ಎಚ್ಚರವಹಿಸಿ ತಪ್ಪು ಮಾಡಿದ್ದಲ್ಲಿ, ಕಠಿಣ ಕ್ರಮಕ್ಕೂ ಸೂಚನೆ ನೀಡಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...