NEWSನಮ್ಮಜಿಲ್ಲೆ

ಉಳ್ಳವರು ಇಲ್ಲದವರಿಗೆ ನೆರವು ಕಲ್ಪಿಸುವುದೇ ನಿಜ ಧರ್ಮ

ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಡಾ.ವಿ. ಆರ್. ಗೌರಿ ಶಂಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನ ಸೇವೆಯೇ ಜನಾರ್ಧನನ ಸೇವೆ ! ಉಳ್ಳವರು ಇಲ್ಲದವರಿಗೆ ಸಕಾಲದಲ್ಲಿ ನೆರವು ಕಲ್ಪಿಸಬೇಕು !! ಅದುವೇ ನಿಜವಾದ ಮಾನವ ಧರ್ಮ !! ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪದ್ಮಶೀ ಪ್ರಶಸ್ತಿ ಪುರಸ್ಕೃತ ಡಾ.ವಿ. ಆರ್. ಗೌರಿ ಶಂಕರ್ ತಿಳಿಸಿದರು.

ಇಂದು ನಗರದ ಶಂಕರಪುರಂ ಬಡಾವಣೆಯ ಶೃಂಗೇರಿ ಶಂಕರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಬಸವನಗುಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕಡು ಬಡವರು ಹಾಗೂ ಇದೇ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್-19 ಸೈನಿಕರು ಎಂದೇ ಬಣ್ಣಿಸಲಾಗುವ ಅರೆ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಪೊಲೀಸರಿಗೆ ಧವಸ-ಧಾನ್ಯಗಳ ಆಹಾರ ಕಿಟ್ ವಿತರಿಸಿ ಔಪಚಾರಿಕವಾಗಿ ಮಾತನಾಡುತ್ತಿದ್ದರು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಯಮ ಪಾಲಿಸಿ ಇಂದು ಒಂದು ಸಾವಿರ ಮಂದಿಗೆ ಆಹಾರ ಕಿಟ್‍ಗಳನ್ನು ವಿತರಿಸಿದ್ದೇವೆ. ಮುಂದಿನ ಮೂರು ದಿನಗಳಲ್ಲಿ ಅರ್ಹರ ಮನೆ-ಮನೆಗೇ ತೆರಳಿ ಐದು ಸಾವಿರ ಆಹಾರ ಕಿಟ್‍ಗಳನ್ನು ವಿತರಿಸಲು ಸಂಕಲ್ಪ ಮಾಡಿದ್ದೇವೆ ಎಂದರು.

ಸಮಯಕ್ಕಾದವನೇ ನೆಂಟ ಎಂದು ಬಣ್ಣಿಸುತ್ತಾರೆ. ಬಡವರು ಸಂಕಷ್ಟದಲ್ಲಿ ಸಿಲುಕಿರುವಾಗ ಸಹೃದಯರ ಸಹಕಾರದಿಂದ ಶ್ರೀ ಮಠವು ಈ ಪವಿತ್ರ ಕಾರ್ಯಕ್ಕೆ ಮುಂದಾಗಿದೆ. ಯಾವುದೇ ಜಾತಿ-ಮತ, ಭೇದ-ಭಾವ ಅಥವಾ ತಾರತಮ್ಯ ಇಲ್ಲದೇ ಈ ಕಾರ್ಯವನ್ನು ಸಾಕಾರಗೊಳಿಸಲು ಯೋಜಿಸಲಾಗಿದೆ ಎಂದರು.

ಶ್ರೀ ಮಠದ ಭಕ್ತಾಧಿಗಳೂ ಹಾಗೂ ಮಹಾ ದಾನಿಗಳೂ ಅದ ಟಿ ಸಿ ವೆಂಕಟೇಶ್, ಬಿ ಎಸ್ ಕಿರಣ್ ಕುಮಾರ್, ಎನ್ ನಿರಂಜನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್