ಬೆಂಗಳೂರು: ಈಗ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆ ರಾಜ್ಯದಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆ ಲಭ್ಯವಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಬಿಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸೇವೆಗೆ ಇದೇ ಜೂನ್ 20ರಂದು ಚಾಲನೆ ನೀಡಿದ್ದು, ಇದೀಗ ಈ ಬಸ್ಗಳಿಗೆ ಹತ್ತುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಹೌದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವತಿಯಿಂದ ನಗರದ ಪ್ರಮುಖ ಮಾರ್ಗಗಳ ಸಂಚಾರಕ್ಕಾಗಿ 5 ವೇಗಧೂತ ಎಕ್ಸ್ಪ್ರೆಸ್ ಬಸ್ಗಳನ್ನು ಬಿಡುಗಡೆ ಮಾಡಸಲಾಗಿದೆ. ಇದರಿಂದ ಪ್ರಯಾಣಿಕರ ಸಮಯ ಉಳಿತಾಯವಾಗುತ್ತಿದೆ. ಎಲ್ಲ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್ನಿಂದಲೇ ಹೊರಡುವುದಿಲ್ಲ. ಬದಲಾಗಿ ಬೇರೆ ಬೇರೆ ನಿಲ್ದಾಣಗಳಿಂದ ಉದ್ದೇಶಿತ ಸ್ಥಳಕ್ಕೆ ಜನರನ್ನು ತಲುಪಿಸುತ್ತಿವೆ.
ಉದಾಹರಣೆಗೆ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ (Ex 285c) ಬಸ್ ಬಿಡಲಾಗಿದೆ. ಇದರಲ್ಲಿ ನೀವು ಈ ಬಸ್ ಏರಿದರೆ ಕೇವಲ ಐದು ಸ್ಟಾಪ್ಗಳನ್ನು ಮಾತ್ರವೇ ನೀಡುತ್ತದೆ. ಮಲ್ಲೇಶ್ವರಂ ಸೆಂಟ್ರಲ್, 18ನೇ ಕ್ರಾಸ್, ಗೋವರ್ಧನ್ ಟಾಕೀಸ್, ಗೊರಗುಂಟೆ ಪಾಳ್ಯ ಮತ್ತು ಅರಿಶಿಣಕುಂಟೆ ಟೋಲ್ ಹೀಗೆ ಅತೀ ಕಡಿಮೆ ನಿಲುಗಡೆ ಮೂಲಕ ವೇಗದ ಸಾರಿಗೆ ಸೇವೆ ಜನರಿಗೆ ಲಭ್ಯವಾಗಿದೆ. ಇದರಿಂದ ಜನರಿಗೆ ಸಮಯ ಉಳಿತಾಯವಾಗುತ್ತದೆ.
ಟಿಕೆಟ್, ಮಾಸಿಕ ಪಾಸ್ಗೆ ಎಷ್ಟು?: ನಿಗದಿತ ನಿಲುಗಡೆಯಿಂದ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಒಂದು ಕಡೆ ಹತ್ತಿದರೆ ಗಮ್ಯಸ್ಥಾನ ಕೆಲವೇ ನಿಮಿಷಗಳಲ್ಲಿ ಬಂದು ಬಿಡುತ್ತದೆ. ಟಿಕೆಟ್ ದರ ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ನೆಲಮಂಗಲ ವರೆಗೆ ಒಬ್ಬರಿಗೆ 46 ರೂಪಾಯಿ ಟಿಕೆಟ್ ಶುಲ್ಕ ಇದೆ. ಇದೇ ರೀತಿ ಇನ್ನುಳಿದ ಬಸ್ಗಳಿಗೂ ಟಿಕೆಟ್ ಶುಲ್ಕ ವಿಧಿಸಲಾಗಿದೆ. ನೀವು ಮಾಸಿಕ ಪಾಸ್ ಬೇಕಾದಲ್ಲಿ ನೀವು 1500 ರೂಪಾಯಿ ಭರಿಸಬೇಕಿದೆ. ಟೋಲ್ ಮಾರ್ಗಗಳಲ್ಲಿ ಅನ್ವಯಿಸುವ ದರವನ್ನು ಪಾವತಿಸುವುದು ಕಡ್ಡಾಯ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬನಶಂಕರಿ-ಅತ್ತಿಬೆಲೆ ( ಬಸ್ ಸಂಖ್ಯೆ Ex 600F), ಬನಶಂಕರಿ ಟಿಟಿಎಂಸಿ-ಹೆರೋಹಳ್ಳಿ (Ex 213v), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ಅತ್ತಿಬೆಲೆ (Ex KBS 3!), ಮೆಜೆಸ್ಟಿಕ್ ಕೆಂಪೇಗೌಡ ಬಸ್ನಿಲ್ದಾಣ-ದೇವನಹಳ್ಳಿವರೆಗೆ (Ex 298M) ವೇಗಧೂತ ಎಕ್ಸ್ಪ್ರೆಸ್ ಬಸ್ಗಳ ಕಾರ್ಯಾಚರಣೆ ಆರಂಭವಾಗಿದೆ.
ಈ ಮೊದಲು ಮೆಜೆಸ್ಟಿಕ್ ಅಥವಾ ಬೆಂಗಳೂರು ಹೃದಯಭಾಗದಿಂದ ದೂರದ ಗಮ್ಯ ಸ್ಥಾನಗಳಿಗೆ ಹೋಗಬೇಕಾದರೆ ಪ್ರಯಾಣಿಕರಿಗೆ ಹೆಚ್ಚಿನ ಸಮಯ ಹಿಡಿಯುತ್ತಿತ್ತು. ಅಲ್ಲದೇ ಹೆಚ್ಚಿನ ನಿಲ್ದಾಣ ನಿಲುಗಡೆಗೆ ಜನ ಹೈರಾಣಾಗುತ್ತಿದ್ದರು. ಆದರೆ ಈಗ ವಿಶೇಷ ಬಸ್ ಬಿಡುಗಡೆಯಿಂದಾಗಿ ಕಡಿಮೆ ಸಮಯದಲ್ಲಿ ಒಂದೇ ಬಸ್ನಲ್ಲಿ ಗಮ್ಯಸ್ಥಳ ತಲುಪುತ್ತಿದ್ದಾರೆ. ಹೀಗಾಗಿ ಈ ಬಿಎಂಟಿಸಿ ವೇಗಧೂತ ಎಕ್ಸ್ಪ್ರೆಸ್ ಬಸ್ಗಳಿಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
Related

You Might Also Like
ಪತಿ ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೊರ್ಟ್
ಶಿವಮೊಗ್ಗ: ಪತಿಯನ್ನು ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೊಬ್ಬನಿಗೆ ಏಳುವರ್ಷ ಜೈಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಮಹತ್ವದ...
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...