NEWSಆರೋಗ್ಯನಮ್ಮರಾಜ್ಯ

KSRTC ಆರೋಗ್ಯ: ನೌಕರರಿಗೆ ಈವರೆಗೂ ಇದ್ದ ಅರೆ ಖಾಸಗಿ ವಾರ್ಡ್‌ ಸೌಲಭ್ಯಕ್ಕೆ ಕತ್ತರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಯಡಿ ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಾಗುವ ಪ್ರಕರಣಗಳಲ್ಲಿ 01.07.2025 ರಿಂದ ಜಾರಿಗೆ ಬರುವಂತೆ ಅರೆ ಖಾಸಗಿ ವಾರ್ಡ್ ಬದಲು ಸಾಮಾನ್ಯ ವಾರ್ಡ್ ಸೌಲಭ್ಯಕ್ಕೆ ಸೀಮಿತ ಮಾಡಲಾಗಿದೆ ಎಂದು ನಿರ್ದೇಶಕರು (ಸಿ&ಜಾ) ತಿಳಿಸಿದ್ದಾರೆ.

ಸಾಮಾನ್ಯ ವಾರ್ಡ್ ಸೌಲಭ್ಯ ಒದಗಿಸಲು 26.06.2025 ರಂದು ನಡೆದ ಕೆಎಸ್ಆರ್ಟಿಸಿ ಆರೋಗ್ಯ ಯೋಜನೆಯ ಮುಖ್ಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಬಗ್ಗೆ ಸಂಸ್ಥೆಯ ಎಲ್ಲ ಇಲಾಖಾ ಮುಖ್ಯಸ್ಥರು, ಎಲ್ಲ ಹಿರಿಯ- ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮಾಹಿತಿ ನೀಡಲಾಗಿದೆ.

26.06.2025 ರಂದು ನಡೆದ ಕೆಎಸ್ಆರ್ಟಿಸಿ ಆರೋಗ್ಯ ಮುಖ್ಯ ಸಮಿತಿಯ ಸಭೆಯ ನಿರ್ಣಯದಂತೆ ಸಂಸ್ಥೆಯ ಆರೋಗ್ಯ ಯೋಜನೆಯ ಮುಖ್ಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಈ ವಿಷಯವನ್ನು ತಮ್ಮ ವಿಭಾಗ ವ್ಯಾಪ್ತಿಯ ಮಾನ್ಯತೆ ಹೊಂದಿರುವ ಎಲ್ಲ ಆಸ್ಪತ್ರೆಯವರ ಗಮನಕ್ಕೆ ತಂದು 01.07.2025 ರಿಂದ ಒಳರೋಗಿಯಾಗಿ ದಾಖಲಾಗುವ ಪ್ರಕರಣಗಳಿಗೆ ಸಾಮಾನ್ಯ ವಾರ್ಡ್‌ ನಲ್ಲಿಯೇ ದರಗಳನ್ನು ವಿಧಿಸುವಂತೆ ತಿಳಿಸಿದ್ದಾರೆ.

ಒಂದು ವೇಳೆ ಸಾಮಾನ್ಯ ವಾರ್ಡ್‌ಗಿಂತ ಹೆಚ್ಚಿನ ಮಟ್ಟದ ಸೌಲಭ್ಯವನ್ನು ಐಚ್ಛಿಕವಾಗಿ ಪಡೆದುಕೊಂಡಲ್ಲಿ ವ್ಯತ್ಯಾಸದ ಮೊತ್ತವನ್ನು ನೌಕರರಿಂದ ಪಾವತಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಇನ್ನು  ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ದೀರ್ಘಕಾಲದ ಅಸ್ವಸ್ಥ ಸ್ಥಿತಿಗಳನ್ನು ಹೊಂದಿರುವ ರೋಗಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಮಾಲೋಚನೆಯನ್ನು ಸೀಮಿತಗೊಳಿಸಲು ಮತ್ತು ಮೂರು ತಿಂಗಳವರೆಗೆ ಮಾತ್ರ ಔಷಧಗಳನ್ನು ಶಿಫಾರಸು ಮಾಡಲು ಹಾಗೂ ಈ ಸಂಬಂಧ ಮೂರು ತಿಂಗಳಿಗೊಮ್ಮೆ ಮಾತ್ರ ಸಮಾಲೋಚನಾ ಶುಲ್ಕವನ್ನು ಪಡೆಯಲಾಗುವುದೆಂದು ತಿಳಿಸಲಾಗಿದೆ.

ಇನ್ನು ಮುಂದುವರಿದು, ಈ ಮಾಹಿತಿಯನ್ನು ಸಂಸ್ಥೆಯ ಎಲ್ಲ ನೌಕರರ ಗಮನಕ್ಕೆ ತರಲು ಅಗತ್ಯ ಕ್ರಮವಹಿಸಲು ಸಿಬ್ಬಂದಿ ಜಾಗೃತಾ ವಿಭಾಗದ ನಿರ್ದೇಶಕರು ಸೂಚಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ