NEWSಆರೋಗ್ಯನಮ್ಮಜಿಲ್ಲೆ

ಅಧಿಕಾರಿಗಳಿಂದ ಬಸ್ ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವಿಶೇಷ ಆಂದೋಲನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಸೂಲಿಬೆಲೆ ಸೇರಿ 6 ಬಸ್ ನಿಲ್ದಾಣಗಳಲ್ಲಿ 18 ಆಹಾರ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಆಹಾರ ಸುರಕ್ಷತೆ ಕಾಪಾಡಿಕೊಳ್ಳದಕ್ಕೆ ನೋಟಿಸ್ ನೀಡಿ, 2000 ರೂ. ದಂಡ ವಿಧಿಸಿ, ಆಹಾರ ಉದ್ಯಮದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಹಾರ ಉದ್ದಿಮೆ ಸ್ಥಳದಲ್ಲಿ ಪರಿಸರ ನೈರ್ಮಲ್ಯವಾಗಿರಬೇಕು, ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಬೇಕು, ಅವಧಿ ಮುಗಿದಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಬಾರದು ಎಂದು ತಾಕೀತು ಮಾಡಿದ್ದಾರೆ.

ಇನ್ನು ಈ ಬಗ್ಗೆ ಕರಪತ್ರ ವಿತರಿಸಿ ಅರಿವು ಮೂಡಿಸಿದ್ದು, ಈ ವಿಶೇಷ ಆಂದೋಲನದಲ್ಲಿ ಆಹಾರ ಸುರಕ್ಷತೆಯ ಅಂಕಿತಾಧಿಕಾರಿ ಡಾ.ಬಿ .ಧರ್ಮೇಂದ್ರ. ಹಾಗೂ ಆಹಾರ ಸುರಕ್ಷತಾಧಿಕಾರಿಗಳಾದ ಗೋವಿಂದರಾಜು, ನಾಗೇಶ, ಪ್ರವೀಣ್ ಭಾಗವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ