NEWSದೇಶ-ವಿದೇಶ

ತಾಂಜಾನಿಯಾದ ಮೂವರು ಸಂಸದರು ಕೊರೊನಾಗೆ ಬಲಿ, ಸಂಸತ್‌ ಅಮಾನತಿಗೆ ವಿಪಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ತಾಂಜಾನಿಯಾ: ಇಲ್ಲಿನ ಸಂಸದರು ಹಾಗೂ  ನೂರಾರು ಜನರು ಕೋವಿಡ್‌ಗೆ ತುತ್ತಾಗಿ ಪ್ರಾಣ ತೆತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೀಗಾಗಿ, ಕನಿಷ್ಠ 21 ದಿನಗಳ ಕಾಲ ಸಂಸತ್ತನ್ನು ಅಮಾನತಿನಲ್ಲಿಟ್ಟು ಎಲ್ಲ ಸಂಸದರು, ಅಧಿಕಾರಿಗಳು ಹಾಗೂ ಅವರ ಕುಟುಂಬಸ್ಥರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಪಕ್ಷ ಚಡೆಮಾದ ಮುಖ್ಯಸ್ಥ ಫ್ರೀಮನ್‌ ಎಂಬೊವೆ ಆಗ್ರಹಿಸಿದ್ದಾರೆ.

ಕೊರೊನಾಗೆ  ಮೂರು ಸಂಸದರು ತೀರಿಕೊಂಡ ಬಳಿಕ ವಿಪಕ್ಷ ಸದಸ್ಯರು ಸಂಸತ್ತನ್ನು ಅಮಾನತಿನಲ್ಲಿಟ್ಟು ಎಲ್ಲ ಸಂಸದರು, ಅಧಿಕಾರಿಗಳು ಹಾಗೂ ಅವರ ಕುಟುಂಬಸ್ಥರನ್ನು ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ 11 ದಿನಗಳಲ್ಲಿ ಮೂವರು ಸಂಸದರು ಅಸುನೀಗಿದ್ದು, ಕಾರಣ ಇನ್ನೂ ಅಸ್ಪಷ್ಟವಾಗಿದೆ.  ಸರಕಾರ ಜನಪ್ರತಿನಿಧಿಗಳ ಸಾವಿನ ಕಾರಣವನ್ನು ಮುಚ್ಚಿಟ್ಟಿದೆ. ದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದರೂ ಅದನ್ನು ನಿಯಂತ್ರಿಸುವಲ್ಲಿ ವಿಫ‌ಲವಾಗಿದೆ ಎಂದು ಆರೋಪಿಸಿದ್ದಾರೆ.

ತಾಂಜಾನಿಯಾದ ಕಾನೂನು ಮತ್ತು ಸಂಸದೀಯ ಸಚಿವ ಆಗಸ್ಟಿನ್‌ ಮಹಿಗಾ (74) ಕಳೆದ ಶುಕ್ರವಾರ ಮೃತಪಟ್ಟಿದ್ದರು. ಏ. 20ರಂದು ಗೆರ್‌ಟ್ರೂಡ್‌ ರಾಕಟರೆ ಹಾಗೂ ಏ. 29ರಂದು ರಿಚಾರ್ಡ್‌ ಎನ್‌ಡಸ್ಸಾ ಸಾವನ್ನಪ್ಪಿದ್ದರು. ಸರಕಾರ ಈ ಮೂವರು ಸಂಸದರ ಸಾವಿಗೆ ನಿಖರ ಕಾರಣವನ್ನು ಇನ್ನೂ ತಿಳಿಸಿಲ್ಲ. ಆದರೆ, ಕಳೆದ ತಿಂಗಳು ಓರ್ವ ಸಂಸದರು ಕೋವಿಡ್‌ ವೈರಸ್‌ಗೆ ತುತ್ತಾಗಿದ್ದು ಖಚಿತಪಟ್ಟಿತ್ತು.

ಈವರೆಗೆ ತಾಂಜಾನಿಯಾದಲ್ಲಿ 480ಕ್ಕೂ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಒಂಬತ್ತು ದಿನಗಳಲ್ಲಿ ಸರಕಾರ ನೀಡಿದ ಈ ಏಕೈಕ ಮಾಹಿತಿ ಕಳೆದ ಬುಧವಾರ ಹೊರಬಿದ್ದಿದೆ. ಜನರಲ್ಲಿ ಭಯ ಮೂಡಿಸಬಾರದು ಎಂದು ಅಲ್ಲಿನ ಅಧ್ಯಕ್ಷ ಜಾನ್‌ ಮಾಗುಫ‌ುಲಿ ಅವರ ಸೂಚನೆ ಮೇರೆಗೆ ಏ. 22ರಿಂದ ಕೋವಿಡ್ ಪ್ರಕರಣಗಳ ಮಾಹಿತಿಯನ್ನು ಸರಕಾರ ಬಹಿರಂಗಪಡಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಜನರು ಕೆಲಸ ಮಾಡುವುದನ್ನು ಹಾಗೂ ಚರ್ಚ್‌ ಹಾಗೂ ಮಸೀದಿಗಳಿಗೆ ಹೋಗುವುದನ್ನು ನಿಲ್ಲಿಸಿಲ್ಲ. ಹೀಗಾಗಿ, ಮಾರುಕಟ್ಟೆ, ವಾಣಿಜ್ಯ ಚಟುವಟಿಕೆ ತಡೆಯಿಲ್ಲದೆ ನಡೆದಿವೆ ಎಂದು ಆರೋಪಿಸಿದ್ದಾರೆ.

ಈ ನಡುವೆ ತಮ್ಮ ಪಕ್ಷದ ಸಂಸದರು ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳದೆ ಕನಿಷ್ಠ ಎರಡು ವಾರಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಬೇಕೆಂದು ಸೂಚನೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ