ಆರೋಗ್ಯ

ಆರೋಗ್ಯ ತಪಾಸಣೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಲಾಕ್‌ಡೌನ್‌ನಿಂದಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ  ಹಾಗೂ ಯುನೈಟೆಡ್ ಆಸ್ಪತ್ರೆ ಸಹಯೋಗದಲ್ಲಿ  ನಗರದ ನಾಲ್ಕು ಕಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದ್ದಾರೆ.

ಈ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರು ಮತ್ತು ಇನ್ನಿತರ ಕಾಯಿಲೆವುಳ್ಳ ನಗರದ ಸಾರ್ವಜನಿಕರು ತಮ್ಮ ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆ ಹಾಗೂ ಉಚಿತವಾಗಿ ಔಷಧಿಗಳನ್ನು ಪಡೆದುಕೊಳ್ಳಬಹುದಾಗಿದೆ. ಕಲಬುರಗಿ ನಗರದ ವಿವಿಧ ಬಡಾವಣೆಯ ಸಾರ್ವಜನಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಎಲ್ಲೆಲ್ಲಿವೆ ಆರೋಗ್ಯ ಕೇಂದ್ರಗಳು
ಕಲಬುರಗಿ ಮಹಾನಗರ ಪಾಲಿಕೆಯ ಹೊಸ ಕಟ್ಟಡದಲ್ಲಿ, ಕಲಬುರಗಿ ತಾರಫೈಲ್‍ನ ಕನ್ನಡ ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,  ಕಲಬುರಗಿ  ಬ್ರಹ್ಮಪೂರ ಕೃಷ್ಣ ನಗರ ಬ್ಲಾಕ್ ನಂ. 02 ದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲಬುರಗಿ ಸುಂದರ ನಗರದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮಹಾನಗರ  ಪಾಲಿಕೆ ಹೊಸ ಕಟ್ಟಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಟ್ಟು 6 ಜನ ಹೊರ ರೋಗಿಗಳು, ಸುಂದರ ನಗರ ಕೇಂದ್ರದಲ್ಲಿ ಒಟ್ಟು 53 ಹೊರ ರೋಗಿಗಳು, ತಾರಫೈಲ್ ಕೇಂದ್ರದಲ್ಲಿ ಒಟ್ಟು 30 ರೋಗಿಗಳು ಹಾಗೂ ಬ್ರಹ್ಮಪೂರ ಕೇಂದ್ರದಲ್ಲಿ ಒಟ್ಟು 25 ಹೊರ ರೋಗಿಗಳಿಗೆ ಚಿಕಿತ್ಸೆ ನೀಡಿ ಉಚಿತವಾಗಿ ಔಷಧಿ ಕೂಡಾ ನೀಡಲಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಸಹ ಇರುತ್ತದೆ. ಸಾರ್ವಜನಿಕರು ಪಾಲಿಕೆಯ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 8310964779ಗೆ ಕರೆ ಮಾಡಿ ಅಥವಾ ವಾಟ್ಸ್‍ಆಪ್ ಮೂಲಕ ಸಂದೇಶ ಕಳುಹಿಸಿ ಇದರ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

1 Comment

  • ಗರ್ಭಿಣಿಯರಿಗೆ ವೃದ್ಧರಿಗೆ ತುಂಬಾ ಅನುಕೂಲ

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್