NEWSನಮ್ಮರಾಜ್ಯಬೆಂಗಳೂರು

BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು ಬಳಿಕ ಚಾಲಕ ಹುದ್ದೆಗೇ ಅವರನ್ನು ನೇಮಿಸುವಂತೆ ಮುಖ್ಯ ಸಂಚಾರ ವ್ಯವಸ್ಥಾಪಕರು (ಆ) ಆದೇಶ ಹೊರಡಿಸಿದ್ದಾರೆ.

ಕಳೆದ 2023 ಆಗಸ್ಟ್‌ನಲ್ಲಿ ಎಂಡಿ ಅವರು ಹೊರಡಿಸಿದ್ದ ಆದೇಶ ಮೇರೆಗೆ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಲಾಗಿತ್ತು. ಪ್ರಸ್ತುತ ನಿರ್ವಾಹಕ ಕೊರತೆ ಇಲ್ಲದಿರುವುದರಿಂದ ಇಂದು ನಿಯೋಜನೆ ಆದೇಶವನ್ನು ವಾಪಸ್‌ ಪಡೆಯುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಸೋಮವಾರ ಜೂನ್‌ 30ರಂದು ಆದೇಶ ಹೊರಡಿಸಿರುವ ಮುಖ್ಯ ಸಂಚಾರ ವ್ಯವಸ್ಥಾಪಕರು ಸಕ್ಷಮ ಪ್ರಾಧಿಕಾರಿಯವರಾದ ವ್ಯವಸ್ಥಾಪಕ ನಿರ್ದೇಶಕರ ಆದೇಶದನ್ವಯ ಘಟಕಗಳಲ್ಲಿ ನಿರ್ವಾಹಕರ ಕೊರತೆಯನ್ನು ಸರಿದೂಗಿಸಲು ಚಾಲಕ ಸಿಬ್ಬಂದಿಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಪದವೃಂದ ಮತ್ತು ನೇಮಕಾತಿ) ನಿಯಮಾವಳಿ 17/1 ರ ಅಡಿಯಲ್ಲಿ ತಾತ್ಕಾಲಿಕವಾಗಿ ಚಾಲಕ-ಕಂ-ನಿರ್ವಾಹಕ ಹುದ್ದೆಯಲ್ಲಿ ಷರತ್ತು ಮತ್ತು ನಿಬಂಧನೆಗಳನ್ವಯ ನಿಯೋಜಿಸಲಾಗಿತ್ತು.

ಮುಂದುವರಿದಂತೆ. ಪ್ರಸ್ತುತ ಸಂಸ್ಥೆಗೆ ಹೊಸದಾಗಿ 2,284 ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಹಂತ ಹಂತವಾಗಿ ಎಲ್ಲ ಘಟಕಗಳಿಗೆ ಅನುಸೂಚಿಗಳ ಕಾರ್ಯಾಚರಣೆಗೆ ಅನುಗುಣವಾಗಿ, ಖಾಲಿಯಿರುವ ಹುದ್ದೆಗಳ ಅನುಸಾರ ನಿರ್ವಾಹಕರನ್ನು ನಿಯೋಜನೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯು 25-07-2025 ಕ್ಕೆ ಮುಕ್ತಾಯಗೊಳ್ಳಲಿದೆ.

ಈ ಸಂಬಂಧ, ಘಟಕಗಳಲ್ಲಿ ನಿರ್ವಾಹಕರ ಲಭ್ಯತೆಗನುಗುಣವಾಗಿ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಚಾಲಕರನ್ನು ಹಂತ ಹಂತವಾಗಿ 31-07-2025 ರೊಳಗಾಗಿ ಚಾಲಕರ ಹುದ್ದೆಯಲ್ಲಿಯೇ ನಿಯೋಜಿಸಲು ಕ್ರಮ ಕೈಗೊಳ್ಳುವುದು.

ಹೀಗಾಗಿ ಅಂತಿಮವಾಗಿ 31-07-2025 ರಿಂದ ಜಾರಿಗೆ ಬರುವಂತೆ ನಿಯಮ 17/1ರ ಅಡಿಯಲ್ಲಿ ಚಾಲಕರನ್ನು ಚಾಲಕ-ಕಂ-ನಿರ್ವಾಹಕರಾಗಿ ನಿಯೋಜಿಸಿರುವ ಎಲ್ಲ ಆದೇಶಗಳನ್ನು ಹಿಂಪಡೆಯಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ