ತಿ.ನರಸೀಪುರ: ಕೇರಳ ಮೂಲದ ಬೈಕ್ ಸವಾರನೊಬ್ಬ ಅತೀ ವೇಗವಾಗಿ ಬೈಕ್ ಓಡಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿಯೊಡೆದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೂಗೂರು ಗ್ರಾಮದಲ್ಲಿ ಮಹಾ ಶಿವರಾತ್ರಿ ದಿನವಾದ ಶುಕ್ರವಾರ ಮದ್ಯಾಹ್ನ ನಡೆದಿದೆ.
ತಾಲೂಕಿನ ಕರೋಹಟ್ಟಿ ಗ್ರಾಮದ ಲೇಟ್ ಜವರೇಗೌಡ ಎಂಬುವರ ಪುತ್ರ ಬಸವರಾಜು ಆಲಿಯಾಸ್ ಬಸವಣ್ಣ(55), ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವೆಂಕಟರಮಣಶೆಟ್ಟಿ ಎಂಬುವರ ಪುತ್ರ ಗೋವಿಂದಶೆಟ್ಟಿ(40) ಹಾಗೂ ತಾಲೂಕಿನ ಮೂಗೂರು ಹೊಸಹಳ್ಳಿ ಗ್ರಾಮದ ಲೇಟ್ ಮಾದಯ್ಯ ಎಂಬುವರ ಪತ್ನಿ ಚಿಕ್ಕಮ್ಮ(55) ಮೃತಪಟ್ಟವರು. ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಲೇಟ್ ಮಾದಶೆಟ್ಟಿ ಎಂಬುವರ ಪುತ್ರ ಮಹದೇವಶೆಟ್ಟಿ(50) ಹಾಗೂ ಬೈಕ್ ಸವಾರ ಕೇರಳದ ದಕ್ಷಿಣ ವೆಲ್ಲುವಾಂಗಡದ ಸೈಫಯನ್ನೀಷಾ ಎಂಬುವರ ಪುತ್ರ ಕೆ.ಸಲ್ಮಾನ್ ಸೇಟ್(35) ಗಂಭೀರವಾಗಿ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ನಿಂತಿದ್ದವರ ಮೇಲೆ ಬೈಕ್ ಬಿಟ್ಟ: ಪಟ್ಟಣದ ಕಡೆಯಿಂದ ಮೂಗೂರು ಗ್ರಾಮದ ರಾಷ್ಟ್ರೀಯ ಹೆದ್ಧಾರಿ 212ರ ಮಾರ್ಗವಾಗಿ ಕೇರಳಕ್ಕೆ ತೆರಳಲು ಕೆ.ಸಲ್ಮಾನ್ ಸೇಟ್ ಆರ್ನೇಟ್ ಹೊಂಡಾ ಬೈಕ್(ಕೆಎಲ್ 10, ಎ ಎಕ್ಸ್ 3938)ನಲ್ಲಿ ಅತಿವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದು ಮೂಗೂರು ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಬೈಕನ್ನು ಬಿಟ್ಟದ್ದರಿಂದ ಈ ದುರ್ಘಟನೆ ನಡೆಯಿತು.
ಮೊದಲು ರಸ್ತೆ ಬದಿಯಲ್ಲಿ ಟಿವಿಎಸ್ ಎಕ್ಸೇಲ್ ಮೊಪೆಡ್ ನಿಲ್ಲಿಸಿಕೊಂಡು ನಿಂತಿದ್ದ ಬಸವರಾಜು ಆಲಿಯಾಸ್ ಬಸವಣ್ಣ ಅವರಿಗೆ ಡಿಕ್ಕಿಯೊಡೆದ, ನಂತರ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಗೋವಿಂದಶೆಟ್ಟಿ ಹಾಗೂ ಚಿಕ್ಕಮ್ಮ ಅವರಿಗೆ ಡಿಕ್ಕಿಯೊಡೆದ ಬಳಿಕ ಮಹದೇವಶೆಟ್ಟಿ ಅವರಿಗೆ ಡಿಕ್ಕಿಯೊಡೆದು ಅವರ ಜೊತೆಯಲ್ಲಿಯೇ ತಾನೂ ಕೂಡ ಬಿದ್ದಿದ್ದಾನೆ.
ಅವಘಡದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಬೈಕಿನ ವೇಗದ ರಭಸಕ್ಕೆ ಚಿಕ್ಕಮ್ಮ ಅವರು ನಿಂತಿದ್ದ ಸ್ಥಳದಿಂದ ಹತ್ತು ಅಡಿಗಳಷ್ಟು ದೂರಕ್ಕೆ ಹಾರಿ ಹೋಗಿ ಬಿದ್ದಿದ್ದರು. ರಸ್ತೆಯ ಸೂಚನಾ ಫಲಕವೂ ಕೂಡ ಬೆಂಡಾಗಿತ್ತು. ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದ ಮಹದೇವಶೆಟ್ಟಿ ಹಾಗೂ ಕೆ.ಸಲ್ಮಾನ್ ಸೇಟ್ ಅವರಿಬ್ಬರನ್ನೂ ಅಂಬುಲೆನ್ಸ್ ನಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೋಯ್ಯಲಾಯಿತು.
ಮಹಾ ಶಿವರಾತ್ರಿ ದಿನದಂದು ಮೂವರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದನ್ನು ಕಂಡು ನಿಂತಿದ್ದ ಜನರೆಲ್ಲರೂ ಬೆಚ್ಚಿಬಿದ್ದರು. ಮೂಗೂರು ಗ್ರಾಮದಲ್ಲಿಯೂ ದುಃಖದ ಛಾಯೆ ಆವರಿಸಿತು. ಘಟನಾ ಸ್ಥಳಕ್ಕೆ ಎಎಸ್ಪಿ ಪಿ.ವಿ.ಸ್ನೇಹ, ನಂಜನಗೂಡು ಉಪ ವಿಭಾಗದ ಡಿವೈಎಸ್ಪಿ ಪ್ರಭಾಕರ್ ರಾವ್ ಶಿಂಧೆ ಹಾಗೂ ಸಿಪಿಐ ಎಂ.ಆರ್.ಲವ ಬೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಷಬ್ಬೀರ್ ಹುಸೇನ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...